LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಫಸಲ್ ಬಿಮಾ ಯೋಜನೆಗೆ ದಿನಾಂಕ ವಿಸ್ತರಣೆಗೆ ಶಾಸಕ ಟಿ.ರಘುಮೂರ್ತಿ ಮನವಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪ್ರಸಕ್ತ ಸಾಲಿನಲ್ಲಿ ಫಸಲ್ ಬಿಮಾ ಯೋಜನೆಗೆ ನೊಂದಾಯಿಸಿಕೊಳ್ಳಲು ಜುಲೈ 31 ಕೊನೆಯ ದಿನಾಂಕವಾಗಿದೆ. ರಾಜ್ಯ ಬೆಳೆ ವಿಮೆ ದಿನಾಂಕವನ್ನು ವಿಸ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮನವಿ ಮಾಡಿದರು.

ಚಿತ್ರದುರ್ಗ ನಗರದ ಮರುಘಾಮಠದ ಅನುಭವ ಮಂಟಪದಲ್ಲಿ ಶನಿವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯ ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲೂಕುಗಳು ಸದಾ ಬರಪೀಡಿತ ಪ್ರದೇಶಗಳಾಗಿದ್ದು, ರೈತರು ಬೆಳೆ ವಿಮೆಯನ್ನು ಹೆಚ್ಚಾಗಿ ನೆಚ್ಚಿಕೊಂಡಿದ್ದಾರೆ. 2025-26ನೇ ಸಾಲಿನಲ್ಲಿ ಜಿಲ್ಲೆಗೆ ಬಂದ ರೂ.81 ಕೋಟಿ ವಿಮಾ ಪರಿಹಾರದಲ್ಲಿ, ರೂ.53 ಕೋಟಿ ಹಣ ಚಳ್ಳಕೆರೆ ತಾಲೂಕಿನ ರೈತರಿಗೇ ತಲುಪಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಈ ಗಡುವನ್ನು ವಿಸ್ತರಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಮೂರು ಜಿಲ್ಲೆಗಳ ನಾಲ್ಕು ತಾಲೂಕುಗಳಿಗೆ ಕುಡಿಯುವ ನೀರು ಪೂರೈಸುವ ತುಂಗಭದ್ರಾ ಅಣೆಕಟ್ಟಿ ಹಿನ್ನೀರಿನ ಇಂಟೇಕ್ ಚಾನೆಲ್ ಮಟ್ಟವನ್ನು ಪ್ರಸ್ತುತ ಇರುವ 486 ಮೀಟರ್‍ಗಳಿಂದ 472 ಮೀಟರ್‍ಗೆ ಇಳಿಸಬೇಕು. ಹೀಗೆ ಮಾಡಿದರೆ ಮಾತ್ರ ಬೇಸಿಗೆ ಕಾಲದಲ್ಲೂ ಚಳ್ಳಕೆರೆ ಹಾಗೂ ಮೊಳಕಾಲ್ಮೂರಿಗೆ ನೀರು ಸಿಗಲು ಸಾಧ್ಯ. ಈ ಯೋಜನೆಯ ತಾಂತ್ರಿಕ ಪ್ರಸ್ತಾವನೆಯನ್ನು ನೀರಾವರಿ ಇಲಾಖೆ ತುಂಗಭದ್ರಾ ಮಂಡಳಿಗೆ ಕಳುಹಿಸಿದ್ದು, ಶೀಘ್ರ ಅನುಮೋದನೆ ದೊರಕಿಸಿಕೊಡಬೇಕೆಂದು ಕೋರಿದರು.

ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳನ್ನು ತ್ವರಿತಗೊಳಿಸಿ, ಕೆರೆಗಳಿಗೆ ನೀರು ಹರಿಸುವ ಕೆಲಸ ಆಗಬೇಕು. ಗೋನೂರು ಅಕ್ವಡಕ್ಟ್ ಕಾಮಗಾರಿ ಪೂರ್ಣಗೊಂಡರೆ ಚಳ್ಳಕೆರೆ, ಮೊಳಕಾಲ್ಮೂರು, ಜಗಳೂರು, ಪಾವಗಡ ಹಾಗೂ ಚಿತ್ರದುರ್ಗ ಭಾಗಗಳಿಗೆ ಅನುಕೂಲವಾಗಲಿದೆ ಎಂದರು.

ಕ್ಷೇತ್ರದ ದೇವರ ಎತ್ತುಗಳಿಗೆ ಮೇವಿನ ಕೊರತೆಯಾಗದಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಮೂಲಕ ತಕ್ಷಣವೇ ಮೇವಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಸಭೆಯಲ್ಲಿ ಆಗ್ರಹಿಸಿದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯುತ್ ಕೊರತೆ ಹಾಗೂ ರೈತರ ಸಮಸ್ಯೆ:  ಕೆ.ಎಸ್. ನವೀನ್ ಕಳವಳಭದ್ರಾ ಜಲಾಶಯದಿಂದ ವೇದಾವತಿ ನದಿಗೆ ನೀರು ಹರಿಸಿ: ಶಾಸಕ ಬಿ.ಜಿ.ಗೋವಿಂದಪ್ಪಭದ್ರಾ ಮೇಲ್ದಂಡೆ ಯೋಜನೆಗೆ ಕೆ.ಎಂ.ಇ.ಆರ್.ಸಿ ಯಿಂದ ಅನುದಾನಕ್ಕೆ ಶಾಸಕ ಎನ್.ವೈ. ಗೋಪಾಲಕೃಷ್ಣಫಸಲ್ ಬಿಮಾ ಯೋಜನೆಗೆ ದಿನಾಂಕ ವಿಸ್ತರಣೆಗೆ ಶಾಸಕ ಟಿ.ರಘುಮೂರ್ತಿ ಮನವಿರಾಷ್ಟ್ರೀಯ ವಿಪತ್ತು ಎಂದು ಘೋಷಣೆಗೆ ಪ್ರಧಾನ ಮಂತ್ರಿಗೆ ಪತ್ರ- ಡಾ.ಜಿ.ಪರಮೇಶ್ವರ್ಸರ್ಕಾರಿ ಶಾಲೆಗಳ ದತ್ತು ದತ್ತು ಸ್ವೀಕಾರ ಎಲ್ಲ ಖಾಸಗಿ ಶಾಲೆಗಳಿಗೆ ಅನ್ವಯವಾಗುವುದಿಲ್ಲ-ಡಿ.ಕೆ.ಶಿವಕುಮಾರ್ಭಾನುವಾರ ಭೂತ ನೆರಿಗೆ ಹಬ್ಬ ಆಚರಣೆಹೋರಾಟಗಾರರ ಮೇಲೆ ಹಲ್ಲೆ ಖಂಡಿಸಿ ಕನ್ನಡ ಜಾಗೃತ ಪರಿಷತ್ ಪ್ರತಿಭಟನೆ ಯೋಗ ಚಾಂಪಿಯನ್ ಸ್ಪರ್ಧೆಯಲ್ಲಿ ಆದಿತ್ಯ ಶಾಲೆಯ ವಿದ್ಯಾರ್ಥಿಗಳಿಗೆ ಚಿನ್ನ, ಬೆಳ್ಳಿ ಪದಕವಿಜೃಂಭಣೆಯಿಂದ ನಡೆದ ಆಷಾಡ ಏಕಾದಶಿ ಪೂಜೆ