LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಸ್ಥಾನ ‘ಪೇಮೆಂಟ್ ಸೀಟ್’: ಸಿ.ಟಿ. ರವಿ ಗಂಭೀರ ಆರೋಪ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟವೇ ಲಂಚ ಹಾಗೂ ಕಪ್ಪದ ಆಧಾರದ ಮೇಲೆ ರಚನೆಯಾಗಿದೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

​ಸಚಿವ ಸ್ಥಾನವನ್ನು 'ಪೇಮೆಂಟ್ ಸೀಟ್' ಎಂದು ಕಾಂಗ್ರೆಸ್‌ನ ಹಿರಿಯ ನಾಯಕರೇ ಮಾತನಾಡಿಕೊಂಡಿರುವ ಆಡಿಯೋ ಬಯಲಾಗಿದೆ ಎಂದು ಆರೋಪಿಸಿರುವ ಅವರು, ರಾಜ್ಯದಲ್ಲಿ ಲಂಚಾವತಾರ ಯಾವ ಮಟ್ಟಕ್ಕೆ ತಲುಪಿದೆ ಎನ್ನುವುದಕ್ಕೆ ಇದು ಸ್ಪಷ್ಟ ನಿದರ್ಶನವಾಗಿದೆ ಎಂದಿದ್ದಾರೆ.

​​ಕಪ್ಪ ನೀಡಿ ಸಚಿವ ಸ್ಥಾನ: ಸಚಿವ ಸ್ಥಾನ ಪಡೆಯಲು ಕಾಂಗ್ರೆಸ್‌ ಹೈಕಮಾಂಡ್‌ಗೆ ಕಪ್ಪ ಸಲ್ಲಿಸಬೇಕು. ಸಚಿವರಾದ ಬಳಿಕ ಆ ಹಣವನ್ನು ವಸೂಲಿ ಮಾಡಲು ಸಾರ್ವಜನಿಕರಿಂದ ಕಮಿಷನ್ ಹೊಡೆಯಬೇಕು ಎಂಬ ತತ್ವದ ಮೇಲೆ ಸರ್ಕಾರ ನಡೆಯುತ್ತಿದೆ.

​ಭ್ರಷ್ಟಾಚಾರ ರಹಿತ ಆಡಳಿತ ಸಾಧ್ಯವೇ?: ಲಂಚದ ಆಧಾರದ ಮೇಲೆಯೇ ಸಚಿವ ಸಂಪುಟ ರಚನೆಯಾಗಿರುವಾಗ, ಈ ಸರ್ಕಾರದಿಂದ ಭ್ರಷ್ಟಾಚಾರ ರಹಿತ ಆಡಳಿತವನ್ನು ನಿರೀಕ್ಷಿಸಲು ಸಾಧ್ಯವೇ ಎಂದು ಅವರು ಪ್ರಶ್ನಿಸಿದ್ದಾರೆ.

​ಡಿಕೆಶಿಗೆ ನೇರ ಸವಾಲು: "ಹತ್ತು ರೂಪಾಯಿ ಲಂಚ ಕೇಳಿದರೂ ನನಗೆ ಹೇಳಿ" ಎಂದಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರೇ, ಕೋಟ್ಯಂತರ ರೂಪಾಯಿಗಳ ಈ 'ವ್ಯವಹಾರಕ್ಕೆ' ಸಚಿವ ಸಂಪುಟ ವಿಸ್ತರಣೆಯ ಬಣ್ಣ ಬಳಿಯುತ್ತಿದ್ದೀರಲ್ಲ, ಇದಕ್ಕೆ ಏನೆನ್ನುತ್ತೀರಿ ಎಂದು ಪ್ರಶ್ನಿಸಿ ವಾಗ್ದಾಳಿ ನಡೆಸಿದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಲಕಿಯರ ವೃತ್ತಿಪರ ಕಾಲೇಜು ವಿದ್ಯಾರ್ಥಿನಿಯರಿಗೆ ಬುದ್ದನ ಕಂಚಿನ ವಿಗ್ರಹಗಳ ವಿತರಣೆನೂತನ ಸಚಿವ ಟಿ.ರಘುಮೂರ್ತಿವರಿಗೆ ಹೂವಿನ ಮಳೆ ಸುರಿಸಿ ಸ್ವಾಗತಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆನಾಪಿ ಕುಸಿತ: ವಿದ್ಯುತ್‌ ಇಲ್ಲದೆ, ಸೊಳ್ಳೆಗಳ ಕಾಟಕ್ಕೆ ಕತ್ತಲಲ್ಲಿ ಬಾಣಂತಿಯರ ಪರದಾಟ!ಹೂಗಳಿಂದ ಅರಳಿದೆ ಗಂಗರ ಸಾಮ್ರಾಜ್ಯದ ಇತಿಹಾಸ: ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಿಎಂಸಿಎಂ ಶಿವಕುಮಾರ್‌ ಭೇಟಿಯಾದ ಸರ್ಕಾರಿ ಮಹಿಳಾ ನೌಕರರ ನಿಯೋಗ: ಸ್ವಚ್ಛ ಇಂಧನ ಕ್ರಾಂತಿಗೆ ಉಕ್ಕು ಬೆನ್ನೆಲುಬು: ಅಂತಾರಾಷ್ಟ್ರೀಯ ಇಂಧನ ಸಮ್ಮೇಳನದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಪ್ರತಿಪಾದನೆ ಸರ್ಕಾರದ ವೈಫಲ್ಯಗಳ ವಿರುದ್ಧ ಎನ್‌ಡಿಎ ಕಾದಾಟ: ಕುಮಾರಸ್ವಾಮಿ-ಬೊಮ್ಮಾಯಿ, ಅಶೋಕ್ ಸಮಾಲೋಚನೆಪ್ರಮಾಣ ವಚನ ಮುಗಿದು 3 ದಿನವಾದರೂ ಖಾತೆ ಹಂಚಿಕೆಯಿಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್‌. ಅಶೋಕ್ ವಾಗ್ದಾಳಿಕೆಪಿಎಸ್‌ಸಿ ಭ್ರಷ್ಟಾಚಾರದ ಕೂಪ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಸಿ.ಟಿ. ರವಿ ಆಕ್ರೋಶ ಸಚಿವ ಸ್ಥಾನ ‘ಪೇಮೆಂಟ್ ಸೀಟ್’: ಸಿ.ಟಿ. ರವಿ ಗಂಭೀರ ಆರೋಪ