Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕೆಪಿಎಸ್ ಶಾಲೆಯಲ್ಲಿ ಭಾರೀ ಅಗ್ನಿ ಅವಘಡ—ಲಕ್ಷಾಂತರ ಮೌಲ್ಯದ ಸಾಮಗ್ರಿಗಳು ಭಸ್ಮ!

ಚಂದ್ರವಳ್ಳಿ ನ್ಯೂಸ್, ರಾಮನಗರ (ಮಾಗಡಿ):
ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಕರ್ನಾಟಕ ಪಬ್ಲಿಕ್ ಶಾಲೆ (
KPS) ಆವರಣದಲ್ಲಿ ಬುಧವಾರ ತಡರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಶಾಲೆಯ ಕೊಠಡಿಯೊಂದು ಬೆಂಕಿಗಾಹುತಿಯಾಗಿದೆ.

 ಅಗ್ನಿ ಅವಘಡದಲ್ಲಿ ಶಾಲಾ ಕೊಠಡಿಯಲ್ಲಿದ್ದ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ಪೀಠೋಪಕರಣಗಳು ಹಾಗೂ ಪ್ರಮುಖ ಕಲಿಕಾ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಶಾಲೆಯ ನೂತನ ಕಟ್ಟಡ ನಿರ್ಮಾಣಗೊಂಡ ನಂತರ ಈ ಹಳೆಯ ಕೊಠಡಿಯನ್ನು ಖಾಲಿ ಬಿಡಲಾಗಿತ್ತು ಎಂದು ತಿಳಿದುಬಂದಿದೆ.

Advertisement

ಘಟನೆಯ ವಿವರ: ಬುಧವಾರ ತಡರಾತ್ರಿ ಹಳೆಯ ಕೊಠಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಕೊಠಡಿಗೆ ಆವರಿಸಿದೆ. ಬೆಂಕಿಯ ಜ್ವಾಲೆಯನ್ನು ಕಂಡ ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸತತ ಪರಿಶ್ರಮ ವಹಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದಾಗಿ ಪಕ್ಕದ ಕೊಠಡಿಗಳಿಗೆ ಬೆಂಕಿ ಹರಡುವುದು ತಪ್ಪಿದೆ.

ಕಿಡಿಗೇಡಿಗಳ ಕೃತ್ಯವೇ ಎಂಬ ಅನುಮಾನ: ಖಾಲಿ ಇದ್ದ ಕೊಠಡಿಯಲ್ಲಿ ತಡರಾತ್ರಿ ಬೆಂಕಿ ಹೊತ್ತಿಕೊಂಡಿರುವುದರಿಂದ ಇದು ಆಕಸ್ಮಿಕವಾಗಿ ಸಂಭವಿಸಿದ ದುರಂತವೇ ಅಥವಾ ಯಾರಾದರೂ ಕಿಡಿಗೇಡಿಗಳು ನಡೆಸಿದ ಕೃತ್ಯವೇ ಎಂಬ ತೀವ್ರ ಅನುಮಾನಗಳು ವ್ಯಕ್ತವಾಗಿವೆ.

ಈ ಕುರಿತು ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಗ್ನಿ ಅವಘಡಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಯಲು ಸೀಮೆಗೆ ಭದ್ರೆ ಹೋರಾಟಗಾರರ ಕಿತ್ತಾಟ ಏಕೆ: ಎಂ.ಜಿ ರಂಗಸ್ವಾಮಿ ಪ್ರಶ್ನೆಸ್ವಾಭಿಮಾನಿ ಸಶಕ್ತ ಸಮಾಜ ನಿರ್ಮಾಣದಲ್ಲಿ ಮಹಿಳೆಯ ಪಾತ್ರ ಮಹತ್ವದ್ದಾಗಿದೆ: ಶಾಂತಾ ಸುರೇಂದ್ರಜೀವಸಂಕುಲ ಉಳಿವಿಗೆ ಪ್ರಕೃತಿದೊಡ್ಡ ಶಕ್ತಿ-ಎಸ್.ಬಸವರಾಜುಜನಸಾಮಾನ್ಯರ ಪ್ರಗತಿಗಾಗಿ ಸರ್ಕಾರದ ಮಹತ್ವದ ಯೋಜನೆಗಳುಕೋಟೆನಾಡಿಗೆ ಹರಿದ ಭದ್ರಾ ನೀರು: ಗೊನೂರು ಕೆರೆಗೆ 'ಮೇಲ್ಭದ್ರಾ' ಸ್ಪರ್ಶ—ರೈತರ ಹರ್ಷ!ಕೆಪಿಎಸ್ ಶಾಲೆಯಲ್ಲಿ ಭಾರೀ ಅಗ್ನಿ ಅವಘಡ—ಲಕ್ಷಾಂತರ ಮೌಲ್ಯದ ಸಾಮಗ್ರಿಗಳು ಭಸ್ಮ!ಸರ್ಕಾರ ‘ಸರಿಯಾದ ದಿಕ್ಕಿನಲ್ಲಿ’ ಸಾಗುತ್ತಿದೆ; ಸಿದ್ದರಾಮಯ್ಯ! ಸಿಎಂ ಡಿ.ಕೆ ಶಿವಕುಮಾರ್‌ಸರ್ಕಾರಕ್ಕೆ 100 ದಿನದ ಸಂಭ್ರಮ: ಹೊಸ ಯೋಜನೆಗಳ ಮಹಾಪೂರ!ಸಚಿವ ಸತೀಶ್ ಜಾರಕಿಹೊಳಿ ಮತ್ತು ಆಪ್ತರ ನಿವಾಸಗಳ ಮೇಲೆ 2ನೇ ದಿನವೂ ಇ.ಡಿ ದಾಳಿ: ಸುದೀರ್ಘ ಪರಿಶೀಲನೆರಾಜ್ಯ ಕಾಂಗ್ರೆಸ್‌ಗೆ ನೂತನ 35 ಜಿಲ್ಲಾಧ್ಯಕ್ಷರ ನೇಮಕ: ಎಐಸಿಸಿ ಅಧಿಕೃತ ಪಟ್ಟಿ ಬಿಡುಗಡೆ