Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಳ ಮೀಸಲಾತಿ ಜಾರಿಗಾಗಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದ ಮಾದಿಗ ಸಮುದಾಯ

Advertisement
ಚಂದ್ರಳ್ಳಿ ನ್ಯೂಸ್ ಹಿರಿಯೂರು:
ಪರಿಶಿಷ್ಟ ಜಾತಿಯಲ್ಲೇ ಅತ್ಯಂತ ಅನ್ಯಾಯಕ್ಕೆ ಒಳಗಾದ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಜಾರಿ ಆಗಲೇಬೇಕು ಎಂದು ಕೋಡಿಹಳ್ಳಿ ಆದಿಜಾಂಬವ ಮಠದ  ಷಡಕ್ಷರಮುನಿ ದೇಶಿಕೇಂದ್ರ  ಸ್ವಾಮೀಜಿ ಆಗ್ರಹಿಸಿದರು. ಅವರು ಶುಕ್ರವಾರ ಖಂಡೇನಹಳ್ಳಿಯಿಂದ ಹಿರಿಯೂರು ತಹಶೀಲ್ದಾರ್ ಕಚೇರಿಗೆ ಬಂದ ಒಳ ಮೀಸಲಾತಿ ಹೋರಾಟಗಾರರನ್ನು ಉದ್ದೇಶಿಸಿ ಮಾತನಾಡಿದರು.

ಪರಿಶಿಷ್ಟ ಜಾತಿಗಳಲ್ಲಿ 101 ವರ್ಗಗಳಿದ್ದು, ಅವುಗಳಲ್ಲಿ ಕೆಲವೇ ಬಲಾಢ್ಯ ಜಾತಿಗಳು ಮೀಸಲಾತಿ ಲಾಭವನ್ನು ಪಡೆಯುವುದರಿಂದ ಮಾದಿಗ ಜಾತಿಗೆ ನಿರಂತರ ಅನ್ಯಾಯ ಆಗಿದೆ ಎಂದು ಸ್ವಾಮೀಜಿ ಹೇಳಿದರು.

 ಮೂರು ದಶಕಗಳ ಸತತ ಒಳ ಮೀಸಲಾತಿ ಹೋರಾಟಕ್ಕೆ ಮಣಿದ ಸರ್ಕಾರ 2005ರಲ್ಲಿ, ಮಾದಿಗ ಜಾತಿಯ ಸ್ಥಿತಿಗತಿ ತಿಳಿಯಲು ನ್ಯಾ.ಸದಾಶಿವ ಆಯೋಗ ರಚನೆ ಮಾಡಿತು. ವರದಿ ತಯಾರಾದ ಸುಮಾರು ಐದಾರು ವರ್ಷಗಳ ನ೦ತರ 2012ರಲ್ಲಿ ವರದಿ ಸ್ವೀಕರಿಸಿ, ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು  ಸ್ವಾಮೀಜಿ ತಿಳಿಸಿದರು.

10 ವರ್ಷದ ನಂತರ ಈ ಹಿಂದಿನ ಸರ್ಕಾರ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದು ಬಿಟ್ಟರೆ ಮಾದಿಗ ಸಮುದಾಯಕ್ಕೆ ಆಶಾದಾಯಕ ಫಲಿತಾಂಶ ಸಿಗಲಿಲ್ಲ  ಎಂದು ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

ಇದೇ ವರ್ಷ ಆಗಸ್ಟ್ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪನ್ನು ನೀಡಿ, ಆಯಾ ರಾಜ್ಯ ಸರ್ಕಾರಗಳು ಒಳ ಮೀಸಲಾತಿ ಕಲ್ಪಿಸಲು ಕ್ರಮ ಕೈಗೊಳ್ಳಬಹುದು ಎಂದು ಹೇಳಿದ ನ೦ತರ ಈಗಿನ ಸರ್ಕಾರ ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೆ ತರದೆ ಮತ್ತೊಂದು ಆಯೋಗದ ರಚನೆಗೆ ಮುಂದಾಗಿರುವುದು ಸರಿಯಲ್ಲ ಹಾಗೂ ಇದು ಕಾಲದೂಡುವ ಕ್ರಮ ಎಂದು ಸ್ವಾಮೀಜಿ ಅಭಿಪ್ರಾಯಪಟ್ಟರು.

ರಾಜ್ಯ ಸರ್ಕಾರ ಅನ್ಯಾಯಕ್ಕೆ ಒಳಗಾಗಿರುವ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಜಾರಿಮಾಡಿ ನ್ಯಾಯ ಒದಗಿಸಬೇಕು ಎಂದು ಸ್ವಾಮೀಜಿ ಒತ್ತಾಯಿಸಿದರು.

ಹೋರಾಟಗಾರ ಪಾವಗಡ ಶ್ರೀರಾಮ್ ಮಾತನಾಡಿ, ಸದಾಶಿವ ಆಯೋಗದ ವರದಿ ಜಾರಿಗೆ ಬಂದರೆ ಮಾದಿಗರ ಬದುಕು ಹಸನಾಗುತ್ತದೆ ಆದ್ದರಿಂದ ಈ ಸರ್ಕಾರ ಕೂಡಲೇ ವರದಿ ಜಾರಿಗೆ ಮುಂದಾಗಬೇಕು ಎಂದು ತಿಳಿಸಿದರು. ರಾಜಸ್ತಾನ, ಪಂಜಾಬ್, ಆಂಧ್ರಪ್ರದೇಶ, ತಮಿಳುನಾಡುವಿನಲ್ಲಿ ಒಳ ಮೀಸಲಾತಿ ಜಾರಿಗೆ ಬಂದಿದೆ. ನಮ್ಮ ರಾಜ್ಯದಲ್ಲಿ ವರದಿ ಜಾರಿ ಬಗ್ಗೆ ಸರ್ಕಾರದ ಅಸಡ್ಡೆ ಏಕೆ ಎಂದು ಪ್ರಶ್ನಿಸಿದರು.

ಈಗಿನ ಸರ್ಕಾರ ಸದಾಶಿವ ಆಯೋಗದ ವರದಿ ಜಾರಿ ಮಾಡದೆ ಹೋದರೆ ಮಾದಿಗರ ಆಕ್ರೋಶಕ್ಕೆ ಕಾರಣವಾಗ ಬೇಕಾಗುತ್ತದೆ ಎಂದು ಎಚ್ಚರಿಸಿದರು. ವರದಿ ಜಾರಿ ಆಗುವ ತನಕ ಎಲ್ಲ ಇಲಾಖೆಗಳ ಹುದ್ದೆಗಳನ್ನು ತುಂಬಬಾರದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಷಡಕ್ಷರಮುನಿ ಸ್ವಾಮೀಜಿ, ಪಾವಗಡ ಶ್ರೀರಾಮ್, ಬಿ.ಜಿ.ಸಾಗರ್, ಕೆ.ಪಿ. ಶ್ರೀನಿವಾಸ್, ಬಬ್ಬೂರು ಪರಮೇಶ್ವರಪ್ಪ ಮಾದಿಗ, ಚಿದಾನಂದ್, ಶಿವಕುಮಾರ್, ಹನುಮಂತರಾಯ, ರಾಘವೇಂದ್ರ, ಮಾರುತೇಶ್, ಓಂಕಾರ್, ಕರಿಯಪ್ಪ, ಹನುಮಂತರಾಯ, ಬೆಳ್ಳಿ, ಮಹೇಶ್, ಮುಂತಾದವರು ಇದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ