Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಾನಿಗಳ ನೆರವಿನಿಂದ ಸಮಾಜದ ಏಳಿಗೆಗೆ ಪ್ರಯತ್ನಿಸಿ: ಮಂಜುಳಾ ಶ್ರೀಕಾಂತ್

Advertisement
ಚಂದ್ರವಳ್ಳಿ ನ್ಯೂಸ್, ನಾಯಕನಹಟ್ಟಿ:
ಪ್ರಸ್ತುತ ದಿನಮಾನಗಳಲ್ಲಿ ಸಮಾಜದ ಎಲ್ಲ ಅವಶ್ಯಕತೆಗಳನ್ನು ಕೇವಲ ಸರ್ಕಾರದಿಂದ ಪೂರೈಸಲು ಸಾಧ್ಯವಿಲ್ಲ. ಹೀಗಾಗಿ ದಾನಿಗಳ ನೆರವು ಪಡೆದು ಸಮಾಜದ ಏಳಿಗೆಗೆ ಪ್ರಯತ್ನಿಸಬೇಕಿದೆ ಎಂದು ಪಟ್ಟಣ ಪಂಚಾಯತಿ ಅಧ್ಯಕ್ಷೆ ಟಿ.ಮಂಜುಳಾ ಶ್ರೀಕಾಂತ್ ಅಭಿಪ್ರಾಯಪಟ್ಟರು.

ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸೋಮವಾರ ಬೆಂಗಳೂರಿನ ಉದ್ಯಮಿ ಮೋಹನ್‍ಕುಮಾರ್ ದಾನವಾಗಿ ನೀಡಿದ್ದ 300 ಬ್ಯಾಗ್‍ಗಳನ್ನು ವಿತರಿಸಿ ಅವರು ಮಾತನಾಡಿದರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣವು ಅತ್ಯಂತ ಮಹತ್ವತೆಯಿಂದ ಕೂಡಿದೆ. ಹೀಗಾಗಿ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹೊಂದಲು ದಾನಿಗಳು ಅಗತ್ಯ ನೆರವು ನೀಡಬೇಕು. ಸರ್ಕಾರವೂ ಸಹ ಮಕ್ಕಳ ವಿಧ್ಯಾಭ್ಯಾಸಕ್ಕೆ ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ. ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ, ಶೂಭಾಗ್ಯ, ಸಮವಸ್ತ್ರಮೊಟ್ಟೆ ವಿತರಣೆ ಇವುಗಳೆಲ್ಲವನ್ನು ಸದ್ಭಳಕೆ ಮಾಡಿಕೊಂಡು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದರು.

ನಮ್ಮ ಸುತ್ತಮುತ್ತಲಿನ ಹಳ್ಳಿಗಳ ಜನರು ಬಹುತೇಕ ಕೂಲಿ ವೃತ್ತಿಯಿಂದ ಜೀವನ ನಡೆಸುತ್ತಿದ್ದಾರೆ. ಮಕ್ಕಳ ಶೈಕ್ಷಣಿಕ ಅಗತ್ಯ ಸವಲತ್ತುಗಳನ್ನು ಪೂರ್ಣ ಪ್ರಮಾಣದಲ್ಲಿ ಒದಗಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಗುಣಮಟ್ಟದ ಶಿಕ್ಷಣಕ್ಕೆ ಕಲಿಕಾ ಸಾಮಗ್ರಿಗಳು ಅವಶ್ಯವಾಗಿವೆ. ಸಂಘ ಸಂಸ್ಥೆಗಳು, ಸ್ಥಿತಿವಂತರು ಅಗತ್ಯ ಸೌಲಭ್ಯಗಳನ್ನು ಒದಗಿಸಲು ಮುಂದೆ ಬರಬೇಕಿದೆ ಎಂದು ಅಭಿಪ್ರಾಯಪಟ್ಟರು.

ಪಪಂ ಉಪಾಧ್ಯಕ್ಷೆ ಸರ್ವಮಂಗಳಾ ಉಮಾಪತಿ ಮಾತನಾಡಿ, ಸ್ವಸ್ಥ ಸಮಾಜ ನಿರ್ಮಾಣದಲ್ಲಿ ದಾನಿಗಳ ಪಾತ್ರ ಅತ್ಯಂತ ಮಹತ್ವತೆಯಿಂದ ಕೂಡಿದೆ. ಸಮಾಜಕ್ಕೆ ನೆರವು ನೀಡುವ ದಾನಿಗಳ ಮಾನವೀಯ ಗುಣಗಳಿಗೆ ಬೆಲೆಕಟ್ಟಲು ಸಾಧ್ಯವಿಲ್ಲ. ಹೀಗಾಗಿ ಸರ್ಕಾರ ಮತ್ತು ದಾನಿಗಳು ನೀಡುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶಿಕ್ಷಣವಂತರಾಗಿ ಎಂದು ಮಕ್ಕಳಿಗೆ ಸಲಹೆ ನೀಡಿದರು.

ಪಪಂ ಸದಸ್ಯ ಸೈಯದ್ ಅನ್ವರ್ ಮಾತನಾಡಿ, ಗ್ರಾಮೀಣ ಪ್ರದೇಶಗಳಿಗೂ ಆಂಗ್ಲ ಮಾಧ್ಯಮ ವ್ಯಾಪಿಸಿರುವ ಪರಿಣಾಮ ಬಡಜನರು ಸರ್ಕಾರಿ ಶಾಲೆಗಳನ್ನು ಅವಲಂಬಿಸುತ್ತಿದ್ದಾರೆ. ಇಲ್ಲಿನ ಶಾಲೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಆರಂಭಗೊಂಡಿದೆ. ಇದರ ದಾಖಲಾತಿಗೆ ಪೋಷಕರ ಒಲವು ಹೆಚ್ಚಳವಾಗುತ್ತಿರುವುದು ಅಶಾದಾಯಕ ಬೆಳವಣಿಗೆ ಎಂದರು.

ಶಾಲಾ ಮುಖ್ಯಶಿಕ್ಷಕಿ ಎನ್.ಇಂದಿರಮ್ಮ ಮಾತನಾಡಿ, ಶಾಲೆಗಳಲ್ಲಿ ಹೊಸತನ ಮೂಡಿಸುವ ಕೆಲಸ ಶಿಕ್ಷಕರಿಂದ ಆಗಬೇಕು. ಇದಕ್ಕೆ ಪೂರಕವಾಗಿ ದಾನಿಗಳ ನೆರವು ಅಗತ್ಯ. ದಾನಿಗಳು ನೀಡುವ ಸಲಕರಣೆ ಸಮರ್ಪಕವಾಗಿ ಮಕ್ಕಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.



ಈ ಸಂದರ್ಭದಲ್ಲಿ  ಪಪಂ ಸದಸ್ಯರಾದ ಪಾಪಮ್ಮ, ಸುನೀತಾಮುದಿಯಪ್ಪಮಹೇಶ್ವರಿ ರಾಜಯ್ಯ, ಬೋಸಮ್ಮ, ಎಸ್‍ಡಿಎಂಸಿ ಅಧ್ಯಕ್ಷೆ ಸುಮಲತಾ ಉಪಾಧ್ಯಕ್ಷ ತಿಪ್ಪೇಸ್ವಾಮಿ, ಸದಸ್ಯ ಎನ್.ಮಾರುತಿ ಮುಖಂಡ ಬಂಗಾರಪ್ಪ, ಶಿಕ್ಷಕರಾದ ಗಾಯಿತ್ರಿದೇವಿ, ಸುಮೀತ್ರಮ್ಮ, ಉಷಾ, ಸುಮ, ಮಂಜುಳಾ, ಚಂದನ, ಯತೀಶ್, ಕೃಷ್ಣರೆಡ್ಡಿ, ಮಂಜುನಾಥ್, ರಾಮಕೃಷ್ಣ ಉಪಸ್ಥಿತರಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ