ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲ್ಲೂಕಿನ ಮರಡಿಹಳ್ಳಿ ಗ್ರಾಮದ ನರೇಂದ್ರ ಬಾಬು ಮತ್ತು ಶಿಲ್ಪಾರವರ ಪುತ್ರಿ ಕೆ.ಎನ್. ಶುಭ ಅವರು ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ನಡೆದ 17 ವರ್ಷದೊಳಗಿನ ಬಾಲಕಿಯರ ವಿಭಾಗದ ಐಸಿಎಸ್ಇ ವಲಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದ 200 ಮೀಟರ್ ಉದ್ದ ಜಿಗಿತದಲ್ಲಿ ಬೆಳ್ಳಿ ಪದಕ ಗಳಿಸಿ, ಪ್ರಾದೇಶಿಕ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕುಮಾರಿ ಕೆ.ಎನ್. ಶುಭ ಅವರು ಚಿತ್ರದುರ್ಗದ ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದು, ಶಾಲಾ ಆಡಳಿತ ಮಂಡಳಿ ಸೇರಿದಂತೆ, ಪೋಷಕರು ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ.



