Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಗಿ ಕಟಾವಿಗೆ ಮಧ್ಯವರ್ತಿಗಳ ಹಾವಳಿ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ರೈತ ಸ್ವಾವಲಂಬಿಯಾಗಿ
ಚಳಿ ಗಾಳಿ ಹಗಲು ರಾತ್ರಿ ಎನ್ನದೆ ತನ್ನ ಜೀವನಾಧರಕ್ಕಾಗಿ ಜಮೀನನ್ನು ನಂಬಿ ವರ್ಷ ಪೂರ್ಣ ಉಳುಮೆ ಬಿತ್ತನೆ ಮಾಡಿ ಫಸಲು ಬಂತು  ರಾಗಿ ಕೊಯ್ದು ಮಾಡುವ ದಾವಂತ ರೈತರಲ್ಲಿ ಪ್ರಾರಂಭವಾಗಿದೆ.

ಇದನ್ನೇ ಬಂಡವಾಳ ಮಾಡಿಕೊಂಡಿರುವ ಮಧ್ಯವರ್ತಿಗಳು ರಾಗಿ ಕಟಾವು ಮಾಡುವ ಯಂತ್ರಗಳ ಬಾಡಿಗೆ ನಿಗದಿಗಿಂತ ಹೆಚ್ಚಾಗಿ ಪಡೆಯುತ್ತಿದ್ದುಜಿಲ್ಲಾಧಿಕಾರಿಗಳ ಮಾತಿಗೂ ಬೆಲೆ ಇಲ್ಲದಂತಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ದಿತ್ವಾ ಚಂಡಮಾರುತ   ನ. 29 ರಿಂದ ತಂತರು ಮಳೆ ಬರುವ ಸಾಧ್ಯತೆಯ ಬಗ್ಗೆ ಹವಾಮಾನ ಇಲಾಖೆಯ ವರದಿಗಳು ಬರುತ್ತಿದ್ದಂತೆ, ರೈತರು ರಾಗಿ ಕಟಾವಿಗೆ ಮುಂದಾಗಿದ್ದಾರೆ.

ರೈತರ ಅಸಹಾಯಕ ಸ್ಥಿತಿಯನ್ನೇ ಬಂಡವಾಳ ಮಾಡಿಕೊಂಡಿರುವ ಮಧ್ಯವರ್ತಿಗಳು ಎರಡು ದಿನಗಳಿಂದ ಈಚೆಗೆ ದಿಢೀರನೆ ರಾಗಿ ಕಟಾವು ಮಾಡುವ ಯಂತ್ರಗಳ ಬಾಡಿಗೆಯನ್ನು ಹಿಂಬಾಗಿಲಿನ ಮೂಲಕ ಹೆಚ್ಚು ಮಾಡಿದ್ದಾರೆ.

 ಪ್ರಸ್ತುತ ಇಂಧನ ವೆಚ್ಚ ಇತರೇ ನಿರ್ವಹಣ ವೆಚ್ಚಗಳನ್ನು ಪರಿಗಣಿಸಿ ರಾಗಿ ಕಟಾವು ಮಾಡಲು ಪ್ರತಿ ಗಂಟೆಗೆ ನ್ಯೂ ಹಾಲೆಂಡ್  ಜಾನ್ನೀರ್ ಕಂಪನಿಯ ದೊಡ್ಡ ಕಟಾವು ಯಂತ್ರಕ್ಕೆ 3,450 ರೂ. ಹಾಗೂ ಕ್ಲಾಸ್ ಮತ್ತು ಎಸಿಸಿ ಕಂಪನಿಯ ಕಟಾವು ಯಂತ್ರಕ್ಕೆ ಒಂದು ಗಂಟೆಗೆ 2,750 ರೂ. ಮೀರದಂತೆ ಬಾಡಿಗೆಯನ್ನು ತೆಗೆದು ಕೂಳ್ಳಬೇಕು ಎಂದು ಜಿಲ್ಲಾಡಳಿತ ಆದೇಶ ಇದ್ದರು.

ಈ ಆದೇಶವನ್ನು ಗಾಳಿಗೆ ತೂರಿ  ಮಧ್ಯವರ್ತಿಗಳು ಕಟ್ಟಾವು ಮಾಡುವ ಯಂತ್ರದ ಮಾಲೀಕರನ್ನು ತಮ್ಮ ಹಿಡಿತದಲ್ಲಿ ಇರಿಸಿ ಇವರೆ ರೈತರ ಹತ್ತಿರ ಹೋಗಿ ವ್ಯವಹಾರ ಮಾಡಿ ದೊಡ್ಡ ಯಂತ್ರಕ್ಕೆ 4000 ಸಾವಿರ ಚಿಕ್ಕ ಯಂತ್ರಕ್ಕೆ 3000 ಸಾವಿರ ನಿಗದಿ ಪಡಿಸಿ ಕಮಿಷನ್ ವ್ಯಾಪಾರ ಮಾಡುತ್ತಿದ್ದಾರೆ .

ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ-2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ಇದ್ದರು ಜಿಲ್ಲಾಧಿಕಾರಿಗಳ ಈ ಎಚ್ಚರಿಕೆ ಹಿನ್ನೆಲೆಯಲ್ಲಿ ರಾಗಿ ಕಟಾವು ಯಂತ್ರಗಳ ಮಾಲೀಕರು ಮಧ್ಯವರ್ತಿಗಳ ಮೂಲಕ ಹೆಚ್ಚಿನ ಬಾಡಿಗೆ ಪಡೆಯುತ್ತಿದ್ದಾರೆ ಎಂದು ತಾಲ್ಲೂಕಿನ ಕುಮಾರ್ ನಾಯ್ಕ್ ತಿಳಿಸಿದ್ದಾರೆ.

ರೈತ ಬೆಳೆದ ದವಸ ಧಾನ್ಯಗಳು (ರಾಗಿ) ಶೇಕರಣೆ ಮಾಡುಕೊಳ್ಳುವ ದಾಸ್ತಾನು ಇಲ್ಲದೆ ತೊಂದರೆಯಲ್ಲಿರುವ ರೈತರಿಗೆ ಅದಷ್ಟು ಬೇಗ ರಾಗಿ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ಸಹಕಾರಿಯಾಗ ಬೇಕು ಹಾಗು  2025-2026ನೇ ಸಾಲಿನ ರಾಗಿ ಖರೀದಿಗಾಗಿ ನೋಂದಣಿ ಪ್ರಕ್ರಿಯೆಯು ಈಗಾಗಲೇ ಆರಂಭಗೊಂಡಿದೆ ಮತ್ತು ಡಿಸೆಂಬರ್ 15, 2025 ರಂದು ಕೊನೆಗೊಳ್ಳುತ್ತದೆ ಅಲ್ಲದೆ  ರಾಗಿಯನ್ನು ತುಂಬಿ ಕೀಲೋ ಮೀಟರ್ ವಾಹನಗಳು ನಿಲ್ಲುವುದು ತಪ್ಪುತ್ತದೆ.

ಜಿಲ್ಲಾಧಿಕಾರಿಗಳು ರಾಗಿ ಕಟಾವು ಮಾಡುವಯಂತ್ರಕ್ಕೆ ಇಂತಿಷ್ಟು ಹಣ ನಿಗದಿ ಮಾಡುವಂತೆ ಭಾರತೀಯ ದಕ್ಷಿಣಾ ಪ್ರಾಂತ್ಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ನಾರಾಯಣಸ್ವಾಮಿ ಮನವಿ ಮಾಡಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ