Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮ ಹಣ ವರ್ಗಾವಣೆ ಕೆಐಎಡಿಬಿ ನಿವೃತ್ತ ಅಧಿಕಾರಿ, ಒಬ್ಬ ಮಧ್ಯವರ್ತಿ ಬಂಧನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಪರಿಹಾರ ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಕೆಐಎಡಿಬಿಯ ನಿವೃತ್ತ ಅಧಿಕಾರಿ, ಒಬ್ಬ ಮಧ್ಯವರ್ತಿ ಬಂಧಿಸಿದೆ.


ಬಂಧಿತ ಆರೋಪಿಗಳಾದ ಕೆಐಎಡಿಬಿಯ ನಿವೃತ್ತ ವಿಶೇಷ ಭೂಸ್ವಾಧೀನ ಅಧಿಕಾರಿ ವಸಂತಕುಮಾರ ದುರ್ಗಪ್ಪ ಸಜ್ಜನ್ ಮತ್ತು ಮೈಬೂಬ್ ಅಲ್ಲಾಬುಕ್ಷ ದುಂಡಸಿ ಅವರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಇಡಿ ಹೇಳಿಕೆಯಲ್ಲಿ ತಿಳಿಸಿದೆ.

ಸದರಿ ಆರೋಪಿಗಳ ಬಂಧನವು 72 ಕೋಟಿ ರೂ, ಮೌಲ್ಯದ ಪರಿಹಾರ ಬಿಡುಗಡೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ಇದಾಗಿದೆ. KIADB ಕರ್ನಾಟಕದಲ್ಲಿ ಭೂಸ್ವಾಧೀನಕ್ಕೆ ನೋಡಲ್ ಏಜೆನ್ಸಿಯಾಗಿದೆ. ಹಣ ವರ್ಗಾವಣೆ ಪ್ರಕರಣ ಧಾರವಾಡ ಜಿಲ್ಲಾ ಸಿಐಡಿ ಸಲ್ಲಿಸಿದ ಎಫ್‌ಐಆರ್ ಮತ್ತು ಆರೋಪಪಟ್ಟಿಯನ್ನು ಆಧರಿಸಿದೆ. ಸಜ್ಜನ್ ಮತ್ತು ಧಾರವಾಡದ ಕೆಐಎಡಿಬಿಯ ಕೆಲವು ಅಧಿಕಾರಿಗಳು ಭೂ ದಲ್ಲಾಳಿಗಳು ಮತ್ತು ಇತರ ಕೆಲವು ಆರೋಪಿಗಳೊಂದಿಗೆ ಸಂಚು ನಡೆಸಿ 19.99 ಕೋಟಿ ರೂಗಳನ್ನು ಏಳು ವ್ಯಕ್ತಿಗಳಿಗೆ ಭೂಸ್ವಾಧೀನಕ್ಕೆ ಪರಿಹಾರದ ನೆಪದಲ್ಲಿ ಬಿಡುಗಡೆ ಮಾಡಿದ್ದರು ಎನ್ನಲಾಗಿದೆ.

ಮತ್ತೊಮ್ಮೆ ಇದೇ ವ್ಯಕ್ತಿಗಳಿಗೆ ಪರಿಹಾರ ಬಿಡುಗಡೆ ಮಾಡಿದ್ದರಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿತು ಎಂದು ಫೆಡರಲ್ ಏಜೆನ್ಸಿ ಹೇಳಿದೆ. 2021-22ರ ಅವಧಿಯಲ್ಲಿ ಭೂಸ್ವಾಧೀನಕ್ಕೆ ಪರಿಹಾರವಾಗಿ KIADB ಯಿಂದ ಹಣವನ್ನು ವಂಚನೆಯಿಂದ ತೆಗೆಯಲಾಗಿತ್ತು ಎಂದು ಇಡಿ ಸಂಸ್ಥೆಯು ಪತ್ತೆ ಮಾಡಿದೆ. ಆದರೆ, 2010-12ರಲ್ಲಿ ಮೂಲ ಜಮೀನು ಮಾರಾಟಗಾರರಿಗೆ ಪರಿಹಾರ ನೀಡಿರುವುದು ತನಿಖೆಯಿಂದ ತಿಳಿದುಬಂದಿದೆ. ವಂಚನೆಯಿಂದ ತೆಗೆದ ಹಣವನ್ನು ನಕಲಿ ಗುರುತು ಮತ್ತು ವಿಳಾಸ ಪುರಾವೆಗಳೊಂದಿಗೆ ತೆರೆಯಲಾದ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂದು ತನಿಖಾ ಸಂಸ್ಥೆ ಹೇಳಿದೆ.

ನಿಜವಾದ ವಂಚನೆಯ ಪಾವತಿಗಳು ಎಫ್‌ಐಆರ್ ಮೊತ್ತವನ್ನು ಮೀರಿದೆ, ಅಂದಾಜು 72 ಕೋಟಿ ರೂ.ಗೆ ತಲುಪಿದೆ. ಈ ಪಾವತಿಗಳನ್ನು ನಕಲಿ ಗುರುತಿನೊಂದಿಗೆ ತೆರೆಯಲಾದ ಬ್ಯಾಂಕ್ ಖಾತೆಗಳಿಗೆ ಮಾಡಲಾಗಿದೆ ಮತ್ತು ನಂತರ ಶೆಲ್ ಖಾತೆಗಳ ಮೂಲಕ ಲಾಂಡರ್ ಮಾಡಲಾಗಿದೆ. ಈ ಹಣವನ್ನು ಸ್ಥಿರ ಆಸ್ತಿಗಳು, ವಾಹನಗಳು, ವಸತಿ ಆಸ್ತಿಗಳು ಮತ್ತು ಸ್ಥಿರ ಠೇವಣಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಬಳಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ಕಳೆದ ತಿಂಗಳು ಕರ್ನಾಟಕದಾದ್ಯಂತ ಹನ್ನೆರಡು ಸ್ಥಳಗಳಲ್ಲಿ ಈ ಪ್ರಕರಣದಲ್ಲಿ ಏಜೆನ್ಸಿಯು ಹುಡುಕಾಟ ನಡೆಸಿತು ಎನ್ನುವುದನ್ನು ಸ್ಮರಿಸಬಹುದಾಗಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ