Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತದಾನ ಕಡ್ಡಾಯವಾಗಲಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮತದಾನ ಕಡ್ಡಾಯವಾಗಲ-ಪ್ರಜಾಪ್ರಭುತ್ವಕ್ಕೆ ನಿಜವಾದ ಗೌರವ ಸಿಗಲಿ. ಪ್ರಜಾಪ್ರಭುತ್ವ ದೇಶದಲ್ಲಿ ಜನರೇ ಪ್ರಭುಗಳು ಎಂದು ನಾವು ಹೆಮ್ಮೆಪಡುವೆವು. ಆದರೆ ಆ ಪ್ರಭುತ್ವದ ನಿಜವಾದ ಶಕ್ತಿ ಮತದಾನದ ಮೂಲಕವೇ ಹೊರಹೊಮ್ಮುತ್ತದೆ. ಸರ್ಕಾರಗಳನ್ನು ಆಯ್ಕೆ ಮಾಡುವ ಹಕ್ಕು ಮತ್ತು ಅಧಿಕಾರ ಜನರ ಕೈಯಲ್ಲಿದೆ. ಆದರೂ, ಇಂದಿನ ಪರಿಸ್ಥಿತಿಯಲ್ಲಿ ಅನೇಕ ಮತದಾರರು ಮತದಾನ ದಿನ ಬಂದಾಗ ನಿರ್ಲಕ್ಷ್ಯದಿಂದ ಮನೆಯಲ್ಲೇ ಉಳಿದುಕೊಳ್ಳುತ್ತಿರುವುದು ಪ್ರಜಾಪ್ರಭುತ್ವದ ಆತ್ಮಕ್ಕೆ ಧಕ್ಕೆ ತರುವಂತಾಗಿದೆ.

ಸರ್ಕಾರಗಳು ಜನರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿವೆ. ಉಚಿತ ಯೋಜನೆಗಳು, ಆರೋಗ್ಯ ಸೇವೆಗಳು, ಆಹಾರ ಧಾನ್ಯಗಳು, ಶಿಕ್ಷಣ, ರಸ್ತೆ ಮತ್ತು ಅನೇಕ ಕಲ್ಯಾಣ ಕಾರ್ಯಕ್ರಮಗಳು. ಆದರೆ ಈ ಸೌಲಭ್ಯಗಳನ್ನು ಪಡೆಯುವ ಜನರಲ್ಲಿ ಹಲವರು ತಮ್ಮ ಮೂಲಭೂತ ಪ್ರಜಾಪ್ರಭುತ್ವ ಕರ್ತವ್ಯವಾದ ಮತದಾನ ಮಾಡುವುದನ್ನೇ ಮರೆತುಬಿಡುತ್ತಾರೆ.

ಆದ್ದರಿಂದ ಸರ್ಕಾರಗಳು ಗಂಭೀರವಾಗಿ ಯೋಚಿಸಬೇಕಾದ ಸಮಯ ಬಂದಿದೆ. ಮತದಾನ ಕಡ್ಡಾಯ ಮಾಡುವ ಕಾನೂನು ಜಾರಿಗೆ ತರಬೇಕು. ಯಾವ ಮತದಾರರು ಮತ ಹಾಕುವುದಿಲ್ಲವೋ, ಅವರಿಗೆ ಕೆಲವು ಸರ್ಕಾರಿ ಸೌಲಭ್ಯಗಳನ್ನು ನಿರ್ಬಂಧಿಸುವಂತಹ ಕಠಿಣ ನಿಯಮಗಳನ್ನು ಜಾರಿಗೆ ತರುವ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಇದು ಶಿಕ್ಷೆ ನೀಡುವ ಉದ್ದೇಶದಿಂದಲ್ಲ, ಜನರಲ್ಲಿ ಜವಾಬ್ದಾರಿ ಮತ್ತು ಪ್ರಜಾಪ್ರಭುತ್ವದ ಅರಿವು ಹೆಚ್ಚಿಸುವ ಉದ್ದೇಶದಿಂದ ಆಗಬೇಕು.

ಮತದಾನ ದಿನವೆಂದರೆ ಕೇವಲ ಒಂದು ರಜೆ ದಿನವಲ್ಲ. ಅದು ದೇಶದ ಭವಿಷ್ಯ ನಿರ್ಧಾರವಾಗುವ ಮಹತ್ವದ ಕ್ಷಣ. ಪ್ರತಿಯೊಬ್ಬ ನಾಗರಿಕನೂ ತನ್ನ ಮತದಾನದ ಹಕ್ಕನ್ನು ಉಪಯೋಗಿಸಿದಾಗ ಮಾತ್ರ ಪ್ರಜಾಪ್ರಭುತ್ವ ನಿಜವಾದ ಅರ್ಥದಲ್ಲಿ ಬಲವಾಗುತ್ತದೆ.



ಆದ್ದರಿಂದ ಸರ್ಕಾರಗಳಿಗೆ ಸ್ಪಷ್ಟವಾದ ಸಂದೇಶ ಒಂದೇ: ಮತದಾನ ಕಡ್ಡಾಯವಾಗಲಿ. ಮತ ಹಾಕದವರಿಗೆ ಸರ್ಕಾರಿ ಸೌಲಭ್ಯಗಳಿಗೆ ನಿರ್ಬಂಧ ಇರಲಿ. ಆಗ ಮಾತ್ರ ಪ್ರಜಾಪ್ರಭುತ್ವಕ್ಕೆ ನಿಜವಾದ ಗೌರವ ಸಿಗುತ್ತದೆ.
ಲೇಖನ
:ಶ್ರೀನಿವಾಸ್ ಕೆ ಟಿ, ಸಮಾಜ ಚಿಂತಕ, ಬೆಂಗಳೂರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ