Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೊರರಾಜ್ಯಗಳಲ್ಲಿ ಕನ್ನಡ ಉತ್ತೇಜಿಸಲು ಕ್ರಮ-ಮಹಾಲಿಂಗಯ್ಯ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕನ್ನಡ ಅಭಿವೃದ್ಧಿ ಪ್ರಾಧಿಕಾರ  ಕರ್ನಾಟಕದಲ್ಲಿ ಕನ್ನಡ ಭಾಷೆಯ ಅನುಷ್ಠಾನ
, ಅಭಿವೃದ್ಧಿ ಮತ್ತು ರಕ್ಷಣೆಗಾಗಿ ಕಾರ್ಯನಿರ್ವಹಿಸುವ ಸರ್ಕಾರಿ ಸಂಸ್ಥೆಯಾಗಿದೆ. ಇದು ಆಡಳಿತ, ಶಿಕ್ಷಣ ಮತ್ತು ದೈನಂದಿನ ಜೀವನದಲ್ಲಿ ಕನ್ನಡದ ಬಳಕೆಯನ್ನು ಕಡ್ಡಾಯಗೊಳಿಸಲು, ಸಾಹಿತ್ಯ ಪೋಷಣೆಗೆ ಮತ್ತು ಗಡಿ/ಹೊರನಾಡುಗಳಲ್ಲಿ ಕನ್ನಡವನ್ನು ಉತ್ತೇಜಿಸಲು ಕ್ರಮ ಕೈಗೊಳ್ಳುತ್ತದೆ. ಎಂದು ಕನ್ನಡ ಜಾಗೃತಿ ಸಮಿತಿಯ ಸದಸ್ಯ. ಕೆ ಮಹಲಿಂಗಯ್ಯ ತಿಳಿಸಿದರು.

 ನಗರದ ಕನ್ನಡ ಜಾಗೃತಿ ಪರಿಷತ್ ಸಭಾಂಗಣದಲ್ಲಿ  ಅಯೋಜನೆ  ಮಾಡಲಾದ  ಪೂರ್ವಭಾವಿಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಜಾಗೃತ ಸಮಿತಿಯ ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡಜಾಗೃತ ಪರಿಷತ್ತು ಗಳ ಸಹಯೋಗದಲ್ಲಿ ರಾಜ್ಯದ ಕನ್ನಡ ಭಾಷಾ ಅಭಿವೃದ್ಧಿ ಮತ್ತು ಭಾಷಾ ನೀತಿಯ ಪರಿಣಾಮಕಾರಿ ಅನುಷ್ಠಾನ ಉದ್ದೇಶದಿಂದ ಕನ್ನಡ ಜಾಗೃತಿ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿ ಸರ್ಕಾರದ ವಿವಿದ ಇಲಾಖೆಗಳು ಸೇರಿದಂತೆ ಸಾರ್ವಜನಿಕ ಹಾಗೂ ಖಾಸಗಿ ವಲಯದ ಹಲವು  ಹಂತಗಳಲ್ಲಿ ಕನ್ನಡ ಅನುಷ್ಠಾನದ ಕುರಿತು ನಿಗಾ ವಹಿಸಬೇಕಿದೆ ಈ ಹಿನ್ನಲೆಯಲ್ಲಿ ತಾಲೂಕಿನಲ್ಲಿ ತಹಶೀಲ್ದಾರ್‌ನೇತೃತ್ವದಲ್ಲಿ ಕನ್ನಡ  ಸಮಿತಿ ರಚಿಸಲಾಗಿದೆ.

ಕನ್ನಡ ಸಂಘಟನೆಗಳನ್ನು ಒಳಗೊಂಡಂತೆ ಉಪ ಸಮಿತಿ ರಚಿಸಲಾಗಿದ್ದು, ಕೈಗಾರಿಕೆಗಳು, ಖಾಸಗಿ ಶಾಲಾ-ಕಾಲೇಜುಗಳು ಸೇರಿದಂತೆ ವಿವಿದೆಡೆ ಕನ್ನಡ ಭಾಷೆಯ ಬಳಕೆ ಹಾಗೂ ಉತ್ತೇ ಜನಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ವಿವರಿಸಿದರು.

ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿ ಕಾರದ ಕಾರ್ಯದರ್ಶಿ ಡಾ.ಸಂತೋಷ್ ಹಾನಗಲ್ಲ, ಸದಸ್ಯ ಟಿ.ತಿಮ್ಮೇಶ್ ಸೇರಿ ದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಕನ್ನಡ ಸಂಘಟನೆಗಳ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

 ಈ ಸಂದರ್ಭದಲ್ಲಿ ಕನ್ನಡ ಜಾಗೃತ ಪರಿಷತ್‌ಟ್ರಸ್ಟಿ ಕನ್ನಡಪರ ಡಾ.ಎ.ಓ.ಅವಲಮೂರ್ತಿ, ಹೋರಾಟಗಾರ ತ.ನ.ಪ್ರಭುದೇವ್, ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವನಾಯಕ್, ಕನ್ನಡ ಜಾಗೃತ ಸಮಿತಿ ಸದಸ್ಯೆ ನಾಗರತ್ನಮ್ಮ, ಕಸಾಪ ಜಿಲ್ಲಾ ಕಾರ್ಯದರ್ಶಿ ಪ್ರೊ.ಕೆ.ಆರ್. ರವಿಕಿರಣ್, ಕನ್ನಡ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ನಾಗರಾಜ್, ಶಿವರಾಜ್, ಕುಮಾರ್‌ಕನ್ನಡ ಸೇನಾ ಸಮಿತಿ ಅಧ್ಯಕ್ಷ ಜೆ.ಆರ್.ರಮೇಶ್, ಭಾರತ್ ಸೈಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಕನ್ನಡಪಕ್ಷ ಅಧ್ಯಕ್ಷ ವೆಂಕಟೇಶ್‌, ಕರವೇ ಅಧ್ಯಕ್ಷ ಹಮಾಮ್ ವೆಂಕಟೇಶ್, ಮತ್ತಿತರರು ಭಾಗವಹಿಸಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ