LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಂವಿಧಾನಿಕ ಹುದ್ದೆಗಳ ದುರ್ಬಳಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕ ಸಿ.ಟಿ. ರವಿ ತೀವ್ರ ವಾಗ್ದಾಳಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
"ಕೈಯಲ್ಲಿ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ಪ್ರದರ್ಶಿಸುವ ಕಾಂಗ್ರೆಸ್ ಪಕ್ಷ, ತನ್ನ ನಡವಳಿಕೆಗಳ ಮೂಲಕ ಆಚರಣೆಯಲ್ಲಿ ಸಂವಿಧಾನದ ಮೌಲ್ಯಗಳನ್ನೇ ಕೊಲೆ ಮಾಡುತ್ತಿದೆ" ಎಂದು ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

​ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಮತ್ತು ಉಪಸಭಾಪತಿ ಹುದ್ದೆಗಳು ಅತ್ಯಂತ ವಿಶಿಷ್ಟ ಗೌರವ, ಘನತೆ ಹೊಂದಿರುವ ಸಾಂವಿಧಾನಿಕ ಹುದ್ದೆಗಳಾಗಿವೆ. ಈ ಹುದ್ದೆಗಳನ್ನು ಪಕ್ಷಾತೀತವಾಗಿ ಗೌರವಿಸುವುದು ಪ್ರಜಾಪ್ರಭುತ್ವದ ಮೂಲಭೂತ ತತ್ವ ಮತ್ತು ಆಶಯವಾಗಿದೆ. ಆದರೆ ಕಾಂಗ್ರೆಸ್ ಪಕ್ಷವು ಈ ತತ್ವವನ್ನು ಗಾಳಿಗೆ ತೂರಿದೆ ಎಂದು ಅವರು ಆರೋಪಿಸಿದರು. 

​ಪಕ್ಷದ ಲೆಟರ್‌ಹೆಡ್‌ನಲ್ಲಿ ಸಾಂವಿಧಾನಿಕ ಹುದ್ದೆಗಳ ಪ್ರದರ್ಶನ:
​ಕಾಂಗ್ರೆಸ್ ಪಕ್ಷವು ತನ್ನ ಅಧಿಕೃತ ಲೆಟರ್‌ಹೆಡ್ ಮೇಲೆ ಸಾಂವಿಧಾನಿಕ ಹುದ್ದೆಗಳನ್ನು ಪ್ರದರ್ಶಿಸಿ ಪ್ರಕಟಿಸಿರುವುದನ್ನು ಕಟುವಾಗಿ ಟೀಕಿಸಿದ ಸಿ.ಟಿ. ರವಿ, "ಇಂತಹ ನಡೆ ಸಾಂವಿಧಾನಿಕ ಹುದ್ದೆಗಳ ಪಕ್ಷಾತೀತ ಸ್ವರೂಪಕ್ಕೆ ಧಕ್ಕೆ ತರುತ್ತದೆ. ಇದು ಕೇವಲ ಸಾಂಪ್ರದಾಯಿಕ ಉಲ್ಲಂಘನೆಯಷ್ಟೇ ಅಲ್ಲ, ಆ ಉನ್ನತ ಹುದ್ದೆಗಳ ಗೌರವಕ್ಕೆ ಬಗೆದ ಅಪಮಾನವಾಗಿದೆ" ಎಂದು ಹೇಳಿದರು. 

​ಸಂವಿಧಾನವನ್ನು ರಕ್ಷಿಸುವುದಾಗಿ ಭಾಷಣ ಮಾಡುವ ಕಾಂಗ್ರೆಸ್, ತನ್ನದೇ ದಿನನಿತ್ಯದ ನಡೆ-ನುಡಿಗಳ ಮೂಲಕ ಸಾಂವಿಧಾನಿಕ ಮೌಲ್ಯಗಳನ್ನು ಕಡೆಗಣಿಸುತ್ತಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ದೂರಿದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜವಳಿ ಉತ್ಪನ್ನ ರಫ್ತುಗೆ ಸರ್ಕಾರ ಉತ್ತೇಜನ:ಆಯುಕ್ತ ಎ.ಬಿ. ಬಸವರಾಜು ಎಂಪಿಆರ್ ಎಸಿಎಸ್ ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತಕಾಮನ್‌ವೆಲ್ತ್‌ಕ್ರೀಡಾಕೂಟದಲ್ಲಿ ಭಾರತಕ್ಕೆ 39 ಪದಕ: ಕ್ರೀಡಾಪಟುಗಳಿಗೆ ಹಾರ್ದಿಕ ಅಭಿನಂದನೆಕಾವೇರಿ ವಿಚಾರದಲ್ಲಿ ಸರ್ಕಾರದ ವಿಫಲತೆ: ಮಳೆಯಿಂದಷ್ಟೇ ರೈತರಿಗೆ ಆಸರೆ—ವಿಪಕ್ಷ ನಾಯಕ ಆರ್‌‌. ಅಶೋಕ್ ವಾಗ್ದಾಳಿನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ, ವೈಫಲ್ಯ: ಸರ್ಕಾರದ ವಿರುದ್ಧ ಅಶೋಕ್ ತೀವ್ರ ವಾಗ್ದಾಳಿಸಂಪುಟ ವಿಸ್ತರಣೆ ಹೈ ಡ್ರಾಮಾ: ಕೊನೆ ಕ್ಷಣದಲ್ಲಿ ಮಂಕಾಳಗೆ ಕೊಕ್, ಎಸ್.ಎಸ್.ಎಂಗೆ ಒಲಿದ ಸಚಿವ ಸ್ಥಾನ!ಕೈ ಸಂಪುಟ ಪುನಾರಚನೆ ಬಿರುಗಾಳಿ: ಸಿದ್ದರಾಮಯ್ಯ ಆಪ್ತರಾಗಿದ್ದ 12 ಹಿರಿಯ ನಾಯಕರಿಗೆ ಕೊಕ್!ಕಾಂಗ್ರೆಸ್‌ಗೆ ಸಂಪುಟ ವಿಸ್ತರಣೆ ಬಿಸಿ: ಜಯಚಂದ್ರ ಬೆಂಬಲಿಗರು, ಕುಂಚಿಟಿಗ ಸಮಾಜ ಆಕ್ರೋಶ – ರಾಜೀನಾಮೆಗೆ ಜಯಚಂದ್ರ ಸಿದ್ಧ?ಕೈ ಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಪಾಟೀಲ್ ವೇದಗಳನ್ನು ವ್ಯವಸ್ಥಿತವಾಗಿ ವಿಂಗಡಿಸಿದ ಸನಾತನ ಧರ್ಮದ ಪ್ರಸಾರಕ ವೇದವ್ಯಾಸರು: ಎಚ್ ಲಕ್ಷ್ಮೀದೇವಮ್ಮ