Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರು ಹೈನುಗಾರಿಕೆ ಮೂಲಕ ಆರ್ಥಿಕ ಸದೃಢ-ಶಾಸಕ ಟಿ.ರಘುಮೂರ್ತಿ

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ರೈತ ಸಮುದಾಯ ತನ್ನ ಆರ್ಥಿಕ ಸ್ವಾಲಂಬನೆಗಾಗಿ ಕೃಷಿ ಮೇಳೆಯೇ ಅವಲಂಬಿತವಾಗಿದೆ. ಆದರೆ
, ಇತ್ತೀಚಿನ ದಿನಗಳಲ್ಲಿ ಹೈನುಗಾರಿಕೆಯಿಂದಲೂ ಹೆಚ್ಚು ಲಾಭವನ್ನು ಪಡೆಯಲು ಆರಂಬಿಸಿದ್ಧಾರೆ. ಕೃಷಿ, ತೋmಗಾರಿಕೆ ಬೆಳೆಯ ಜೊತೆಗೆ ಹೈನುಗಾರಿಕೆಯನ್ನೂ ಒಗ್ಗೂಡಿಸಿಕೊಂಡು ಉತ್ತಮ ಲಾಭಪಡೆಯಬೇಕೆಂದು ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ಅವರು, ಮಂಗಳವಾರ ನಗರಂಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರಹರಿನಗರದಲ್ಲಿ ನರಹರಿ ಸೇವಾಪ್ರತಿಷ್ಠಾನ, ಪಶುಪಾಲನ ಮತ್ತು ಪಶುವೈದ್ಯ ಇಲಾಖೆ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕ ಸಂಘಗಳ ಒಕ್ಕೂಟ, ನರಹರಿನಗರ ಹಾಲುಉತ್ಪಾದಕರ ಸಹಕಾರ ಸಂಘ, ನಗರಂಗೆರೆ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಒಂದುದಿನದ ಮಿಶ್ರತಳಿ ಹಸು-ಕರು ಪ್ರದರ್ಶನ ಮತ್ತು ಬರಡು ರಾಸುಗಳ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲುಒಕ್ಕೂಟ ಈ ಕಾರ್ಯಕ್ರಮವನ್ನು ಆಯೋಜಿಸುವಲ್ಲಿ ಪ್ರಧಾನ ಪಾತ್ರ ವಹಿಸಿದೆ. ವಿಶೇಷವಾಗಿ ಮಿಶ್ರತಳಿಹಸು-ಕರು ಪ್ರದರ್ಶನ, ಬಡರು ರಾಸುಗಳ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಹೈನುಗಾರಿಕೆಗೆ ಹೆಚ್ಚು ಪ್ರೋತ್ಸಾಹವನ್ನು ನೀಡಲು ಈ ಕಾರ್ಯಕ್ರಮ ಯೋಜಿಸಿದೆ. ಸಹಕಾರಿ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಹಾಲು ಒಕ್ಕೂಟವೂ ಸಹ ಸೇರ್ಪಡೆಯಾಗಿದೆ.

ನಾನು ಸಹ ಕಳೆದ ಹಲವಾರು ವರ್ಷಗಳ ಜಿಲ್ಲಾ ಡಿಸಿಸಿ ಬ್ಯಾಂಕ್ ನಿರ್ದೇಶಕನಾಗಿ ಸಹಕಾರಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವೆ. ಹೈನುಗಾರಿಕೆಗೆ ಹೆಚ್ಚು ಆದ್ಯತೆ ನೀಡಲು ಸಹಕಾರಿ ಕ್ಷೇತ್ರದಲ್ಲೂ ಹಲವಾರು ಯೋಜನೆಗಳಿವೆ ರೈತರು ಇದರ ಮಾಹಿತಿ ಪಡೆದು ಯೋಜನೆಗಳ ಸದುಪಯೋಗಕ್ಕೆ ಮುಂದಾಗಬೇಕಿದೆ. ಒಕ್ಕೂಟದ ಅಧಿಕಾರಿಗಳು ಹಾಗೂ ನಿರ್ದೇಶಕರು ಹೈನುಗಾರಿಕೆಯನ್ನು ಗ್ರಾಮ, ಗ್ರಾಮಗಳಿಗೂ ವಿಸ್ತರಿಸುವಂತೆ ಮನವಿ ಮಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಶಿವಮೊಗ್ಗ ಹಾಲುಒಕ್ಕೂಟದ ಜಿಲ್ಲಾ ನಿರ್ದೇಶಕ, ಸಹಕಾರಿ ದುರೀಣ ಬಿ.ಸಿ.ಸಂಜೀವಮೂರ್ತಿ, ಚಿತ್ರದುರ್ಗ ಜಿಲ್ಲೆಯಲ್ಲಿ ಹೈನುವಾರಿಕೆಯನ್ನು ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಎಲ್ಲಾ ತಾಲ್ಲೂಕು ಕೇಂದ್ರಗಳಿಗೆ ಭೇಟಿ ನೀಡಿ ಉಪಯುಕ್ತ ಮಾಹಿತಿ ಒದಗಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ತಟಸ್ಥವಾಗಿದ್ದ ಹಾಲುಒಕ್ಕೂಟ ಸಹಕಾರ ಸಂಘಗಳಿಗೆ ಪುನಶ್ಚೇತನ ನೀಡುವ ನಿಟ್ಟಿನಲ್ಲಿ ಸಾಕಷ್ಟು ಪರಿಶ್ರಮವಹಿಸಲಾಗಿದೆ. ಕಳೆದ ಕೆಲವು ತಿಂಗಳ ಹಿಂದೆ ಹಾಲುಒಕ್ಕೂಟದಲ್ಲಿ ಕಾರ್ಯನಿರ್ವಹಿಸುವಾಗ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ಒದಗಿಸಲಾಗಿದೆ. ಶಿವಮೊಗ್ಗ ಹಾಲು ಒಕ್ಕೂಟ ಹೈನುಗಾರಿಕೆಯ ಸರ್ವತೋಮುಖ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತದೆ ಎಂದರು.

ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ್ದ ನರಹರಿ ಪ್ರತಿಷ್ಠಾಪನದ ವೈ.ರಾಜರಾಂಸ್ವಾಮೀಜಿ ಮಾತನಾಡಿ, ನಮ್ಮ ಸಂಸ್ಕೃತಿಯಲ್ಲಿ ಗೋವನ್ನು ಮಾತೃಸ್ಥಾನದಲ್ಲಿಟ್ಟು ಪೂಜಿಸುತ್ತೇವೆ. ಗೋವಿನಿಂದ ಹಲವಾರು ಉಪಯೋಗವನ್ನು ಪ್ರತಿನಿತ್ಯ ಪಡೆದುಕೊಳ್ಳುತ್ತೇವೆ. ಗೋವಿನ ಪೂಜೆಯಿಂದ ನಮ್ಮೆಲ್ಲರಿಗೂ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ಪ್ರತೀತಿ ಇದೆ. ಇಂದು ಈ ಕ್ಷೇತ್ರದಲ್ಲಿ ಪಶುಸಂಗೋಪನ ಇಲಾಖೆ ಮತ್ತು ಶಿವಮೊಗ್ಗ ಹಾಲುಒಕ್ಕೂಟ ರೈತ ಸಮುದಾಯಕ್ಕೆ ಆತ್ಮವಿಶ್ವಾಸ ತುಂಬಲು ಹೈನುಗಾರಿಕೆ ಪ್ರೋತ್ಸಾಹಿಸಲು ಈ ಕಾರ್ಯಕ್ರಮ ಆಯೋಜಿಸಿದೆ. ಇದರ ಸದುಪಯೋಗ ರೈತ ಸಮುದಾಯಕ್ಕೆ ಹೆಚ್ಚು ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರಂಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಮ್ಮ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪಶುಸಂಗೋಪನೆ ಜಿಲ್ಲಾ ಉಪನಿರ್ದೇಶಕ ಕುಮಾರಸ್ವಾಮಿ, ಪಶುವೈದ್ಯಾಧಿಕಾರಿ ಡಾ.ರೇವಣ್ಣಶ್ರೀನಿವಾಸ್‌ಬಾಬು, ಡಾ.ಮುಕುಂದನಾಯಕ್, ಹಾಲುಒಕ್ಕೂಟದ ಅಧ್ಯಕ್ಷ ವಿದ್ಯಾಧರ, ನಿರ್ದೇಶಕ ಜಿ.ಪಿ.ರೇವಣಸಿದ್ದಪ್ಪ, ಜಿ.ಬಿ.ಶೇಖರಪ್ಪ, ಎನ್.ಜಿ.ಶೇಖರ್, ಕೆ.ಆರ್.ಮುರುಳೀಧರ, ಡಾ.ಎನ್.ಎಂ.ಮೂರ್ತಿ, ವಿಸ್ತಾರಣಾಧಿಕಾರಿ ನಯಾಜ್‌ಬೇಗ್, ಕೃಷ್ಣಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಎನ್.ಮಂಜುನಾಥ, ಪಿಡಿಒ ಎಂ.ರಾಮಚಂದ್ರಪ್ಪ, ಮುಖಂಡ ಶಶಿಧರ, ಶೈಲಜಾಮಂಜುನಾಥ ಮುಂತಾದವರು ಉಪಸ್ಥಿತರಿದ್ದರು. 

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ