Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮದಕರಿ ನಾಯಕ ಜಯಂತ್ಯೋತ್ಸವ ವಿಜೃಂಭಣೆಯ ಮೆರವಣಿಗೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ನಾಡ ದೊರೆ ರಾಜಾವೀರ ಮದಕರಿನಾಯಕನ ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾ ನಾಯಕ ಸಮಾಜದ ವತಿಯಿಂದ ಸೋಮವಾರ ನಗರದಲ್ಲಿ ವಿಜೃಂಭಣೆಯಿಂದ ಮೆರವಣಿಗೆ ನಡೆಯಿತು.

ಹೊಳಲ್ಕೆರೆ ರಸ್ತೆ ಕನಕ ವೃತ್ತದಿಂದ ಹೊರಟ ಮೆರವಣಿಗೆಯನ್ನು ಪ್ರಸನ್ನಾನಂದಸ್ವಾಮೀಜಿ, ಮಾಜಿ ಸಚಿವ ಶ್ರೀರಾಮುಲು, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಇವರುಗಳು ಉದ್ಗಾಟಿಸಿದರು.

ಡೊಳ್ಳು, ತಮಟೆ, ಉರುಮೆ, ಕಹಳೆ ವಾದ್ಯ ಮೆರವಣಿಗೆಯಲ್ಲಿ ಆಕರ್ಷಣೀಯವಾಗಿತ್ತು. ಮೆರವಣಿಗೆಯುದ್ದಕ್ಕೂ ಯುವಕರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.

ರಾಜವೀರ ಮದಕರಿನಾಯಕನ ಬೃಹತ್ ಫೋಟೋ, ಮದವೇರಿದ ಆನೆಯನ್ನು ಮದಕರಿನಾಯಕ ಮದವಡಗಿಸುತ್ತಿರುವ ಸ್ಥಬ್ತ ಚಿತ್ರ ಮೆರವಣಿಗೆಯಲ್ಲಿ ಆಕರ್ಷಣೀಯವಾಗಿತ್ತು.

ವಾಲ್ಮೀಕಿ ಭವನದ ಮುಂಭಾಗವಿರುವ ಮದಕರಿನಾಯಕನ ಪ್ರತಿಮೆಯನ್ನು ವರ್ಣರಂಜಿತವಾಗಿ ಅಲಂಕರಿಸಿ ವಿದ್ಯುತ್ ದೀಪಗಳಿಂದ ಜಗಮಗಿಸುವಂತೆ ಸಿಂಗರಿಸಲಾಗಿತ್ತು.

ಕನಕದಾಸ, ಸಂಗೊಳ್ಳಿರಾಯಣ್ಣ, ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ವೀರವನಿತೆ ಒನಕೆ ಓಬವ್ವ ಪ್ರತಿಮೆಗಳನ್ನು ಬಣ್ಣ ಬಣ್ಣದ ಹೂವುಗಳಿಂದ ಅಲಂಕರಿಸಿ ರಸ್ತೆಯುದ್ದಕ್ಕೂ ಬಾಳೆಕಂಬಗಳನ್ನು ಕಟ್ಟಲಾಗಿತ್ತು.

ಮೆರವಣಿಗೆ ಸಂದರ್ಭದಲ್ಲಿ ಸಂಚಾರಕ್ಕೆ ಅಡ್ಡಿಯುಂಟಾಗಬಾರದೆಂದು ಅಲ್ಲಲ್ಲಿ ಪೊಲೀಸ್ ಬ್ಯಾರಿಕೇಡ್‌ಗಳನ್ನಿಟ್ಟು ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿತ್ತು.

ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಮೇದಾರ ಕೇತೇಶ್ವರಸ್ವಾಮೀಜಿ, ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ಮಂಜುನಾಥ್, ನಗರಸಭೆ ಮಾಜಿ ಸದಸ್ಯ ಸಿ.ಟಿ.ರಾಜೇಶ್ ಸೇರಿದಂತೆ ನಾಯಕ ಸಮಾಜದ ಅನೇಕ ಮುಖಂಡರುಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ