Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

‘ಜನರೊಂದಿಗೆ ಜನತಾದಳ’ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನ

Advertisement

ಚಂದ್ರವಳ್ಳಿ ನ್ಯೂಸ್, ಮೈಸೂರು:
ಮೈಸೂರು ಜಿಲ್ಲೆಯ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ
ಜನರೊಂದಿಗೆ ಜನತಾದಳಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನವು ಅತ್ಯಂತ ಯಶಸ್ವಿಯಾಗಿ ಜರುಗಿತು.
ಈ ಬೃಹತ್ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ಪಾಲ್ಗೊಂಡಿದ್ದರು.

​ಸಭೆಯನ್ನುದ್ದೇಶಿಸಿ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ ಅವರು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಸಂಖ್ಯಾತ ಕಾರ್ಯಕರ್ತರ ಪಡೆಯನ್ನು ಅತ್ಯಂತ ಸಂತೋಷದಿಂದ ಭೇಟಿ ಮಾಡಿದ್ದಾಗಿ ತಿಳಿಸಿದರು. ಕ್ಷೇತ್ರಾದ್ಯಂತ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಭರ್ಜರಿ ಚಾಲನೆ ನೀಡಲಾಯಿತು.

​​ಈ ಯಶಸ್ವಿ ಸಮಾವೇಶದಲ್ಲಿ ಜೆಡಿಎಸ್ ಪಕ್ಷದ ಪ್ರಮುಖ ರಾಜ್ಯ ಮತ್ತು ಸ್ಥಳೀಯ ನಾಯಕರು ಭಾಗವಹಿಸಿದ್ದರು.

​ಮಾಜಿ ಸಚಿವ ಸಾ.ರಾ. ಮಹೇಶ್.  ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಎಂ.ಕೃಷ್ಣಾರೆಡ್ಡಿ, ​ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ. ಶಾಸಕ ಜಿ.ಡಿ. ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಸಿ.ಎ.ಎನ್. ಮಂಜೇಗೌಡ, ವಿಧಾನ ಪರಿಷತ್ ಸದಸ್ಯ ವಿವೇಕಾನಂದ, ಮಾಜಿ ಶಾಸಕ ಕೆ. ಮಹದೇವ್, ಮೈಸೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಅಶ್ವಿನ್ ಕುಮಾರ್ ಸೇರಿದಂತೆ ಮತ್ತಿತರ ಮುಖಂಡರು, ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

​ ಕಾರ್ಯಕ್ರಮದಲ್ಲಿ ಕ್ಷೇತ್ರದ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸುವ ಮೂಲಕ ಜೆಡಿಎಸ್ ಪಕ್ಷದ ಸಂಘಟನಾ ಶಕ್ತಿಯನ್ನು ಪ್ರದರ್ಶಿಸಿದರು. ಮುಂಬರುವ ದಿನಗಳಲ್ಲಿ ಪಕ್ಷವನ್ನು ತಳಮಟ್ಟದಿಂದ ಗಟ್ಟಿಗೊಳಿಸಲು ಈ ಸದಸ್ಯತ್ವ ಅಭಿಯಾನ ಮಹತ್ವದ ಪಾತ್ರ ವಹಿಸಲಿದೆ ಎಂದು ಮುಖಂಡರು ವಿಶ್ವಾಸ ವ್ಯಕ್ತಪಡಿಸಿದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆ.ವಿ.ಪ್ರಭಾಕರ್ ಅವರೊಂದಿಗೆ ಮೇ 22ಕ್ಕೆ ಮಾಧ್ಯಮ-ಸಂವಾದಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿಸಭೆಗ್ರಾಮಾಂತರ ಪೋಲಿಸರ ಕಾರ್ಯಾಚರಣೆ ಒಣಗಾಂಜ ವಶ ಆರೋಪಿ ಬಂಧನಬೆಳಗೆರೆ ಕೃಷ್ಣ ಶಾಸ್ತ್ರಿಗಳ 111ನೇ ಜಯಂತಿ: ಮೇ 22 ಮತ್ತು 23ರಂದು ದ್ವಿ ದಿನ ಆಚರಣೆಜಗನ್ಮಾತೃತ್ವವನ್ನು ಜಗತ್ತಿಗೆ ಸಾಬೀತುಪಡಿಸಿದ್ದೇ ಷೋಡಶೀ ಪೂಜೆ: ಎಂ ಗೀತಾ ನಾಗರಾಜ್ದೇವೇಗೌಡರು ಎಂಬುದೇ ಬಹುದೊಡ್ಡ ಗೌರವವನ್ನು ಕನ್ನಡಿಗರಿಗೆ ತಂದಿದೆಇದು ಕಾಂಗ್ರೆಸ್‌ನ ಸಾಧನಾ ಸಮಾವೇಶವಲ್ಲ, ಕನ್ನಡಿಗರಿಗೆ ಬಗೆದ ‘ದ್ರೋಹದ ಮಹಾಸಮಾವೇಶ’: ಆರ್. ಅಶೋಕ್ಹೊಸ ಬಸ್‌ಗಳಿಗೆ ಯಾವುದೇ ಅನುದಾನ ಬಿಡುಗಡೆ ಮಾಡದ ಸರ್ಕಾರಸ್ಮಾರ್ಟ್ ಮೀಟರ್ ಹಂಚಿಕೆಯಲ್ಲಿ ಮಹಾ ಅವಾಂತರ: ಆರ್. ಅಶೋಕ್ ಗಂಭೀರ ಆರೋಪರೋಮ್‌ನಲ್ಲಿ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ: ಅನಿವಾಸಿ ಭಾರತೀಯರಿಗೆ ಧನ್ಯವಾದ ತಿಳಿಸಿದ ಪಿಎಂ