ಚಂದ್ರವಳ್ಳಿ ನ್ಯೂಸ್, ವಿಜಯನಗರ:
ಸನಾತನ ಹಿಂದೂ ಧರ್ಮದ ಕುರಿತು ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟ್ಯಾಲಿನ್ ನೀಡಿದ ಹೇಳಿಕೆಯನ್ನು ಖಂಡಿಸಿ ಹೊಸಪೇಟೆಯಲ್ಲಿ ವಿವಿಧ ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ವಡಕರಾಯ ದೇಗುಲದಲ್ಲಿ ಪೂಜೆ ಸಲ್ಲಿಸಿದ ಬಳಿಕ ಪ್ರತಿಭಟನಾಕಾರರು ವಡಕರಾಯ ವೃತ್ತದಿಂದ ಪ್ರಮುಖ ರಸ್ತೆ ಹಾಗೂ ವೃತ್ತಗಳ ಮೂಲಕ ಭಾರಿ ಮೆರವಣಿಗೆ ನಡೆಸಿದರು. ಪ್ರತಿಭಟನೆಯಲ್ಲಿ “ಸನಾತನ ಧರ್ಮಕ್ಕೆ ಅವಮಾನ ಸಹಿಸುವುದಿಲ್ಲ” ಎಂಬ ಘೋಷಣೆಗಳು ಮೊಳಗಿದವು.
ಸ್ವಾಮೀಜಿಗಳು, ಹಿಂದೂಪರ ಸಂಘಟನೆಗಳ ಮುಖಂಡರು, ವಿವಿಧ ಸಮುದಾಯಗಳ ನಾಯಕರು, ಯುವಕರು ಹಾಗೂ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರು ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಉಂಟುಮಾಡುವಂತಹ ಹೇಳಿಕೆಗಳನ್ನು ರಾಜಕೀಯ ನಾಯಕರು ನೀಡಬಾರದು ಎಂದು ಆಗ್ರಹಿಸಿದರು. ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಭದ್ರತೆ ಒದಗಿಸಿತ್ತು.


