Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಪ್ರಿಯಾಂಕ್ ಖರ್ಗೆ ಕರಾವಳಿ ಕುರಿತ ಹೇಳಿಕೆ ಹಾಸ್ಯಾಸ್ಪದ

Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಚಿವ ಪ್ರಿಯಾಂಕ್ ಖರ್ಗೆ ಅವರು ಕರಾವಳಿಯ ಕುರಿತು ಮಾತನಾಡುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ ವಿಚಾರ. ಕರ್ನಾಟಕದ ಅತ್ಯಂತ ಅಭಿವೃದ್ಧಿ ಹೊಂದಿದ ಪ್ರದೇಶವಾದ ಕರಾವಳಿಯ ಕುರಿತು ಟೀಕೆ ಮಾಡುವ ಮುನ್ನ, ಪ್ರಿಯಾಂಕ್ ಖರ್ಗೆಯವರು ಆರು ದಶಕಗಳಿಂದ ತಮ್ಮ ಕುಟುಂಬ ಪ್ರತಿನಿಧಿಸುತ್ತಿರುವ ಕಲಬುರಗಿಯ ಪರಿಸ್ಥಿತಿ ಹೇಗಿದೆ ಎಂದು ಒಂದು ಬಾರಿ ಪರಿಶೀಲನೆ ನಡೆಸುವುದು ಒಳ್ಳೆಯದು! ಎಂದು ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಅವರು ತಾಕೀತು ಮಾಡಿದ್ದಾರೆ.

ಕರಾವಳಿ ಬೆಂಗಳೂರಿನ ನಂತರ ಕರ್ನಾಟಕದ ಜಿಡಿಪಿಗೆ ಅತ್ಯಧಿಕ ಕೊಡುಗೆ ನೀಡುತ್ತಿರುವ ಪ್ರದೇಶ. ಆದರೆ, ಕರ್ನಾಟಕ ಕಾಂಗ್ರೆಸ್ ಪಕ್ಷಕ್ಕೆ ನೆಲೆ ಇಲ್ಲ ಎನ್ನುವ ಏಕೈಕ ಕಾರಣಕ್ಕೆ ಕರಾವಳಿಗೆ ಕೋಮುವಾದದ ಆರೋಪ ಹೊರಿಸುವ ಪ್ರಯತ್ನ ಪ್ರಿಯಾಂಕ್ ಖರ್ಗೆಯವರ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿಯಷ್ಟೇ.

ಇಂದು ದೇಶದಲ್ಲಿ ಹೆಸರು ಮಾಡಿರುವ ಬಹುತೇಕ ಬ್ಯಾಂಕ್‌ಗಳ ಸ್ಥಾಪನೆ ಆಗಿರುವುದೇ ನಮ್ಮ ಕರಾವಳಿಯಲ್ಲಿ. ಈಗಾಗಲೇ ಕರಾವಳಿಯಲ್ಲಿ ಐಟಿ-ಬಿಟಿ, ಸಹಕಾರಿ ಸಂಸ್ಥೆಗಳು, ಖಾಸಗಿ ಮತ್ತು ಸರ್ಕಾರಿ ಉದ್ಯಮಗಳು ಅತ್ಯಂತ ಯಶಸ್ವಿಯಾಗಿ ಕಾರ್ಯಾಚರಿಸುತ್ತಿವೆ. ಆದರೆ ಕರಾವಳಿಗೆ ಇನ್ನಷ್ಟು ಬಂಡವಾಳ ಸೆಳೆಯಬೇಕಾದ ಸರ್ಕಾರ ಮತ್ತು ಸಚಿವರೇ ಮನಬಂದಂತೆ ಮಾತನಾಡಿ, ಕರಾವಳಿಯ ಕುರಿತು ಇಲ್ಲದ ಆರೋಪ ಹೊರಿಸುತ್ತಿರುವುದು ಎಷ್ಟು ಸರಿ? ಕರಾವಳಿಗರು ಸ್ವಾಭಿಮಾನಿಗಳು. ಇಂತಹ ಅವಮಾನವನ್ನು ಅವರಾದರೂ ಏಕೆ ಸಹಿಸಬೇಕು? ರವಿ ಪ್ರಶ್ನಿಸಿದ್ದಾರೆ.

ಕಳೆದ ಆರು ದಶಕಗಳಿಂದ ಖರ್ಗೆ ಅವರು, ನೀವು ಕಲಬುರಗಿಯನ್ನು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಪ್ರತಿನಿಧಿಸುತ್ತಲೇ ಬಂದಿದ್ದೀರಲ್ಲ? ನೀವು ಕಲಬುರಗಿಗೆ ಎಷ್ಟು ಐಟಿ ಕಂಪನಿಗಳನ್ನು ತಂದಿದ್ದೀರಿ? ಎಷ್ಟು ಅಭಿವೃದ್ಧಿ ಮಾಡಿದ್ದೀರಿ? ಎಷ್ಟು ವೈದ್ಯಕೀಯ ಕಾಲೇಜುಗಳು, ಸಹಕಾರಿ ರಂಗದ ಸಂಸ್ಥೆಗಳನ್ನು ತಂದಿದ್ದೀರಿ? ಕಲಬುರಗಿಯ ಅಭಿವೃದ್ಧಿ ಎಂದರೆ ಖರ್ಗೆ ಕುಟುಂಬದ ಅಭಿವೃದ್ಧಿ ಎಂದೇ ಭಾವಿಸಿ ಕಾರ್ಯಾಚರಿಸಿಲ್ಲವೇ ನೀವು? ಶಾಸಕರು, ಸಂಸದರು, ಕೇಂದ್ರ ಸಚಿವರು, ರಾಜ್ಯ ಸರ್ಕಾರದಲ್ಲಿ ಸಚಿವರು, ಹೀಗೆ ಲಭ್ಯವಿರುವ ಎಲ್ಲ ಹುದ್ದೆಗಳನ್ನೂ ಖರ್ಗೆ ಕುಟುಂಬಸ್ಥರು ಹೊಂದಿದರೂ, ಕಲಬುರಗಿ ಮಾತ್ರ ಅಭಿವೃದ್ಧಿ ವಂಚಿತವಾಗಿರುವುದು ಏಕೆ?

ಇಂದು ಕರಾವಳಿಯ ಸಾಹಸಿ ಉದ್ಯಮಿಗಳು ದೇಶಾದ್ಯಂತ ವ್ಯಾಪಿಸಿದ್ದಾರೆ. ಇಂದು ದೇಶದ ಪ್ರಮುಖ ಹೋಟೆಲ್‌ಗಳೆಲ್ಲವೂ ಕರಾವಳಿ ಮೂಲದವರದ್ದಾಗಿವೆ. ಹೊರ ಪ್ರದೇಶಗಳಲ್ಲಿ ದುಡಿದು, ಕರಾವಳಿಯಲ್ಲಿ ಹೂಡಿಕೆ ಮಾಡಿ, ಕರಾವಳಿಯನ್ನು ಭಾರತದ ಔದ್ಯಮಿಕ ಹಬ್ ಆಗಿಸಿರುವುದು ಕರಾವಳಿಯ ಜನರ ಹಿರಿಮೆ. ಆದರೆ ಕಲಬುರಗಿಯ ಯುವ ಜನರಿಗೆ ಉದ್ಯೋಗವೆಲ್ಲಿದೆ ಪ್ರಿಯಾಂಕ್ ಖರ್ಗೆಯವರೇ?

ಕರ್ನಾಟಕದ ಕರಾವಳಿಯ ಸಾಮರ್ಥ್ಯ ಇಡೀ ದೇಶಕ್ಕೇ ಮಾದರಿ. ಅಲ್ಲಿನ ಮಣ್ಣಿನಲ್ಲೇ ಆ ಅಂತಃಸತ್ವ, ಸಾಮರ್ಥ್ಯವಿದೆ. ಅವರ ಧಾರ್ಮಿಕತೆ ನಿಮಗೆ ಕೋಮುವಾದವಾಗಿ ಕಾಣಬಹುದು. ಏಕೆಂದರೆ ಕಾಮಾಲೆ ಕಣ್ಣಿಗೆ ಕಾಣುವುದೆಲ್ಲವೂ ಹಳದಿಯೇ. ನಿಮ್ಮ ಹಳದಿ ಕನ್ನಡಕವನ್ನು ತೆಗೆದು ನೋಡಿದರೆ ಕರಾವಳಿಯ ಅಭಿವೃದ್ಧಿ ನಿಮ್ಮನ್ನು ದಂಗುಬಡಿಸಬಹುದು. ಮೊದಲು ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದ ರಾಜ್ಯದಿಂದ ಹೊರಹೋಗುತ್ತಿರುವ ಕಂಪನಿಗಳನ್ನು ಇಲ್ಲೇ ಉಳಿಸಿಕೊಳ್ಳಿ. ಸಾಧ್ಯವಾದರೆ, ಇನ್ನುಳಿದ ಅವಧಿಯಲ್ಲಾದರೂ ಕಲಬುರಗಿಗೆ ಸ್ವಲ್ಪ ಅಭಿವೃದ್ಧಿಯನ್ನು ಪರಿಚಯಿಸಿ! ಎಂದು ಸಿಟಿ ರವಿ ತಾಕೀತು ಮಾಡಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ