Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಳ ಮೀಸಲಾತಿ ವರ್ಗೀಕರಣ ವಿರೋಧಿಸಿ ಮಾ-24ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ

Advertisement
​ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರದ ಇತ್ತೀಚಿನ ನೇಮಕಾತಿ ಅಧಿಸೂಚನೆಗಳಲ್ಲಿ ಪರಿಶಿಷ್ಟ ಜಾತಿಯ ಪ್ರವರ್ಗ
'ಬಿ' ಮತ್ತು 'ಸಿ' ಗುಂಪಿಗೆ ಶೂನ್ಯ ಹುದ್ದೆಗಳನ್ನು ಹಂಚಿಕೆ ಮಾಡಿರುವುದನ್ನು ಖಂಡಿಸಿ, ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ವತಿಯಿಂದ ಮಾರ್ಚ್-24 ರಂದು ಮಂಗಳವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ.

​ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ ಆರ್. ನಾಗೇಂದ್ರ ನಾಯ್ಕ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಒಳ ಮೀಸಲಾತಿ ಜಾರಿಯು ಅವೈಜ್ಞಾನಿಕ ಮತ್ತು ಅನ್ಯಾಯದಾಯಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಂಜಾರ, ಭೋವಿ, ಕೊರಮ, ಕೊರಚ, ಛಲವಾದಿ, ಚರ್ಮಕಾರ ಹಾಗೂ ಸೂಕ್ಷ್ಮ ಪರಿಶಿಷ್ಟ ಜಾತಿಗಳ ವಿವಿಧ ಸಂಘಟನೆಗಳು ಈ ಹೋರಾಟಕ್ಕೆ ಕೈಜೋಡಿಸಿವೆ.

​ಒಕ್ಕೂಟದ ಪ್ರಮುಖ ಹಕ್ಕೊತ್ತಾಯಗಳು:
​ಹಳೆಯ ಮೀಸಲಾತಿ ಅನ್ವಯ ನೇಮಕಾತಿ: ಶೇಕಡಾ 50ರ ಹಳೆಯ ಮೀಸಲಾತಿ ನಿಯಮದಂತೆ ನೇಮಕಾತಿ ಮತ್ತು ಶೈಕ್ಷಣಿಕ ಪ್ರವೇಶ ಪ್ರಕ್ರಿಯೆಯನ್ನು ಕೂಡಲೇ ಮುಂದುವರಿಸಬೇಕು.


​ಏಕಪಕ್ಷೀಯ ನಿರ್ಧಾರಕ್ಕೆ ತಡೆ: ದೇಶವ್ಯಾಪಿ ಜನಗಣತಿಯ ಸಮಗ್ರ ದತ್ತಾಂಶ ಬರುವವರೆಗೆ ಒಳ ಮೀಸಲಾತಿ ಕುರಿತು ಯಾವುದೇ ನಿರ್ಧಾರ ಕೈಗೊಳ್ಳಬಾರದು. ಪ್ರಕ್ರಿಯೆ ಆರಂಭಿಸುವ ಮುನ್ನ ಸಮುದಾಯದ ಮುಖಂಡರೊಂದಿಗೆ ಸಮಾಲೋಚನೆ ನಡೆಸಬೇಕು.

​9ನೇ ಷೆಡ್ಯೂಲ್‌ಗೆ ಸೇರ್ಪಡೆ: ಪರಿಶಿಷ್ಟ ಜಾತಿ (17%) ಮತ್ತು ಪಂಗಡಗಳ (7%) ಹೆಚ್ಚುವರಿ ಮೀಸಲಾತಿಯನ್ನು ಸಂವಿಧಾನದ 9ನೇ ಷೆಡ್ಯೂಲ್‌ಗೆ ಸೇರಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಪ್ರಧಾನಿಗಳ ಬಳಿ ನಿಯೋಗ ಕೊಂಡೊಯ್ಯಬೇಕು.

​ದತ್ತಾಂಶ ಬಿಡುಗಡೆ: ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿಯಲ್ಲಿನ ತಪ್ಪುಗಳನ್ನು ಸರಿಪಡಿಸಿ, ತಾಲ್ಲೂಕುವಾರು ಸಮಗ್ರ ದತ್ತಾಂಶವನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು.

​ಆದೇಶಗಳ ಹಿಂಪಡೆಯುವಿಕೆ: ಇತ್ತೀಚಿನ ರೋಸ್ಟರ್ ಹಂಚಿಕೆ ಆದೇಶಗಳು, ಸುತ್ತೋಲೆಗಳು ಮತ್ತು ಪ್ರವರ್ಗ ಎ, ಬಿ, ಸಿ ಎಂದು ನಮೂದಿಸಲಾದ ಜಾತಿ ಪ್ರಮಾಣಪತ್ರಗಳನ್ನು ತಕ್ಷಣ ರದ್ದುಗೊಳಿಸಿ ಹಳೆಯ ಪದ್ಧತಿಯನ್ನೇ ಮುಂದುವರಿಸಬೇಕು.

​SCP/TSP ಅನುದಾನ ಸಂರಕ್ಷಣೆ: ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಾದ ಅನುದಾನವನ್ನು ಇತರ ಯೋಜನೆಗಳಿಗೆ ವರ್ಗಾಯಿಸುವುದನ್ನು ತಡೆಯಲು ಕಾನೂನು ತಿದ್ದುಪಡಿ ತರಬೇಕು.

​"ಯಾರೋ ಒತ್ತಡಕ್ಕೆ ಮಣಿದು ಅಪ್ರಾಯೋಗಿಕ ಒಳ ಮೀಸಲಾತಿ ವರ್ಗೀಕರಣ ಮಾಡಬಾರದು. ಮೂಲ ಮೀಸಲಾತಿ ಉಳಿಸಿಕೊಳ್ಳಲು ನಡೆಯುತ್ತಿರುವ ಈ ಐತಿಹಾಸಿಕ ಹೋರಾಟದಲ್ಲಿ ರಾಜ್ಯದ ಎಲ್ಲಾ ಗ್ರಾಮ, ತಾಲ್ಲೂಕುಗಳಿಂದ ಬಂಧುಗಳು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಬೇಕು," ಎಂದು ಒಕ್ಕೂಟದ ಸಂಚಾಲಕ ಪ್ರಕಾಶ್ ರಾಮಾನಾಯ್ಕ್ ಕರೆ ನೀಡಿದ್ದಾರೆ.

​ಈ ಸಂದರ್ಭದಲ್ಲಿ ಬಂಜಾರ ಸಮುದಾಯದ ಪ್ರಮುಖ ಮುಖಂಡರಾದ ಹಾಲ್ಯಾನಾಯ್ಕ್, ರಮೇಶ್ ನಾಯ್ಕ್, ಅನಿಲ್ ನಾಯ್ಕ್, ಗಿರೀಶ್ ನಾಯ್ಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ