Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನತಾದಳ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನ

Advertisement

ಚಂದ್ರವಳ್ಳಿ ನ್ಯೂಸ್, ಮೈಸೂರು:
ಮೈಸೂರು ಜಿಲ್ಲೆಯ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಜರುಗಿದ ಜನರೊಂದಿಗೆ ಜನತಾದಳ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನವನ್ನು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರು
, ಮಾಜಿ ಸಚಿವರಾದ ಸಾ.ರಾ. ಮಹೇಶ್, ಶಾಸಕರಾದ ಜಿ.ಡಿ. ಹರೀಶ್ ಗೌಡ ಸೇರಿದಂತೆ ಪಕ್ಷದ ಮುಖಂಡರೊಂದಿಗೆ ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಜನತಾದಳ ಪಕ್ಷ 25 ವರ್ಷಗಳಿಂದ ರಾಜ್ಯದಲ್ಲಿ ಗಟ್ಟಿಯಾಗಿ ನಿಂತು, ರಾಜ್ಯಕ್ಕೆ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಪಕ್ಷದ ಕಾರ್ಯಕರ್ತ ಬಂಧುಗಳಿಗೆ ಧನ್ಯವಾದಗಳನ್ನು ಅರ್ಪಿಸಿ, ಪಕ್ಷ ನಡೆದು ಬಂದ ಹಾದಿಯ ಕುರಿತು ಜನತೆಗೆ ಕುಮಾರಸ್ವಾಮಿ ತಿಳಿಸಿದರು.

"ಜನರೇ ನನ್ನ ನಿಜವಾದ ಆಸ್ತಿ" ಎಂಬ ಭಾವನೆಯಿಂದ ಬದುಕುತ್ತಿರುವ ಕುಮಾರಸ್ವಾಮಿ ಅವರು, ಪ್ರಾದೇಶಿಕ ಅಸ್ಮಿತೆ ಹಾಗೂ ಸಮಾನತೆಯ ಆಧಾರದ ಮೇಲೆ ನಮ್ಮ ಪಕ್ಷ ಆಡಳಿತ ನಡೆಸುತ್ತಾ ಬಂದಿದೆ. ಸಾಮಾಜಿಕ ಬದ್ಧತೆ, ಸಾಮಾಜಿಕ ನ್ಯಾಯಕ್ಕಾಗಿ ನಾವೆಲ್ಲರೂ ಶ್ರಮಿಸೋಣ ಎಂದು ತಿಳಿಸಿ, 2028ರಲ್ಲಿ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ತರಲು ತಾವೆಲ್ಲರೂ ಒಗ್ಗೂಡಿ ಪಕ್ಷ ಸಂಘಟನೆಗೆ ಶ್ರಮಿಸೋಣ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಜೆ.ಕೆ. ಕೃಷ್ಣಾರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಸಿ.ಎನ್. ಮಂಜೇಗೌಡ, ವಿವೇಕಾನಂದ, ಮಾಜಿ ಶಾಸಕರಾದ ಕೆ. ಮಹದೇವ್, ಮೈಸೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಅಶ್ವಿನ್ ಕುಮಾರ್, ಮೈಸೂರು ನಗರ ಜಿಲ್ಲಾಧ್ಯಕ್ಷ ಎಸ್.ಬಿ.ಎಂ. ಮಂಜು, ಮುಖಂಡರಾದ ಅಭಿಷೇಕ್, ಕೃಷ್ಣನಾಯಕ್, ಕಡೂರು ಚೇತನ್, ನಗರ ಅಧ್ಯಕ್ಷರಾದ ಮಂಜಣ್ಣ, ಯುವ ಘಟಕದ ಅಧ್ಯಕ್ಷ ಮದನ್, ಮಹಿಳಾ ಘಟಕದ ಅಧ್ಯಕ್ಷೆ ಹೇಮಾವತಿ, ಸ್ಥಳೀಯ ಮುಖಂಡರಾದ ಲಿಂಗಪ್ಪ, ಸ್ವಾಮಣ್ಣ,  ಶಿವಮೂರ್ತಿ, ಗಂಗಾಧರ ಗೌಡ, ಸಿದ್ದರಾಜು, ಪ್ರೇಮಾ ಸೇರಿದಂತೆ ಪಾಲಿಕೆ ಸದಸ್ಯರು, ಗುರುಹಿರಿಯರು, ತಾಯಂದಿರು, ಅಣ್ಣತಮ್ಮಂದಿರು ಹಾಗೂ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾನೂನುಬಾಹಿರವಾಗಿ ಕಾರ್ಯದರ್ಶಿ ಮುಂದುವರಿಕೆ: ಹಿರಿಯೂರು TAPCMS ಆಡಳಿತ ಮಂಡಳಿಗೆ ಉಪ ನಿಬಂಧಕರ ಅಂತಿಮ ಎಚ್ಚರಿಕೆಹಿರಿಯೂರು ಉಪಚುನಾವಣೆ: “ಸ್ಥಳೀಯ ಸ್ವಾಭಿಮಾನ”ದ ಕೂಗು ಈಗ ಯಾಕೆ..?ಹಿರಿಯ ಪತ್ರಕರ್ತೆ ವಾಳ್ವೆಕರ್ ಚಿಕಿತ್ಸೆಗೆ 90 ಸಾವಿರ ಬಿಡುಗಡೆ ಮಾಡಿದ‌ ಸಿಎಂರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದ ವಿರೋಧ ಪಕ್ಷದ ನಾಯಕ ಆರ್. ಅಶೋಕ್ತಮಿಳುನಾಡಿನಲ್ಲಿ ಬಿಜೆಪಿ ದಿನೇದಿನೇ ಬಲಿಷ್ಠವಾಗಿ ಬೆಳೆಯುತ್ತಿದೆ– ಆರ್. ಅಶೋಕ್ ವಿಶ್ವಾಸರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಭೂಮಿಪೂಜೆಇಂಡೋ-ಡಚ್ ಅತ್ಯಾಧುನಿಕ ಹೈನುಗಾರಿಕೆ ತರಬೇತಿ ಕೇಂದ್ರ ಸ್ಥಾಪನೆ ​ ಜೆಡಿಎಸ್ ಪಕ್ಷದ ಹೋರಾಟಗಳು ಜನಪರವಾಗಿ ಇರುತ್ತವೆ-ನಿಖಿಲ್ಮಳೆ ಅವಾಂತರ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ನಿಖಿಲ್ ವಾಗ್ದಾಳಿ ​ರೈತರನ್ನು ಒಕ್ಕಲೆಬ್ಬಿಸಬೇಡಿ: ಡಿ.ಕೆ.ಶಿ ಪಟಾಲಂ ವಿರುದ್ಧ ನಿಖಿಲ್ ಆಕ್ರೋಶ