ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ವಿಧಾನಸಭೆಯ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಮಂಕಾಳ ವೈದ್ಯ ಹಾಗೂ ಕರ್ನಾಟಕ ವಿಧಾನ ಪರಿಷತ್ನ ಉಪಸಭಾಪತಿಯಾಗಿ ಆಯ್ಕೆಯಾಗಿರುವ ಉಮಾಶ್ರೀ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಸದನದ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿರುವ ಅವರು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವಂತೆ ಮನವಿ ಮಾಡಿದ್ದಾರೆ.
ಸದನದ ಘನತೆ ಕಾಪಾಡಿ: ಉಭಯ ಸದನಗಳ ನೂತನ ಪದಾಧಿಕಾರಿಗಳು ಶಾಸನಸಭೆಯ ಘನತೆ, ಗೌರವ ಹಾಗೂ ಪಾವಿತ್ರ್ಯತೆಯನ್ನು ಎತ್ತಿಹಿಡಿದು ಕಾರ್ಯನಿರ್ವಹಿಸಬೇಕು.

ಜನಪರ ಕಾಳಜಿ: ಅತ್ಯಂತ ಜವಾಬ್ದಾರಿ ಹಾಗೂ ಜನಪರ ಕಾಳಜಿಯಿಂದ ಉಭಯ ಸದನಗಳನ್ನು ಮುನ್ನಡೆಸಿ, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸಲಿ ಎಂದು ಮುಖ್ಯಮಂತ್ರಿಗಳು ಆಶಿಸಿದ್ದಾರೆ.



