Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜಕಾರಣಕ್ಕೆ ಬೇಕಿದೆ ತಾಯಿ ಹೃದಯ-ರಘುಗೌಡ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜಕಾರಣಕ್ಕೆ ಬೇಕಿದೆ ತಾಯಿ ಹೃದಯ. ಪ್ರಜಾಪ್ರಭುತ್ವದ ರಾಜಕೀಯ ಕ್ಷೇತ್ರದಲ್ಲಿ ಪುರುಷರಷ್ಟೇ ಮಹಿಳೆಯರು ಸಾರ್ವಜನಿಕ ನಿರ್ಧಾರಗಳನ್ನು ಸಮರ್ಥವಾಗಿ ನಿಭಾಯಿಸಲು ಶಕ್ತರಾಗಿದ್ದಾರೆ. ಇದಕ್ಕೆ ಸಾಕ್ಷಿ ಗುಡ್ಡೆಯಾಗಿ ಹಲವಾರು ಮಹಿಳಾ ರಾಜಕಾರಣಿಗಳ ವ್ಯಕ್ತಿತ್ವದಲ್ಲಿ ಕಂಡುಬಂದಿವೆ.

ಮಹಿಳೆಯರು ಹಾಗೂ ಪುರುಷರು ಆಡಳಿತಾತ್ಮಕವಾಗಿ ಸಮತೋಲಿತ ನೀತಿಯಲ್ಲಿ ಭಾಗವಹಿಸಲು ಸ್ಥಳೀಯ ಸಂಸ್ಥೆಗಳ ಆಡಳಿತ ವ್ಯವಸ್ಥೆಯಲ್ಲಿ ಶೇ.50 ರಷ್ಟು ಮೀಸಲಾತಿ  ಕಲ್ಪಿಸಲಾಗಿದೆ. ಇದು ಪ್ರಭುತ್ವದ ಅಸ್ತಿತ್ವದಲ್ಲಿ ಸಮಾನತೆ ನೀತಿಯನ್ನು ಪ್ರದರ್ಶಿಸುತ್ತಿದೆ ಎಂದರು.

ಲೋಕಸಭೆ ಹಾಗೂ ವಿಧಾನಸಭೆಯ  ಸರ್ಕಾರದ ಆಡಳಿತದಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಅವಕಾಶ ಮೀಸಲು ನೀಡಬೇಕು ಎಂಬ ಅಂಗೀಕಾರ ಕೇಂದ್ರ ಸರ್ಕಾರದ ಮುನ್ನೆಲೆಯಲ್ಲಿದೆ.

ಚುನಾವಣೆ ಪ್ರಕ್ರಿಯೆ ನೀತಿಯಲ್ಲಿ ಮೀಸಲಾತಿ ಇಲ್ಲದೇ ಮಹಿಳೆಯರು ಪುರುಷರ ಜೊತೆಗೆ ಸ್ಪರ್ಧಿಸಿ ಗೆಲ್ಲುವುದು ಕಷ್ಟವಿದೆ. ಈಗಿನ ರಾಜಕಾರಣದಲ್ಲಿ ಹಣ ಹಾಗೂ ಗುಂಪುಗಾರಿಕೆಯ ಶಕ್ತಿಯ ಕಾರುಬಾರು ಹೆಚ್ಚಾಗಿದೆ. ಯಾವುದೇ ಸ್ಪರ್ಧಾತ್ಮಕ ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರದಲ್ಲಿ ಮಹಿಳೆಯರು ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸುವುದು ಕಷ್ಟ ಎಂಬ ಕಾರಣಕ್ಕೆ ಮಹಿಳೆಯರಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸುವ ಮಸೂದೆ ಜಾರಿ ಹಂತದಲ್ಲಿದೆ.

ಪುರುಷ ಪ್ರಧಾನ ದೇಶವಾದ ಭಾರತದಲ್ಲಿ ಸುಮಾರು 40 ವರ್ಷಗಳ ಹಿಂದೆಯೇ ದೇಶದ ಅತ್ಯುನ್ನತ ಸ್ಥಾನವಾದ ಪ್ರಧಾನಮಂತ್ರಿ ಸ್ಥಾನದಲ್ಲಿ 17 ವರ್ಷಗಳ ಕಾಲ ಆಡಳಿತ ನೀಡಿದ ಶ್ರೀಮತಿ ಶ್ರೀ ಇಂದಿರಾಗಾಂಧಿಯವರು ಈ ವಿಚಾರವು ದೇಶದ ಇತಿಹಾಸ ಪುಟಗಳಲ್ಲಿ ಅಜರಾಮರವಾಗಿ ದಾಖಲಾಗಿದೆ.

ಒಕ್ಕೂಟ ವ್ಯವಸ್ಥೆಯಲ್ಲಿ ದೇಶದ ಹಲವು ರಾಜ್ಯಗಳಲ್ಲಿ ಮಹಿಳೆಯರು ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದಾರೆ. ಅವರಲ್ಲಿ ಪ್ರಮುಖರು ಮಾಯಾವತಿ, ಜಯಲಲಿತಾ, ಮಮತಾ ಬ್ಯಾನರ್ಜಿ. ದೇಶದಲ್ಲಿ ರಾಷ್ಟ್ರಪತಿ ಸ್ಥಾನ, ಕೇಂದ್ರ ಸರ್ಕಾರಗಳಲ್ಲಿ ಮಂತ್ರಿ ಹಾಗೂ ರಾಜ್ಯ ಸರ್ಕಾರಗಳಲ್ಲಿ ಮಂತ್ರಿಯಾಗಿ ಕಾರ್ಯನಿರ್ವಹಿಸಿರುವ ಮಹಿಳೆಯರು. ಸ್ಥಳೀಯ ಸಂಸ್ಥೆಗಳು ಸೇರಿದಂತೆ ಸಹಕಾರ ಕ್ಷೇತ್ರದ ಆಡಳಿತದಲ್ಲಿ ಅಧ್ಯಕ್ಷರಾಗಿ ಸದಸ್ಯರಾಗಿ ಮಹಿಳೆಯರು ಸೇವೆ ಸಲ್ಲಿಸಿದ್ದಾರೆ.
ಲೇಖನ-ರಘು ಗೌಡ
9916101265
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ