Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಕೀಲರು ಎಲ್ಲಾ ರಂಗಗಳಲ್ಲಿ ಯಶಸ್ಸು ಸಾಧಿಸಲಿ-ಹೆಚ್.ಕೆಂಪರಾಜಯ್ಯ

Advertisement
ಚಂದ್ರವಳ್ಳಿ ನ್ಯೂಸ್, ತುಮಕೂರು:
ಸ್ವಾತಂತ್ರ್ಯ ಪೂರ್ವದಲ್ಲಿ ಮತ್ತು ನಂತರದಲ್ಲಿ ವಕೀಲರ ಸಾಧನೆ ಅವಿಸ್ಮರಣೀಯ
, ವಕೀಲರು ರಾಜಕೀಯ, ಸಹಕಾರ, ವಕೀಲ ವೃತ್ತಿ, ಸಮಾಜಸೇವೆ, ಧಾರ್ಮಿಕ ವಲಯ ಹೀಗೆ ನಾನಾ ವಿಭಾಗಗಳಲ್ಲಿ ವಕೀಲರು ಸಮಾಜಮುಖಿಯಾಗಿ ಕೆಲಸ ಮಾಡಿ ಸಮಾಜದ ಅಭ್ಯುದಯಕ್ಕಾಗಿ ದುಡಿದಿದ್ದಾರೆ,

ಮುಂದೆಯೂ ವಕೀಲರು ನೊಂದವರ,ದೀನ-ದಲಿತರ,ಬಡವರ ನೋವಿಗೆ ಕಣ್ಣೀರಿಗೆ ಧ್ವನಿಯಾಗಿ ಕೆಲಸ ಮಾಡಲಿ ಎಂದು ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಹೆಚ್.ಕೆಂಪರಾಜಯ್ಯನವರು ಹೇಳಿದರು.

        ತುಮಕೂರು ಜಿಲ್ಲಾ ವಕೀಲರ ಸಂಘದಲ್ಲಿ ರಾಜ್ಯೋತ್ಸವ ಪ್ರಶಸ್ತಿ, ಕನಕಶ್ರೀ ಪ್ರಶಸ್ತಿ, ಸಹಕಾರರತ್ನ ಪ್ರಶಸ್ತಿ ಪಡೆದ ವಕೀಲರಿಗೆ ಮಂಗಳವಾರ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು.

        ಅಭಿನಂದನೆ ಸ್ವೀಕರಿಸಿ ಮಾತನಾಡಿದ ತುಮಕೂರು ವೀರಶೈವ ಸಹಕಾರ ಬ್ಯಾಂಕ್ ನ ಉಪಾಧ್ಯಕ್ಷ ಮತ್ತು ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಹೆಬ್ಬಾಕ ಮಲ್ಲಿಕಾರ್ಜುನಯ್ಯ, ನನಗೆ ಎಲ್ಲಾ ಅಭಿನಂದನೆಗಳಿಗಿಂತ ವಕೀಲರ ಸಂಘ ನೀಡಿದ ಸನ್ಮಾನ ದೊಡ್ಡದು, ನಾನು ಸಹಕಾರ ರಂಗದಲ್ಲಿ, ಸಮಾಜಸೇವೆಯಲ್ಲಿದ್ದು ಕಳೆದ ೩೦ ವರ್ಷಗಳಿಂದ ಸಮಾಜದ ಅಭ್ಯುದಯಕ್ಕಾಗಿ ದುಡಿಯುತ್ತಿದ್ದೇವೆ.

ಮುಂದೆಯೂ ಸಮಾಜಕ್ಕಾಗಿ ಸಹಕಾರ ರಂಗದಲ್ಲಿ ಇನ್ನೂ ಹೆಚ್ಚಿನ ಸೇವೆ ಸಲ್ಲಿಸಿ ಬಡ ಮತ್ತು ಮಧ್ಯಮ ವರ್ಗದವರಿಗೋಸ್ಕರ ಹಲವಾರು ಕಾರ್ಯಕ್ರಮ ರೂಪಿಸಿ ಅವರಿಗೆ ಆರ್ಥಿಕ ಚೈತನ್ಯ ತುಂಬಲು ಶ್ರಮಿಸುತ್ತೇನೆ ಎಂದು ಹೇಳಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಮತ್ತು ಕನಕಶ್ರೀ ಪ್ರಶಸ್ತಿ ಸ್ವೀಕರಿಸಿದ ಆರ್.ತಿಪ್ಪೇಸ್ವಾಮಿ ಮಾತನಾಡಿ ಸಂಘ ಈ ಹಿಂದೆ ಯಾರಿಗೂ ಇಂತಹ ಗೌರವ ನೀಡಿಲ್ಲ ನಮ್ಮ ಸಾಧನೆಯನ್ನು ಗುರುತಿಸಿ ಜಿಲ್ಲಾಡಳಿತ ನಡೆಸಿದ ಕನಕದಾಸರ ಜಯಂತಿಯಲ್ಲಿ ಕನಕಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ ಇಂದು ಸಂಘದ ಅಧ್ಯಕ್ಷ ಹೆಚ್.ಕೆಂಪರಾಜಯ್ಯ ವೈಯಕ್ತಿಕವಾಗಿ ೫ ಜನ ವಕೀಲರಿಗೆ ಸನ್ಮಾನ ಕಾರ್ಯಕ್ರಮ ಮಾಡಿರುವುದು ಮುಂದಕ್ಕೆ ಎಲ್ಲರಿಗೂ ಮಾದರಿ ಎಂದರು.  


      ಪೋಕ್ಸೋ ಜಿಲ್ಲಾ ನ್ಯಾಯಾಲಯದ ಸರ್ಕಾರಿ ಸಹಾಯಕ ಅಭಿಯೋಜಕಿ ಕೆ.ಎಸ್.ಆಶಾ ಮಾತನಾಡಿ ನಾನು ಎ.ಪಿ.ಪಿ.ಆದ ನಂತರ ೫೦ ಪ್ರಕರಣಗಳಲ್ಲಿ ವಾದ ಮಂಡಿಸಿ ಆರೋಪಿಗಳಿಗೆ ಜೀವಾವಧಿ ಮತ್ತು ಇತರೆ ಶಿಕ್ಷೆ ಕೊಡಿಸಿದ್ದೇನೆ. ಹಳ್ಳಿ ಹಳ್ಳಿಗೆ ಹೋಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ಕಾನೂನು ಅರಿವು ಕಾರ್ಯಕ್ರಮ ಮಾಡಿ ಎಲ್ಲರಿಗೂ ಕಾನೂನು ಜಾಗೃತಿ ಮೂಡಿಸುತ್ತಿದ್ದೇನೆ.

ಇದನ್ನು ಗಮನಿಸಿ ಜಿಲ್ಲಾಡಳಿತ ನನಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ ಇಂದು ಜಿಲ್ಲಾ ವಕೀಲರ ಸಂಘ ನನ್ನನ್ನು ಗುರುತಿಸಿ ಸನ್ಮಾನ ಮಾಡಿರುವುದು ನಮಗೆ ಮತ್ತಷ್ಟು ಹುರುಪು ಬಂದು ಜವಾಬ್ದಾರಿ ಹೆಚ್ಚಿಸಿದೆ ಎಂದರು.

        ವೇದಿಕೆಯಲ್ಲಿ ಪ್ರಶಸ್ತಿ ಪುರಸ್ಕೃತರಾದ ಟಿ.ಎನ್.ಆಶಾಕಿರಣ್, ರಾಜಣ್ಣ, ಖಜಾಂಚಿ ಕೆ.ಎಲ್.ಭಾರತಿ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಎಸ್.ಮೋಹನ್, ಮಂಜುಳ.ಹೆಚ್.ಎನ್  ಮತ್ತು ವಕೀಲರಾದ ಬಿ.ಜಿ.ಸತೀಶ್, ನವೀನ್ ನಾಯಕ್, ಜೆ.ಕೆ.ಅನಿಲ್ ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ