LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭದ್ರಾ ಮೇಲ್ದಂಡೆ ಯೋಜನೆಗೆ ಕೆ.ಎಂ.ಇ.ಆರ್.ಸಿ ಯಿಂದ ಅನುದಾನಕ್ಕೆ ಶಾಸಕ ಎನ್.ವೈ. ಗೋಪಾಲಕೃಷ್ಣ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಿಸಿರುವ ರೂ.5,300 ಕೋಟಿ ಹಣ ಬಿಡುಗಡೆಯಾಗುತ್ತಿಲ್ಲ. ಇದರಿಂದ ಯೋಜನೆ ಕುಂಠಿತವಾಗಿದೆ. ಇದರ ಬದಲಾಗಿ ಕೆ.ಎಂ.ಇ.ಆರ್.ಸಿ ಅನುದಾನವನ್ನೇ ಯೋಜನೆಗೆ ಬಳಸಲು ಅನುಮತಿ ನೀಡಬೇಕು ಎಂದು ಮೊಳಕಾಲ್ಮೂರು ಶಾಸಕ ಎನ್.ವೈ. ಗೋಪಾಲಕೃಷ್ಣ ಆಗ್ರಹಿಸಿದರು.

ಚಿತ್ರದುರ್ಗ ನಗರದ ಮರುಘಾಮಠದ ಅನುಭವ ಮಂಟಪದಲ್ಲಿ ಶನಿವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

 ಮಧ್ಯ ಕರ್ನಾಟಕ ಹಾಗೂ ಬಯಲುಸೀಮೆ ಭಾಗದ ಜನರಿಗೆ ಕುಡಿಯುವ ನೀರು ಹಾಗೂ ಕೃಷಿ ನೀರಾವರಿ ಕಲ್ಪಿಸುವಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಅತ್ಯಂತ ನಿರ್ಣಾಯಕವಾಗಿದೆ. ಈ ಯೋಜನೆಯ ಕಾಮಗಾರಿಗಳನ್ನು ನಿಗದಿತ ಸಮಯಕ್ಕೆ ಪೂರ್ಣಗೊಳಿಸಲು ಹಣಕಾಸಿನ ಕೊರತೆಯಾಗದಂತೆ ನೋಡಿಕೊಳ್ಳಬೇಕಿದೆ. ಕೆ.ಎಂ.ಇ.ಆರ್.ಸಿ ನಿಧಿಯಲ್ಲಿ ಲಭ್ಯವಿರುವ ಅನುದಾನವನ್ನು ಈ ಬೃಹತ್ ಯೋಜನೆಗೆ ಸದ್ಬಳಕೆ ಮಾಡಿಕೊಂಡರೆ, ಕಾಮಗಾರಿಗೆ ಹೆಚ್ಚಿನ ವೇಗ ಸಿಗಲಿದೆ ಎಂದು ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟರು.

ಸರ್ಕಾರ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಚರ್ಚಿಸಿ ಕೂಡಲೇ ಕೆ.ಎಂ.ಇ.ಆರ್.ಸಿ ಅನುದಾನ ಬಳಕೆ ನಿಯಮಗಳಲ್ಲಿ ಮಾರ್ಪಾಡು ತರಬೇಕು ಎಂದರು.

ಈಗಾಗಲೇ ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ನಗರಕ್ಕೆ ಹತ್ತಿರುವ ಗೋನೂರು ಅಕ್ವಡೆಕ್ಟ್ ಅವರೆ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಈ ಅಕ್ವಾ ಡೆಕ್ಟ್ ಕಾಮಗಾರಿ ಮುಂದುವರೆಯಲು ರೂ.360 ಕೋಟಿ ಅನುದಾನ ಬೇಕಾಗಿದೆ. ಯೋಜನೆ ಪೂರ್ಣಗೊಂಡರೆ ಮೊಳಕಾಲ್ಮೂರು ತಾಲ್ಲೂಕಿನ ಬಹುತೇಕ ಕೆರೆಗಳಿಗೆ ನೀರು ಲಭಿಸಲಿದೆ ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು. ಈ ಮಾತಿಗೆ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಯವರು ಧ್ವನಿಗೂಡಿಸಿದರು.

ಗೋನೂರು ಅಕ್ವಾಡೆಕ್ಟ್ ಕಾಮಗಾರಿಗೆ ಬೇಕಾಗಿರುವ ಅನುದಾನ ವಿವರಗಳೊಂದಿಗೆ ಪ್ರತ್ಯೇಕವಾಗಿ ಬಂದು ಭೇಟಿ ಮಾಡಿ ಚರ್ಚಿಸುವಂತೆ ಶಾಸಕರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚಿಸಿದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯುತ್ ಕೊರತೆ ಹಾಗೂ ರೈತರ ಸಮಸ್ಯೆ:  ಕೆ.ಎಸ್. ನವೀನ್ ಕಳವಳಭದ್ರಾ ಜಲಾಶಯದಿಂದ ವೇದಾವತಿ ನದಿಗೆ ನೀರು ಹರಿಸಿ: ಶಾಸಕ ಬಿ.ಜಿ.ಗೋವಿಂದಪ್ಪಭದ್ರಾ ಮೇಲ್ದಂಡೆ ಯೋಜನೆಗೆ ಕೆ.ಎಂ.ಇ.ಆರ್.ಸಿ ಯಿಂದ ಅನುದಾನಕ್ಕೆ ಶಾಸಕ ಎನ್.ವೈ. ಗೋಪಾಲಕೃಷ್ಣಫಸಲ್ ಬಿಮಾ ಯೋಜನೆಗೆ ದಿನಾಂಕ ವಿಸ್ತರಣೆಗೆ ಶಾಸಕ ಟಿ.ರಘುಮೂರ್ತಿ ಮನವಿರಾಷ್ಟ್ರೀಯ ವಿಪತ್ತು ಎಂದು ಘೋಷಣೆಗೆ ಪ್ರಧಾನ ಮಂತ್ರಿಗೆ ಪತ್ರ- ಡಾ.ಜಿ.ಪರಮೇಶ್ವರ್ಸರ್ಕಾರಿ ಶಾಲೆಗಳ ದತ್ತು ದತ್ತು ಸ್ವೀಕಾರ ಎಲ್ಲ ಖಾಸಗಿ ಶಾಲೆಗಳಿಗೆ ಅನ್ವಯವಾಗುವುದಿಲ್ಲ-ಡಿ.ಕೆ.ಶಿವಕುಮಾರ್ಭಾನುವಾರ ಭೂತ ನೆರಿಗೆ ಹಬ್ಬ ಆಚರಣೆಹೋರಾಟಗಾರರ ಮೇಲೆ ಹಲ್ಲೆ ಖಂಡಿಸಿ ಕನ್ನಡ ಜಾಗೃತ ಪರಿಷತ್ ಪ್ರತಿಭಟನೆ ಯೋಗ ಚಾಂಪಿಯನ್ ಸ್ಪರ್ಧೆಯಲ್ಲಿ ಆದಿತ್ಯ ಶಾಲೆಯ ವಿದ್ಯಾರ್ಥಿಗಳಿಗೆ ಚಿನ್ನ, ಬೆಳ್ಳಿ ಪದಕವಿಜೃಂಭಣೆಯಿಂದ ನಡೆದ ಆಷಾಡ ಏಕಾದಶಿ ಪೂಜೆ