Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಗರಸಭೆಯೊಳಗೆ ಬ್ಯಾಂಕ್ ಕೌಂಟರ್ ಆರಂಭ:  ಸಚಿವ ಸುಧಾಕರ್

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಗರದ ನಾಗರಿಕರು ಮನೆ ಕಟ್ಟಡಗಳ ಅಂಗಡಿ ಮುಗ್ಗಟ್ಟುಗಳ ಉದ್ದಿಮೆಗಳ ಕಂದಾಯ ಕಟ್ಟಲು ನಗರದ ಬ್ಯಾಂಕ್ ಗಳಿಗೆ ಅಲೆಯುವುದನ್ನು ತಪ್ಪಿಸುವ ಸಲುವಾಗಿ ನಗರಸಭೆಯೊಳಗೆ ಬ್ಯಾಂಕ್ ಆಫ್ ಬರೋಡದ ಕೌಂಟರ್ ತೆರೆಯಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ನಗರದ ನಗರಸಭೆಯಲ್ಲಿ ನಗರದ ಜನರಿಗೆ ಅನುಕೂಲವಾಗುವಂತೆ ನಗರಸಭೆಯಲ್ಲಿಯೇ ಬ್ಯಾಂಕ್ ಆಫ್ ಬರೋಡದ ಕೌಂಟರ್ ಒಂದನ್ನು ಪ್ರಾರಂಭಿಸಿ ಅವರು ಮಾತನಾಡಿದರು.

ಬಗ್ಗೆ ಬ್ಯಾಂಕ್ ಆಫ್ ಬರೋಡಾದ ಉನ್ನತ ಅಧಿಕಾರಿಗಳನ್ನು ಸಂಪರ್ಕಿಸಿ, ಚರ್ಚಿಸಿದಾಗ ಅವರು ಬಹಳ ಸಂತೋಷದಿಂದ ನಗರಸಭೆಯಲ್ಲಿ ತಮ್ಮ ಬ್ಯಾಂಕಿನ ಕೌಂಟರ್ ತೆರೆಯಲು ಒಪ್ಪಿಕೊಂಡರು.ಅದಕ್ಕಾಗಿ ಅವರುಗಳಿಗೆ ನಗರದ ಜನತೆಯ ಹಾಗೂ ನಗರಸಭೆ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸಚಿವರು ಹೇಳಿದರು.

ನಗರದ ನಾಗರಿಕರು ಬ್ಯಾಂಕ್ ಕೌಂಟರ್  ಸೌಲಭ್ಯ ಪಡೆದು ಹಣ ಕಟ್ಟುವುದರಿಂದ ಅವರ ಅಮೂಲ್ಯ ಸಮಯ ಹಾಗೂ ಶ್ರಮ ಉಳಿತಾಯವಾಗುತ್ತದೆ.ಆದ್ದರಿಂದ ಕೌಂಟರ್ ಸದುಪಯೋಗ ನಗರದ ಜನತೆ ಪಡೆದುಕೊಳ್ಳಬೇಕು ಎಂದರಲ್ಲದೆ, ನಗರದ ಜನತೆ ಕಂದಾಯ ಕಟ್ಟಿದರೆ ಮಾತ್ರ ನಗರದ ಅಭಿವೃದ್ಧಿ ಸಾಧ್ಯ ಆದ್ದರಿಂದ ನಾಗರಿಕರು ತಮ್ಮ ಮನೆ, ಕಟ್ಟಡ, ಉದ್ದಿಮೆಗಳ ಕಂದಾಯ ಕಟ್ಟುವ ಮೂಲಕ ನಗರದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಸಚಿವರು ಕರೆ ನೀಡಿದರು.

ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಅಜಯ್ ಕುಮಾರ್, ಉಪಾಧ್ಯಕ್ಷೆ ಅಂಬಿಕಾ ಆರಾಧ್ಯ, ನಗರಸಭೆ ಪೌರಾಯುಕ್ತ .ವಾಸೀಂ, ವ್ಯವಸ್ಥಾಪಕಿ ಬಿ.ಆರ್.ಮಂಜುಳಾ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್, ನಗರಸಭೆ ಸದಸ್ಯರುಗಳಾದ ಈರಲಿಂಗೇಗೌಡ, ಎಂ.ಡಿ.ಸಣ್ಣಪ್ಪ, ಗುಂಡೇಶ್ ಕುಮಾರ್, ಶಿವಕುಮಾರ್, ರಮೇಶ್ ಬಾಬು,  ಶಿವರಂಜಿನಿಯಾದವ್, ಗೀತಾ ಗಂಗಾಧರ್ ಸೇರಿದಂತೆ ಸಂಧ್ಯಾ, ಮೀನಾಕ್ಷಿ, ಲೆಕ್ಕಅಧೀಕ್ಷಕ ಗೋವಿಂದರಾಜು, ಜನಾರ್ಧನ್ ಕರಡಿ, ಸೇರಿದಂತೆ ನಗರಸಭೆ ನೌಕರರು ಹಾಗೂ ಸಿಬ್ಬಂದಿ, ನಗರದ ನಾಗರೀಕರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ