Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇಕ್ ಇನ್ ಕರ್ನಾಟಕದ ಹೆಮ್ಮೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೇಕ್ ಇನ್ ಕರ್ನಾಟಕದ ಹೆಮ್ಮೆ!
Anlon Technology Solutions ವತಿಯಿಂದ ರನ್‌ವೇ ಸುರಕ್ಷತಾ ವಾಹನದ ಉತ್ಪಾದನೆ ಆರಂಭ ದೊಡ್ಡಬಳ್ಳಾಪುರ ಸಮೀಪದ ಆದಿನಾರಾಯಣ ಹೊಸಹಳ್ಳಿ ಸಮೀಪದ ಕೈಗಾರಿಕಾ ವಲಯದಲ್ಲಿ Anlon Technology Solutions ಸಂಸ್ಥೆಯು ಅಭಿವೃದ್ಧಿಪಡಿಸಿರುವ, ರನ್ ವೇ ಕ್ಲೀನಿಂಗ್ ವಾಹನವನ್ನು ಉದ್ಘಾಟಿಸಿದ್ದು ಸಂತಸ ತರಿಸಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ವಿಮಾನಯಾನ ಹಾಗೂ ನಗರ ಮೂಲಸೌಕರ್ಯ ಕ್ಷೇತ್ರಗಳಿಗೆ ಅತ್ಯಂತ ಅಗತ್ಯವಾದ ಈ ವಿಶೇಷ ಯಂತ್ರಗಳನ್ನು ದೇಶದಲ್ಲೇ ಮೊದಲ ಬಾರಿಗೆ, ದೇಶೀಯವಾಗಿ ಮತ್ತು ವಿಶೇಷವಾಗಿ ಕರ್ನಾಟಕದಲ್ಲೇ ಉತ್ಪಾದಿಸುತ್ತಿರುವುದು ಮಹತ್ವದ ತಾಂತ್ರಿಕ ಸಾಧನೆ. ಈ ಸಾಧನೆಗಾಗಿ Anlon Technology Solutions ಸಂಸ್ಥೆಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು.

ಸ್ವಿಟ್ಜರ್ ಲ್ಯಾಂಡ್ ನ Bucher Municipal ಸಂಸ್ಥೆಯ ಸಹಯೋಗದಲ್ಲಿ ಜಾಗತಿಕ ತಂತ್ರಜ್ಞಾನದೊಂದಿಗೆ ವಿನ್ಯಾಸಗೊಳಿಸಿ, ತಯಾರಿಸಲಾದ ಈ ಆಧುನಿಕ ರನ್ ವೇ ಹಾಗೂ ಮ್ಯುನಿಸಿಪಲ್ ಸ್ವೀಪರ್ ಗಳು, ಲೋಹದ ತುಣುಕುಗಳು ಸೇರಿದಂತೆ, ಸಸ್ಯಸಂಬಂಧಿ ಕಸ ಮತ್ತು ಸ್ಕಿಡ್ ಗೆ ಕಾರಣವಾಗುವ ಅಂಶಗಳನ್ನು ತೆರವುಗೊಳಿಸುವ ಮೂಲಕ ಸುರಕ್ಷತಾ ಚಾಲನೆಯನ್ನು ಮಹತ್ವಪೂರ್ಣವಾಗಿ ಹೆಚ್ಚಿಸಲಿವೆ.

ಇಂತಹ ಪ್ರಯತ್ನಗಳು ಆಮದು ಅವಲಂಬನೆಯನ್ನು ಕಡಿಮೆ ಮಾಡಿ, ವಿದೇಶಿ ವಿನಿಮಯ ಉಳಿಸುವ ಜೊತೆಗೆ, ಭಾರತದ ಆಂತರಿಕ ಎಂಜಿನಿಯರಿಂಗ್ ಸಾಮರ್ಥ್ಯವನ್ನು ಮತ್ತಷ್ಟು ಗಟ್ಟಿಗೊಳಿಸುತ್ತವೆ.

ನಿಖರ ಎಂಜಿನಿಯರಿಂಗ್ ಮತ್ತು ಮೊಬೈಲಿಟಿ ಕ್ಷೇತ್ರದಲ್ಲಿ ಕರ್ನಾಟಕ ನಿರ್ಮಿಸಿಕೊಂಡಿರುವ ಬಲಿಷ್ಠ ಪರಿಸರ ವ್ಯವಸ್ಥೆಯೇ ಇಂತಹ ಉನ್ನತ ಪ್ರಭಾವದ ತಯಾರಿಕಾ ಯಶಸ್ಸುಗಳಿಗೆ ಆಧಾರವಾಗಿದೆ.



ಕೈಗಾರಿಕಾ ನೀತಿ 2025–30ರ ಅಡಿಯಲ್ಲಿ, ವಿಮಾನಯಾನ ಮತ್ತು ಸಾರ್ವಜನಿಕ ಮೂಲಸೌಕರ್ಯಗಳಂತಹ ಪ್ರಮುಖ ಕ್ಷೇತ್ರಗಳಲ್ಲಿ ಆಮದು ಪರ್ಯಾಯಕ್ಕೆ ಮುಂದಾಗುವ ಸಂಸ್ಥೆಗಳಿಗೆ ನಮ್ಮ ಸರ್ಕಾರದ ಬೆಂಬಲ ಮುಂದುವರಿಯಲಿದೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ