Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐವತ್ತರ ಸಂಭ್ರಮದಲ್ಲಿ "ಮಗ್ಗಿಪುಸ್ತಕ"

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹರಿವರಾಸನಂ ತಾವೇ ಬರೆದ ಅವನಿ ಎಂಬ ಕಾದಂಬರಿಯನ್ನಾಧರಿಸಿ
, ಕಥೆ, ಚಿತ್ರಕಥೆ ಬರೆದು  ನಿರ್ದೇಶನ ಮಾಡಿದ ಚಿತ್ರ ಮಗ್ಗಿ ಪುಸ್ತಕ ಇದೀಗ ಯಶಸ್ವಿಯಾಗಿ ೫೦ ದಿನಗಳನ್ನು ಪೂರೈಸಿ ಮುನ್ನಡೆದಿದೆ, ಬಡ ಕುಟುಂಬದ ಅವನಿ ಎಂಬ ಹೆಣ್ಣು ಮಗಳ ಸುತ್ತ ನಡೆಯುವ ಘಟನೆಗಳನ್ನು ಇಟ್ಟುಕೊಂಡು  ಹರಿವರಾಸನಂ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

 ಮಗ್ಗಿಪುಸ್ತಕ ಚಿತ್ರದ ಐವತ್ತರ ಸಂಭ್ರಮದ ಸಮಾರಂಭ ಮಂಗಳವಾರ ನಡೆಯಿತು, ಈ ಸಂದರ್ಭದಲ್ಲಿ ಚಿತ್ರದಲ್ಲಿ ಕೆಲಸ ಮಾಡಿ ಗೆಲುವಿಗೆ

ಕಾರಣರಾದ ಕಲಾವಿದರು ಹಾಗೂ ತಂತ್ರಜ್ಞರಿಗೆ ಸ್ಮರಣಫಲಕ ನೀಡಿ ಗೌರವಿಸಲಾಯಿತು, ೪ ಆಯಾಮಗಳಲ್ಲಿ ನಡೆಯುವ ಕಥೆ  ಒಳಗೊಂಡ ಈ ಚಿತ್ರದಲ್ಲಿ ಮಕ್ಕಳ ಜತೆಗೆ ಪೋಷಕರಿಗೂ ಉತ್ತಮ ಸಂದೇಶವಿದೆ.

ನಿರ್ದೇಶಕ ಹರಿವರಾಸನಂ ತಮ್ಮ ಮೊದಲ ಪ್ರಯತ್ನದಲ್ಲೇ ಪ್ರೇಕ್ಷಕರ ನಾಡಿ ಮಿಡಿತವನ್ನರಿತು ಚಿತ್ರ ನಿರೂಪಿಸಿದ್ದಾರೆ. ಅವರ ಪ್ರಥಮ ಚಿತ್ರವೇ ೫೦ ದಿನಗಳನ್ನು ಪೂರೈಸಿದೆ.

ರಾಜ್ಯಾದ್ಯಂತ ಸಾವಿರಾರು ಸಂಖ್ಯೆಯ ವಿದ್ಯಾರ್ಥಿಗಳು, ಪೋಷಕರು ಚಿತ್ರ ವೀಕ್ಷಿಸಿ ಮೆಚ್ಚಿಕೊಂಡಿದ್ದಾರೆ. ಸದ್ಯ ಈ ಚಿತ್ರ ಉತ್ತರ ಕರ್ನಾಟಕದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಚಿನ್ನಸ್ವಾಮಿ ಫಿಲಂಸ್ ಅಡಿ ಎತಿರಾಜ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಮಗ್ಗಿ ಪುಸ್ತಕವೆಂಬುದು ಬದುಕಿನ  ಲೆಕ್ಕಾಚಾರವಾಗಿದ್ದು, ಜೀವನವೇ ಒಂದು ಮಗ್ಗಿ ಪುಸ್ತಕವಿದ್ದಂತೆ, ಇದರಲ್ಲಿ ಒಳ್ಳೆಯದನ್ನು ಕೂಡಬೇಕು,

ಕೆಟ್ಟದ್ದನ್ನು ಕಳೆಯಬೇಕು, ಅಜ್ಞಾನವನ್ನು ಗುಣಿಸಬೇಕು, ಜ್ಞಾನವನ್ನು ಭಾಗಿಸಬೇಕು ಎಂಬ ಸಂದೇಶವಿದೆ, ನಾಲ್ಕು ಆಯಾಮಗಳಲ್ಲಿ ನಡೆಯುವ ಹೈಪರ್ ಲಿಂಕ್ ಕಥೆಯಿದು.

ವೇದಿಕೆಯಲ್ಲಿ ಮಾತನಾಡಿದ ಹರಿವರಾಸನಂ ಇಡೀ ಚಿತ್ರತಂಡದ ಪರಿಶ್ರಮವೇ ಈ ಯಶಸ್ಸಿಗೆ ಕಾರಣ. ನಮ್ಮ ಚಿತ್ರ ೧೦೦ ದಿನಗಳನ್ನೂ ಪೂರೈಸಬೇಕೆಂಬ ಆಸೆಯಿದೆ, ಚಿತ್ರವೀಗ ೧೩ ಥೇಟರ್‌ಗಳಲ್ಲಿ ರನ್ ಆಗುತ್ತಿದೆ. ಮುಂದಿನ ವಾರದಿಂದ ರಜೆ ಪ್ರಾರಂಭವಾಗುತ್ತಿದ್ದು, ಮತ್ತಷ್ಟು ಥೇಟರ್‌ಗಳು ಸೇರ್ಪಡೆಯಾಗುತ್ತಿವೆ ಎಂದು ಹೇಳಿದರು.

ನಿರ್ಮಾಪಕ ಎತಿರಾಜ್ ಮಾತನಾಡುತ್ತ ನಮ್ಮ ಚಿತ್ರ ೫೦ ದಿನ ಓಡಿದ್ದೇ ಖುಷಿಯ ವಿಚಾರ, ಈ ಯಶಸ್ಸಿಗೆ ಸಹಕರಿಸಿದ ಎಲ್ಲ ತಂತ್ರಜ್ಞರು, ಕಲಾವಿದರಿಗೆ ನನ್ನ ಕೃತಜ್ಞತೆಗಳು ಎಂದು ಹೇಳಿದರು.

ಸಂಗೀತ ನಿರ್ದೇಶಕ ಯಶಸ್ ನಾಚಪ್ಪ ಮಾತನಾಡುತ್ತ ೫೦ ದಿನ ಅನ್ನೋದೇ ವಿಶೇಷ. ನನ್ನ ಮೊದಲ ಚಿತ್ರವೇ ೫೦ ದಿನ ಕಂಡಿದೆ. ೭ ಹಾಡುಗಳನ್ನು ೧೭ ಜನ ಸಿಂಗರ್ಸ್  ಹಾಡಿದ್ದಾರೆ ಎಂದು ಹೇಳಿದರೆ, ಛಾಯಾಗ್ರಾಹಕ ನಂದಕುಮಾರ್ ಮಾತನಾಡುತ್ತ ಈ ಸಕ್ಸಸ್ಸಿಗೆ ಕಾರಣ ನಮ್ಮ ನಿರ್ದೇಶಕರು. ಅವರು ಚಿತ್ರಕ್ಕಾಗಿ ತುಂಬಾ ಕಷ್ಟಪಟ್ಟಿದ್ದಾರೆ. ಈಗಿನ ದಿನಗಳಲ್ಲಿ ೫೦ ದಿನ ಓಡೋದು ತುಂಬಾ ಕಮ್ಮಿ, ನನ್ನ ಇಷ್ಟು ದಿನಗಳ ಜರ್ನಿಯಲ್ಲಿ ೫೦ ದಿನ ಕಂಡ ಮೊದಲ ಚಿತ್ರವಿದು ಎಂದು ಸಂತಸ ವ್ಯಕ್ತಪಡಿಸಿದರು.

ಸದ್ಯ ಪರೀಕ್ಷೆಗಳು ಮುಗಿಯುತ್ತಿದ್ದು, ಈವಾರ ಭೂಮಿಕಾ ಸೇರಿದಂತೆ ಮತ್ತಷ್ಟು ಸೆಂಟರ್‌ಗಳಲ್ಲಿ  ಚಿತ್ರ ರಿಲೀಸಾಗುತ್ತಿದೆ, ಚಿತ್ರದ ಕಲೆಕ್ಷನ್ ಕೂಡ ಜಾಸ್ತಿಯಾಗುವ ನಿರೀಕ್ಷೆಯಿದೆ, ಅಲ್ಲದೆ ನಮ್ಮ ಚಿತ್ರದ ಓಟಿಟಿ ಹಕ್ಕನ್ನು ಅಮೆಜಾನ್ ಸಂಸ್ಥೆ ಪಡೆದಿದೆ ಎಂದೂ ನಿರ್ದೇಶಕರು ಹೇಳಿಕೊಂಡರು.

ಬೆಂಗಳೂರು, ಮೈಸೂರು, ಮಂಗಳೂರು, ನಂಜನಗೂಡು, ಶ್ರೀರಂಗಪಟ್ಟಣ, ಹೆಚ್.ಡಿ.ಕೋಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ಸುಮಾರು ೮೦ಕ್ಕೂ ಹೆಚ್ಚು ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಮಗ್ಗಿಪುಸ್ತಕ ಚಿತ್ರದಲ್ಲಿ ಒಟ್ಟು ೭ ಹಾಡುಗಳಿದ್ದು ಎಸ್.ಎಸ್. ನಾಚಪ್ಪ ಅವರ ಸಂಗೀತ ಸಂಯೋಜನೆಯಿದೆ. ಎಂ.ಎಂ.ಕೀರವಾಣಿ ಅವರು ಚಿತ್ರದ ಹಾಡೊಂದಕ್ಕೆ ದನಿಯಾಗಿರುವುದು ವಿಶೇಷ. ಉಳಿದಂತೆ ಕನ್ನಡ ಗಾಯಕರಾದ ರಾಜೇಶ್ ಕೃಷ್ಣನ್, ವಿಜಯ ಪ್ರಕಾಶ್, ಕಂಭದ ರಂಗಯ್ಯ, ನವೀನ್ ಸಜ್ಜು, ಇಂದು ನಾಗರಾಜ್, ಗುರುರಾಜ್ ಹೊಸಕೋಟೆ, ಸೈಂಧವಿ, ವೈಕಂ ವಿಜಯಲಕ್ಷ್ಮಿ ಹಾಗೂ ರವೀಂದ್ರ ಸೊರಗಾವಿ ಸೇರಿದಂತೆ ೧೭ ಜನ ಹಾಡಿದ್ದಾರೆ.

ಈ ಚಿತ್ರವನ್ನು ಎಂ.ಪಿ. ಫಿಲಂಸ್ ಮೂಲಕ ಕೆ. ಮುನೀಂದ್ರ ಅವರು ರಿಲೀಸ್ ಮಾಡಿದ್ದರು. ಅವರ ಸಂಸ್ಥೆಯಿಂದ ಬಿಡುಗಡೆಯಾದ ಮೊದಲ ೨ ಚಿತ್ರಗಳೂ ೫೦ ದಿನ ಪೂರೈಸಿರುವುದು ಸಂತಸದ ವಿಷಯ, ಈ ಕುರಿತು ಮಾತನಾಡಿದ  ಮುನೀಂದ್ರ ಈ ಹಿಂದೆ ನಾವೇ ರಿಲೀಸ್ ಮಾಡಿದ ಕಂಗ್ರಾಚುಲೇಶನ್ಸ್ ಬ್ರದರ್ ಕೂಡ ೫೦ ದಿನ ಪ್ರದರ್ಶನ ಕಂಡಿತ್ತು, ಇದು ಎರಡನೇ ಚಿತ್ರ ಎಂದರು.

ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ರಂಜನ್ ಕಾಸರಗೋಡು, ರಾನ್ವಿ ಶೇಖರ್, ಮಹೇಶ್, ಮೋಹಿತ್ಮೈಸೂರು ರಮಾನಂದ್, ಮೂಗು ಸುರೇಶ್, ಪಂಕಜ, ಅಗಸ್ತ್ಯ ಅಲ್ಲದೆ ಸಂಗೀತ ನಿರ್ದೇಶಕರು, ಸಂಕಲನಕಾರರು ಹಾಗೂ

ಛಾಯಾಗ್ರಾಹಕರಿಗೂ ಸಹ ಈ ವೇದಿಕೆಯಲ್ಲಿ ಸ್ಮರಣಫಲಕ ವಿತರಿಸಿ ಗೌರವಿಸಲಾಯಿತು, ಮೇಘಶ್ರೀ, ರಕ್ಷಾ ಗೌಡ, ಮಿಮಿಕ್ರಿ ಗೋಪಿ, ಚಂದ್ರಪ್ರಭ, ರಘು ರಾಮನಕೊಪ್ಪ ಹಾಗೂ ಇನ್ನಿತರರು  ಚಿತ್ರದಲ್ಲಿ ನಟಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ