LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬರ ಅಧ್ಯಯನ ನಡೆಸಿದ ಸಚಿವ ಕೆ.ಹೆಚ್ ಮುನಿಯಪ್ಪ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬರ ಅಧ್ಯಯನಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಟನಕುಂಟೆ ಗ್ರಾಮದ ರೈತರ ಜಮೀನುಗಳಿಗೆ ಹಾಗೂ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಳೂರು ಗ್ರಾಮದ ರೈತರ ಜಮೀನುಗಳಿಗೆ, ಕೊಳೂರು ಕೆರೆಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಭೇಟಿ ನೀಡಿ ಬೆಳೆಗಳ ಸ್ಥಿತಿಗತಿ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿ ಮುಂಗಾರು ಮಳೆ ಕೊರತೆಯಾಗುವ ಸಂಭವವಿದ್ದು ರೈತರು ಕಡಿಮೆ ಅವಧಿಯ ರಾಗಿ ಬಿತ್ತನೆ ಮಾಡಿ, ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕವಾಗಿ ಲಭ್ಯವಿದೆ. ಕಡಿಮೆ ಅವಧಿಯ ರಾಗಿ ಬೆಳೆ ಬಗ್ಗೆ ಕೃಷಿ ಅಧಿಕಾರಿಗಳ ಬಳಿ ಮಾಹಿತಿ ಬಿತ್ತನೆ ಮಾಡಿ ಎಂದು ರೈತರಿಗೆ ಸಲಹೆ ನೀಡಿದರು.

ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸಿರುವ ರಾಗಿಗೆ ಸಂಬಂಧಿಸಿದಂತೆ ಸರ್ಕಾರದಲ್ಲಿ ಹಣದ ಕೊರತೆಯಿಲ್ಲ, ಆದಷ್ಟು ಶೀಘ್ರ ಹಣ ಬಿಡುಗಡೆ ಮಾಡಿ ರೈತರ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ಈ ಸಂಧರ್ಭದಲ್ಲಿ ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು, ಮಾಜಿ ಶಾಸಕ ವೆಂಕಟರಮಣಯ್ಯ, ಜಿಲ್ಲಾಧಿಕಾರಿ ಡಾ ಕೆ.ಎನ್ ಅನುರಾಧ, ಉಪಕಾರ್ಯದರ್ಶಿ ಶಿವಕುಮಾರ್, ಎಸಿ ಮಂಜುನಾಥ್, ಕೃಷಿ ಜಂಟಿ ನಿರ್ದೇಶಕಿ ಕಲಾವತಿ, ಅಧಿಕಾರಿಗಳು ಉಪಸ್ಥಿತರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಲಕಿಯರ ವೃತ್ತಿಪರ ಕಾಲೇಜು ವಿದ್ಯಾರ್ಥಿನಿಯರಿಗೆ ಬುದ್ದನ ಕಂಚಿನ ವಿಗ್ರಹಗಳ ವಿತರಣೆನೂತನ ಸಚಿವ ಟಿ.ರಘುಮೂರ್ತಿವರಿಗೆ ಹೂವಿನ ಮಳೆ ಸುರಿಸಿ ಸ್ವಾಗತಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆನಾಪಿ ಕುಸಿತ: ವಿದ್ಯುತ್‌ ಇಲ್ಲದೆ, ಸೊಳ್ಳೆಗಳ ಕಾಟಕ್ಕೆ ಕತ್ತಲಲ್ಲಿ ಬಾಣಂತಿಯರ ಪರದಾಟ!ಹೂಗಳಿಂದ ಅರಳಿದೆ ಗಂಗರ ಸಾಮ್ರಾಜ್ಯದ ಇತಿಹಾಸ: ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಿಎಂಸಿಎಂ ಶಿವಕುಮಾರ್‌ ಭೇಟಿಯಾದ ಸರ್ಕಾರಿ ಮಹಿಳಾ ನೌಕರರ ನಿಯೋಗ: ಸ್ವಚ್ಛ ಇಂಧನ ಕ್ರಾಂತಿಗೆ ಉಕ್ಕು ಬೆನ್ನೆಲುಬು: ಅಂತಾರಾಷ್ಟ್ರೀಯ ಇಂಧನ ಸಮ್ಮೇಳನದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಪ್ರತಿಪಾದನೆ ಸರ್ಕಾರದ ವೈಫಲ್ಯಗಳ ವಿರುದ್ಧ ಎನ್‌ಡಿಎ ಕಾದಾಟ: ಕುಮಾರಸ್ವಾಮಿ-ಬೊಮ್ಮಾಯಿ, ಅಶೋಕ್ ಸಮಾಲೋಚನೆಪ್ರಮಾಣ ವಚನ ಮುಗಿದು 3 ದಿನವಾದರೂ ಖಾತೆ ಹಂಚಿಕೆಯಿಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್‌. ಅಶೋಕ್ ವಾಗ್ದಾಳಿಕೆಪಿಎಸ್‌ಸಿ ಭ್ರಷ್ಟಾಚಾರದ ಕೂಪ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಸಿ.ಟಿ. ರವಿ ಆಕ್ರೋಶ ಸಚಿವ ಸ್ಥಾನ ‘ಪೇಮೆಂಟ್ ಸೀಟ್’: ಸಿ.ಟಿ. ರವಿ ಗಂಭೀರ ಆರೋಪ