Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿನ್ನದ ಪದಕಗಳನ್ನು ಬೇಟೆಯಾಡಿದ ವೈದ್ಯಕೀಯ ಪದವಿ ವಿದ್ಯಾರ್ಥಿಗಳು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಎಲ್ ಡಿಇ(BLDE) ಡೀಮ್ಡ್ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ 502 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು ಎಂದು ರಾಜ್ಯ ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ವಿಶ್ವವಿದ್ಯಾಲಯದ ಘಟಿಕೋತ್ಸವವು ವಿದ್ಯಾರ್ಥಿಗಳ ವರ್ಷಗಳ ಪರಿಶ್ರಮ, ಮತ್ತು ಕಲಿಕೆಯ ಸಾಧನೆಯನ್ನು ಸಂಭ್ರಮಿಸುವ ಮಹತ್ವದ ದಿನವಾಗಿದೆ. ವಿಜಯಪುರದಲ್ಲಿನ ನಮ್ಮ BLDE ಡೀಮ್ಡ್ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡಿದ್ದು ಸಂತಸ ತರಿಸಿತು.

ಈ ಘಟಿಕೋತ್ಸವದಲ್ಲಿ ಒಟ್ಟು 502 ಪದವಿ ಪ್ರಧಾನ ಮಾಡಲಾಯಿತು. 11 ಪಿ.ಎಚ್.ಡಿ., 3 ಎಂ.ಸಿ.ಎಚ್ (ಯುರಾಲಜಿ), 2 ಡಿ.ಎಂ. (ಕಾರ್ಡಿಯಾಲಜಿ), 239 ವೈದ್ಯಕೀಯ ಸ್ನಾತಕೋತ್ತರ ಪದವಿಗಳು, 3 ಫೆಲೋಶಿಪ್ ಗಳು, 156 ಎಂಬಿಬಿಎಸ್ ಪದವಿಗಳು, 10 ಸ್ನಾತಕೋತ್ತರ ಅಲೈಡ್ ಹೆಲ್ತ್ ಪದವಿಗಳು, 19 ವಿಜ್ಞಾನ ಮತ್ತು ತಂತ್ರಜ್ಞಾನ ಸ್ನಾತಕೋತ್ತರ ಪದವಿಗಳು ಮತ್ತು 13 ಬ್ಯಾಚುಲರ್ ಆಫ್ ಫಿಸಿಯೋಥೆರಪಿ,



46 ಅಲೈಡ್ ವಿಜ್ಞಾನ ಪದವಿ ಪ್ರದಾನ ಮಾಡಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ 28 ಚಿನ್ನದ ಪದಕಗಳು ಮತ್ತು 3 ನಗದು ಬಹುಮಾನಗಳನ್ನು ನೀಡಲಾಯಿತು. ವೈದ್ಯಕೀಯ ಸ್ನಾತಕೋತ್ತರ ವಿಭಾಗದಲ್ಲಿ ಡಾ. ನರ್ಲಾ ಸುರೇಖಾ ಮತ್ತು ಡಾ. ಶಂಕರ್ ನಾರಾಯಣನ್ ಆರ್ ತಲಾ ಎರಡು ಚಿನ್ನದ ಪದಕಗಳನ್ನು ಪಡೆದರು ಎಂದು ಸಚಿವರು ತಿಳಿಸಿದರು.

ಪದವಿ ವೈದ್ಯಕೀಯ ವಿಭಾಗದಲ್ಲಿ ಡಾ. ಯಶ್ ಆರ್ಯ ಅವರು ಐದು ಚಿನ್ನದ ಪದಕಗಳು ಹಾಗೂ ಒಂದು ನಗದು ಬಹುಮಾನ, ಡಾ. ನಿಶ್ಚಿತಾ ಸಿ. ರಾಜ್ ಅವರು ಮೂರು ಚಿನ್ನದ ಪದಕಗಳು ಹಾಗೂ ಒಂದು ನಗದು ಬಹುಮಾನ, ಡಾ. ಸಲೋನಿ ವರ್ಮಾ ಅವರು ಎರಡು ಚಿನ್ನದ ಪದಕಗಳು ಹಾಗೂ ಒಂದು ನಗದು ಬಹುಮಾನ, ಡಾ. ಶಿರೀಷಾ ಎಂ. ಎಸ್. ಅವರು ಎರಡು ಚಿನ್ನದ ಪದಕಗಳನ್ನು ಪಡೆದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ರಾಷ್ಟ್ರೀಯ ವೈದ್ಯಕೀಯ ಆಯೋಗದ ವೈದ್ಯಕೀಯ ಮೌಲ್ಯಮಾಪನ ಮತ್ತು ಶ್ರೇಯಾಂಕ ಮಂಡಳಿಯ ಅಧ್ಯಕ್ಷ ಡಾ. ಎಂ. ಕೆ. ರಮೇಶ್ ಮಾತನಾಡಿ, BLDE ಡೀಮ್ಡ್ ವಿಶ್ವವಿದ್ಯಾಲಯದ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು.

ಕುಲಾಧಿಪತಿ ಬಿ.ಎಂ. ಪಾಟೀಲ, ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಪ್ರಭಾರಿ ಕುಲಪತಿ ಡಾ. ಅರುಣ ಇನಾಮದಾರ, ಕುಲಸಚಿವ  ಡಾ. ಆರ್. ವಿ. ಕುಲಕರ್ಣಿ, ವೈದ್ಯಕೀಯ ವಿಭಾಗದ ಡೀನ್ ಡಾ. ತೇಜಸ್ವಿನಿ ವಲ್ಲಭ, ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ಸೈನ್ಸ್ ಮತ್ತು ಟೆಕ್ನಾಲಜಿ ವಿಭಾಗದ ಡೀನ್ ಡಾ. ಎಸ್. ವಿ. ಪಾಟೀಲ,

ವಿವಿ ಪರೀಕ್ಷೆ ನಿಯಂತ್ರಕ ಡಾ. ಶಶಿಧರ ದೇವರಮನಿ, ಕಾನೂನು ವಿಭಾಗದ ಡೀನ್ ಡಾ. ರಘುವೀರ್ ಜಿ. ಕುಲಕರ್ಣಿ, ಡಾ. ಸಚ್ಚಿದಾನಂದ, ಡಾ ಶ್ರೀನಿವಾಸ ಬಳ್ಳಿ, ಡಾ. ಸ್ನೇಹಾ ಜವಳಕರ, ಡಾ. ವಿಜಯಕುಮಾರ  ಕಲ್ಯಾಣಪ್ಪ ಗೋಳ, ಅಶೋಕ ವಾರದ, ಡಾ. ಶ್ರೀಶೈಲ ಗುಡಗಂಟಿ ಸಂಸ್ಥೆಯ ನಿರ್ದೇಶಕರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ