Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾಲಕ್ಷ್ಮಿ ಕೊಲೆ ಹಂತಕನ ಗುರುತು ಪತ್ತೆ, ಶೀಘ್ರ ಬಂಧನ-ಆಯುಕ್ತ ದಯಾನಂದ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ನಗರದ ವೈಯಾಲಿಕಾವಲ್‌ ನಿವಾಸಿ ಮಹಾಲಕ್ಷ್ಮಿ ಅವರನ್ನು ತುಂಡು ತುಂಡಾಗಿ ಕತ್ತರಿಸಿ ಕೊಲೆ ಮಾಡಿ ದೇಹದ ಭಾಗಗಳನ್ನು ಫ್ರಿಡ್ಜ್ ನಲ್ಲಿಟ್ಟು ಪರಾರಿಯಾಗಿದ್ದ ಆರೋಪಿಯ ಗುರುತು ಪತ್ತೆಯಾಗಿದ್ದು, ಶೀಘ್ರ ಬಂಧಿಸಲಾಗುವುದು ಎಂದು ನಗರ ಪೊಲೀಸ್‌‍ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕೊಲೆ ಆರೋಪಿ ಹೊರರಾಜ್ಯದವನು ಎಂಬುದು ಗೊತ್ತಾಗಿದೆ. ಆತ ನಗರದಲ್ಲಿ ವಾಸವಾಗಿದ್ದ. ಮಹಾಲಕ್ಷ್ಮಿಯನ್ನು ಆತನೇ ಕೊಲೆ ಮಾಡಿರುವ ಸಾಕ್ಷ್ಯಾಧಾರ ಲಭ್ಯವಾಗಿದೆ. ಕೊಲೆ ನಂತರ ಆತ ಹೊರರಾಜ್ಯಕ್ಕೆ ಪರಾರಿಯಾಗಿದ್ದಾನೆ ಎಂದು ತಿಳಿಸಿದರು.

ಆರೋಪಿಯ ಬಂಧನಕ್ಕಾಗಿ ವಿಶೇಷ ತಂಡಗಳನ್ನು ರಚಿಸಲಾಗಿದೆ. ತನಿಖೆ ಪ್ರಗತಿಯಲ್ಲಿದ್ದು, ಒಂದು ತಂಡ ಹೊರರಾಜ್ಯಕ್ಕೆ ಹೋಗಿ ಕಾರ್ಯೋನುಖವಾಗಿದೆ. ಎಲ್ಲಾ ದೃಷ್ಟಿಕೋನಗಳಲ್ಲೂ ತನಿಖೆ ಮಾಡುತ್ತಿದ್ದೇವೆ. ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದು, ವರದಿ ಕೈ ಸೇರಿದ ನಂತರ ಇನ್ನಷ್ಟು ಮಾಹಿತಿಗಳು ಲಭ್ಯವಾಗಲಿದೆ ಎಂದು ಅವರು ವಿವರಿಸಿದರು.

ಎಷ್ಟು ದಿನಗಳ ಹಿಂದೆ ಮಹಾಲಕ್ಷ್ಮಿಯನ್ನು ಕೊಲೆ ಮಾಡಲಾಗಿದೆ ಎಂಬುದು ವೈದ್ಯಕೀಯ ಪರೀಕ್ಷೆಯ ಹಾಗೂ ಎಫ್‌ಎಸ್‌‍ಎಲ್‌ವರದಿಗಳಿಂದ ಗೊತ್ತಾಗಲಿದೆ. ಅವುಗಳಿಗಾಗಿ ಕಾಯುತ್ತಿದ್ದೇವೆ. ವರದಿಗಳು ಬಂದ ನಂತರ ಇನ್ನಷ್ಟು ಮಾಹಿತಿಗಳು ಹೊರಬರಲಿದೆ ಎಂದರು.

ಆರೋಪಿ ಯಾವ ಕಾರಣಕ್ಕೆ ಮಹಾಲಕ್ಷ್ಮಿಯನ್ನು ಕೊಲೆ ಮಾಡಿದ್ದಾನೆ ಎಂಬುದು ಆತನ ಬಂಧನದ ಬಳಿಕವಷ್ಟೇ ಗೊತ್ತಾಗಲಿದೆ ಎಂದು ಅವರು ಹೇಳಿದರು.

ಪೊಲೀಸರ ಹುಡುಕಾಟ :ಮಹಿಳೆಯನ್ನು ಕೊಲೆ ಮಾಡಿ ತಲೆಮರೆಸಿಕೊಂಡಿರುವ ಹಂತಕನಿಗಾಗಿ ನಗರ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿ ಪತ್ತೆಗಾಗಿ ಆರು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಘಟನಾ ಸ್ಥಳದ ಸುತ್ತಮುತ್ತಲಿನ ರಸ್ತೆಗಳಲ್ಲಿರುವ ಸಿಸಿಟಿವಿಗಳ ಪರಿಶೀಲನೆ, ಕುಟುಂಬಸ್ಥರಿಂದ ಹಾಗೂ ಸ್ನೇಹಿತರಿಂದ ಹೆಚ್ಚಿನ ಮಾಹಿತಿಗಳನ್ನು ತಂಡಗಳು ಕಲೆಹಾಕುತ್ತಿವೆ.

ಮೂಲತಃ ಹೊರ ರಾಜ್ಯದವರಾದ ಮಹಾಲಕ್ಷ್ಮಿ ರಾಜ್ಯದಲ್ಲಿ ನೆಲೆಸಿದ್ದು, ಕೌಟುಂಬಿಕ ವಿಚಾರಕ್ಕೆ ಮನಸ್ತಾಪವಾಗಿ ಪತಿಯಿಂದ ದೂರವಾಗಿ ವಯ್ಯಾಲಿಕಾವಲ್ನ ವಿನಾಯಕ ನಗರದ ಪೈಪ್ಲೈನ್ ರಸ್ತೆಯಲ್ಲಿ ಮೂರು ತಿಂಗಳ ಹಿಂದೆಯಷ್ಟೇ ಬಾಡಿಗೆ ಮನೆ ಮಾಡಿಕೊಂಡು, ಮಾಲ್ವೊಂದರಲ್ಲಿ ಉದ್ಯೋಗ ಮಾಡುತ್ತಿದ್ದರು.

ಈ ನಡುವೆ ಮಹಾಲಕ್ಷ್ಮಿ(29)ಯನ್ನು ಆಕೆಯ ಮನೆಯಲ್ಲೇ ಆರೋಪಿಯು ಕೊಲೆ ಮಾಡಿ ದೇಹವನ್ನು 50ಕ್ಕೂ ಹೆಚ್ಚು ತುಂಡುತುಂಡಾಗಿ ಕತ್ತರಿಸಿ, ತರಕಾರಿ ಜೋಡಿಸುವಂತೆ ಫ್ರಿಡ್ಜನಲ್ಲಿಟ್ಟು ಸ್ಥಳದಲ್ಲಿ ಯಾವುದೇ ಸುಳಿವು ಸಿಗದಂತೆ ಚಾಲಾಕಿತನದಿಂದ ಎಸ್ಕೇಪ್ ಆಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು  ಆರೋಪಿ ಈಶಾನ್ಯ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದು  ಪೊಲೀಸರು  ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆಂದು ಹೇಳಿದರು. 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ