Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾನಸಿಕ ಸಮಸ್ಯೆಗಳು ವ್ಯಕ್ತಿಗತವಲ್ಲ, ಅವು ಸಮಾಜದಲ್ಲಿವೆ-ಡಾ.ಶರತ್ ಅನಂತಮೂರ್ತಿ

Advertisement
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಶಿವಮೊಗ್ಗದ ಮಾನಸ ಟ್ರಸ್ಟ್‌ನ ಕಟೀಲು ಅಶೋಕ್ ಪೈ ಸ್ಮಾರಕ ಕಾಲೇಜಿನ ಸ್ನಾತಕೋತ್ತರ ಶೈಕ್ಷಣಿಕ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗಾಗಿ ಪ್ರಶಸ್ತಿ ಪ್ರದಾನ ಮಾಡುವ ಶಿಕ್ಷಣೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಪ್ರಶಸ್ತಿ ಪ್ರದಾನ ಮಾಡಿದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಮಾತನಾಡಿ ಮನೋವಿಜ್ಞಾನದ ವಿಕಾಸದ ಹಲವು ಮಜಲುಗಳನ್ನೂ ಅದರ ಆಯಾಮಗಳನ್ನೂ ವಿವರಿಸಿದರು.

ವಿವಿಧ ಸಿದ್ಧಾಂತಗಳೂ, ಜ್ಞಾನಿಗಳು ಈ ವಿಜ್ಞಾನದ ಬೆಳವಣಿಗೆಗೆ ನೀಡಿದ ತಾತ್ವಿಕ ಅಂಶಗಳನ್ನು ತುಲನಾತ್ಮಕವಾಗಿ ವಿಶ್ಲೇಷಿಸಿದು. ಆಧುನಿಕ ಯುಗದಲ್ಲಿ ಮನೋವಿಜ್ಞಾನ ಹಾಗೂ ತತ್ವಶಾಸ್ತ್ರಗಳ  ಪರಸ್ಪರ ಪೂರಕವಾದ ಅಧ್ಯಯನ ಅಗತ್ಯವಿದೆ ಎಂದು ತಿಳಿಸಿದರು.

ಇಂದಿನ ಮಾನಸಿಕ ಸಮಸ್ಯೆಗಳು ವ್ಯಕ್ತಿಗತವಲ್ಲ. ಅವು ಸಮಾಜದಲ್ಲಿ ಇದೆ ಎಂದು ತೀಕ್ಷ್ಣವಾಗಿ ಹೇಳಿದ ಅವರು ಆಧುನಿಕ ಸಮಾಜದ ಆಗುಹೋಗುಗಳು, ತಲ್ಲಣಗಳು ವ್ಯಕ್ತಿಯ ಭಾವನಾತ್ಮಕ ಸೂಕ್ಷ್ಮತೆಯನ್ನು ಕ್ಷೀಣಿಸುವಂತೆ ಮಾಡಿದೆ ಎಂದು ವಿಷಾದಿಸಿದರು.

 ಮನೋವಿಜ್ಞಾನದ ವಿದ್ಯಾರ್ಥಿಗಳು ಸಂಕೀರ್ಣ ಮನಸ್ಸಿನ ವಿಚಾರಗಳನ್ನು ಶ್ರದ್ಧೆಯಿಂದ ಅರಿತು ಕೆಲಸ ಮಾಡಬೇಕು ಎಂದು ತಿಳಿಸಿದರು.

ಪ್ರಾಸ್ತಾವಿಕ ನುಡಿಗಳನ್ನಾಡಿದ ಶೈಕ್ಷಣಿಕ ನಿರ್ದೇಶಕಿ ಡಾ. ಪ್ರೀತಿ ವಿ ಶಾನ್‌ಭಾಗ್, ಮಾನಸ ಟ್ರಸ್ಟ್ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜನ್ನು ೨೦೧೭ ರಲ್ಲಿ ಪ್ರಾರಂಭಿಸುವ ಮೂಲಕ ಸಂಕೀರ್ಣವಾದ ಮನೋವಿಜ್ಞಾನದ ವಿಷಯಕ್ಕೆ ಸಂಬಂಧಿಸಿದ ವಿವಿಧ ವಿಜ್ಞಾನಗಳ ಕುರಿತು ಅಧ್ಯಯನಗಳನ್ನು ನಡೆಸಲು ಸಾಧ್ಯವಾಗಿದೆ ಎಂದರು.

ಕಾಲೇಜಿನಲ್ಲಿ ಪಠ್ಯ ಮಾತ್ರವಲ್ಲದೆ ಹಲವಾರು ಶೈಕ್ಷಣಿಕ, ಪಠ್ಯೇತರ ಚಟುವಟಿಕೆಗಳು, ತರಬೇತಿಗಳು ಹಾಗೂ ಸಂಶೋಧನೆಗಳು ನಡೆಯುತ್ತಿವೆ ಎಂದರು.

 ಈ ಸಮಾರಂಭದಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ಮನ:ಶಾಸ್ತ್ರ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮಾನಸ ಟ್ರಸ್ಟ್‌ನಿರ್ದೇಶಕರಾದ ಡಾ.ರಜನಿ ಎ ಪೈ, ಡಾ.ರಾಜೇಂದ್ರ ಚೆನ್ನಿ, ಸಿಸ್ಟರ್ ಮಾರಿ ಇವ್ಲಿನ್, ಡಾ. ಪ್ರೀತಿ ವಿ. ಶಾನಭಾಗ್ ಹಾಗೂ ವಿಭಾಗದ ಮುಖ್ಯಸ್ಥೆ ಡಾ.ಅರ್ಚನಾ ಭಟ್, ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.

ಉಪನ್ಯಾಸಕ ಮಂಜುನಾಥ ನಿರೂಪಿಸಿದರು. ಕು. ಹನಿ ಕುರುವರಿ ವರದಿ ಮಂಡಿಸಿದರು. ಕು. ಶಿಲ್ಪಾ ಪ್ರಶಸ್ತಿ ಪತ್ರ ವಿತರಣೆ ನಿರ್ವಹಿಸಿದರು. ಡಾ.ಅರ್ಚನಾಭಟ್ ವಂದಿಸಿದರು. ಪ್ರಾಂಶುಪಾಲೆ ಡಾ. ಸಂಧ್ಯಾಕಾವೇರಿ ಕೆ.  ಅಧ್ಯಕ್ಷತೆ ವಹಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ