Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹರ್ಷಿ ವಾಲ್ಮೀಕಿಯವರ ಆದರ್ಶಗಳೇ ಸಮುದಾಯಕ್ಕೆ ಸ್ಫೂರ್ತಿ: ಶಾಸಕ ರಘುಮೂರ್ತಿ

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಅಪಾರಜ್ಞಾನ ಸಂಪತ್ತು ಹೊಂದಿದ್ದ ಮಹರ್ಷಿ ವಾಲ್ಮೀಕಿಯವರು ಸುಮಾರು ೨೪ ಸಾವಿರ ಸಂಸ್ಕೃತ ಶ್ಲೋಕಗಳನ್ನು ರಾಮಾಯಣವಾಗಿ ಪರಿವರ್ತನೆ ಮಾಡಿದಂತಹ ಮಹಾನ್ ಚೇತನ. ನಾಡಿನ ವಾಲ್ಮೀಕಿ ಸಮುದಾಯದ ಸದಾಕಾಲ ಮಹರ್ಷಿ ವಾಲ್ಮೀಕಿಯವರ ತತ್ವಾದರ್ಶಗಳ ಪರಿಪಾಲನೆಯಲ್ಲಿ ತೊಡಗಿಕೊಳ್ಳುವ ಮೂಲಕ ಮಹಾನ್‌ಶಕ್ತಿಗೆ ಗೌರವಸಮರ್ಪಣೆ ಮಾಡಬೇಕೆಂದು ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ಅವರು, ಗುರುವಾರ ನಗರದ ವಾಲ್ಮೀಕಿ ಕಲ್ಯಾಣಮಂಟಪದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ಸಮುದಾಯದ ಮುಖಂಡರು ಹಮ್ಮಿಕೊಂಡಿದ್ದ ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಸಾವಿರಾರು ವರ್ಷಗಳ ಹಿಂದೆಯೇ ಮಾನವೀಯ ಮೌಲ್ಯ, ಸಮಾನತೆ, ಸೌಹಾರ್ಧತೆಯ ಬಗ್ಗೆ ಜನರಲ್ಲಿ ಧಾರ್ಮಿಕ ಜಾಗೃತಿ ಮೂಡಿಸಿದ ಮಹರ್ಷಿ ವಾಲ್ಮೀಕಿಯವರು ಸಮಸ್ತ ಮಾನವ ಸಮಾಜಕ್ಕೆ ಆದರ್ಶಪ್ರಾಯರು. ವಾಲ್ಮೀಕಿಯವರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕೆಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ತಹಶೀಲ್ದಾರ್ ರೇಹಾನ್ ಪಾಷ, ಇಂದು ನಾವೆಲ್ಲರೂ ಮಗರ್ಷಿ ವಾಲ್ಮೀಕಿಯವರ ಜಯಂತಿ ಕಾರ್ಯಕ್ರಮದಮೂಲಕ ಅವರು ನಾಡಿಗೆ ಸಲ್ಲಿಸಿದ ಸೇವೆಗಳನ್ನು ಸ್ಮರಿಸುವ ಕಾರ್ಯ ಮಾಡಲಾಗುತ್ತಿದೆ.

ಸರ್ಕಾರ ವಾಲ್ಮೀಕಿಯವರ ಚಿಂತನೆಗಳನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಯಶಸ್ವಿಹೆಜ್ಜೆ ಇಟ್ಟಿದೆ. ಪ್ರಸ್ತುತ ವರ್ಷ ವಾಲ್ಮೀಕಿ ಸಮುದಾಯದಲ್ಲಿ ತಮ್ಮ ಸೇವಾಕಾರ್ಯದ ಮೂಲಕ ಗುರುತಿಸಿಕೊಂಡ ಐವರಿಗೆಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದರು.

ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸವಿಭಾಗದ ಸಹಪ್ರಾಧ್ಯಾಪಕಿ ಡಾ.ಜಯಮ್ಮ, ಮಹರ್ಷಿ ವಾಲ್ಮೀಕಿಯವರ ಬದುಕನ್ನು ಅರ್ಥಗರ್ಭಿತವಾಗಿ ವಿವರಿಸಿದರು.

ವಾಲ್ಮೀಕಿ ಕಲ್ಯಾಣಮಂಟಪ ಟ್ರಸ್ಟ್ ಅಧ್ಯಕ್ಷ ಎಚ್.ಎಂ.ಮಲ್ಲಪ್ಪನಾಯಕ, ಕಾರ್ಯದರ್ಶಿ ದುಗ್ಗಾವರ ತಿಪ್ಪೇಸ್ವಾಮಿ, ಚನ್ನಂಗಿರಂಗಸ್ವಾಮಿ, ಯುವ ಮುಖಂಡ ಕೆ.ಟಿ.ಕುಮಾರಸ್ವಾಮಿ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಪಿ.ತಿಪ್ಪೇಸ್ವಾಮಿ, ಬಿಜೆಪಿ ಮುಖಂಡರಾದ ಬಾಳೆಮಂಡಿರಾಮದಾಸ್, ಡಾ.ನಾಗೇಂದ್ರನಾಯಕ, ನಗರಸಭಾ ಅಧ್ಯಕ್ಷೆ ಜೈತುಂಬಿ, ಉಪಾಧ್ಯಕ್ಷೆ ಸುಜಾತ, ಸದಸ್ಯ ಎಸ್.ಜಯಣ್ಣ, ವೆಂಕಟೇಶ್, ರಮೇಶ್‌ಗೌಡ, ಕೆ.ವೀರಭದ್ರಪ್ಪ, ಸುಮಭರಮಣ್ಣ, ಸಿ.ಶ್ರೀನಿವಾಸ್, ಸಿ.ಟಿ.ವೀರೇಶ್,

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ಟಿ.ವೀರಭದ್ರಸ್ವಾಮಿ, ಸಿ.ನಾಗರಾಜು, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಂ.ಟಿ.ಶಿವರಾಜು, ಪೌರಾಯುಕ್ತ ಜಗರೆಡ್ಡ್ಪಿ, ಇಒ ಶಶಿಧರ, ಮಹಿಳಾ ಸಂಘದ ಅಧ್ಯಕ್ಷೆ ಯಶೋಧಮ್ಮ, ಕಾರ್ಯದರ್ಶಿ ಸೂರ್ಯಪ್ರಭಾ, ಎಲ್‌ಐಸಿತಿಪ್ಪೇಸ್ವಾಮಿ, ಸೌಭಾಗ್ಯಮ್ಮ, ಬಿಇಒ ಕೆ.ಎಸ್.ಸುರೇಶ್, ಸೂರನಾಯಕಜೆ.ರಘುವೀರನಾಯಕ, ಸಿ.ಟಿ.ಶ್ರೀನಿವಾಸ್, ಡಾ.ಲೋಕೇಶ್, ಸಿ.ಗುರುಸ್ವಾಮಿ, ಸಂದೀಪನಾಯಕ, ಪಿ.ತಿಪ್ಪೇಸ್ವಾಮಿ, ಬಡಗಿಪಾಪಣ್ಣ, ಡಾ.ಜಿತಿಪ್ಪೇಸ್ವಾಮಿ, ಡಾ.ಲೋಕೇಶ್, ಟಿ.ಜೆ.ತಿಪ್ಪೇಸ್ವಾಮಿ, ಗಾಡಿತಿಪ್ಪೇಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ