Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೇಷ್ಮೆ ಬೆಳೆಗಾರರಿಗೆ ಸರ್ಕಾರದ ಹಲವು ಸೌಲಭ್ಯ: ಸಂಸದ ಈರಣ್ಣ ಕದಡಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತವು ಪ್ರಪಂಚದಲ್ಲೇ ರೇಷ್ಮೆ ಬೆಳೆ ಬೆಳೆಯುವಲ್ಲಿ ಎರಡನೇ ಸ್ಥಾನದಲ್ಲಿದ್ದು, ಇತ್ತೀಚಿನ ದಿನಗಳಲ್ಲಿ ರೇಷ್ಮೆ ಉಡುಪುಗಳಷ್ಟೇ ಅಲ್ಲದೆ, ವಿವಿಧ ಉತ್ಪನ್ನಗಳ ತಯಾರಿಕೆಯಲ್ಲಿ ಹೆಸರುವಾಸಿಯಾಗಿದೆ. ರೇಷ್ಮೆ ಉದ್ಯಮಕ್ಕೂ ರೈತರಿಗೆ ನೀಡುವಂತೆ ಉಧ್ಯಮಿಗಳಿಗೂ  ಸರ್ಕಾರದ ಬೆಂಬಲ ಸೌಲಭ್ಯ ದೊರೆಯುತ್ತಿದೆ.

ಭಾರತದಲ್ಲಿ ತಯಾರಾಗುವ ರೇಷ್ಮೆ ಉಡುಪು ಹಾಗು ಅದರ ಉಪ ಉತ್ಪನ್ನಗಳಿಗೆ ಭಾರೀ ಬೇಡಿಕೆ ಉಂಟಾಗಿದ್ದು, ಯುವ ಬೆಳೆಗಾರರು ಮತ್ತು ಉಧ್ಯಮಿಗಳು ಈ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಸದ ಈರಣ್ಣ ಕದಡಿ ತಿಳಿಸಿದರು.

ಅತ್ಯಾಧುನಿಕ ತಂತ್ರಜ್ಙಾನ ಬಳಸಿದಲ್ಲಿ ಭಾರತ ಮೊದಲ ಸ್ಥಾನ:
ರೇಷ್ಮೇ ಉತ್ಪಾದನೆಯಲ್ಲಿ ಚೀನ 52 ಮೆಟ್ರಿಕ್‌ಟನ್‌ಉತ್ಪಾದನೆಯಲ್ಲಿ ಮಾಡುವ ಮೊದಲ ಸ್ಥಾನದಲ್ಲಿದ್ದರೆ ಭಾರತ 39 ಮೆಟ್ರಿಕ್‌ಟನ್‌ಉತ್ಪಾದನೆಯ ಮೂಲಕ ಎರಡನೇ ಸ್ಥಾನದಲ್ಲಿದೆ. ಚೀನ ಬಳಸುವಂತೆ ಭಾರತದಲ್ಲೂ ರೇಷ್ಮೇ ಕೃಷಿ ಮತ್ತು ಅದರ ಉತ್ಪನ್ನ ಗಳ ತಯಾರಿಕೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಕೊಂಡಲ್ಲಿ ಮೊದಲ ಸ್ಥಾನದಲ್ಲಿ ನಾವಿರಲಿದ್ದೇವೆ ಎಂದು ಸೆಂಟ್ರಲ್ ಸಿಲ್ಕ್ ಬೋರ್ಡ್‌ನ ಪ್ರಾದೇಶಿಕ ಸಹಾಯಕ ಕಾರ್ಯದರ್ಶಿ ಪ್ರಜಕ್ತಾ ಎಲ್. ವರ್ಮಾ ತಿಳಿಸಿದರು.

ನಗರದ ಜಿಕೆವಿಕೆ ಯ  ಸಮ್ಮೇಳನ ಸಭಾಂಗಣದಲ್ಲಿ  ನಡೆದ ಕೇಂದ್ರ ರೇಷ್ಮೆ ಮಂಡಳಿಯ (Seri-Stakeholders Meet) ಸೇರಿ-ಪಾಲುದಾರರ ಸಭೆಯನ್ನು ಉದ್ಘಾಟಿಸಿ ಅವರು ಈ ವಿಚಾರಗಳನ್ನು ಪ್ರಸ್ತಾಪಿಸಿದರು.

ಈ ಸಂದರ್ಭದಲ್ಲಿ ಪ್ರಜಕ್ತಾ ಎಲ್. ವರ್ಮಾ, ಜಂಟಿ ಕಾರ್ಯದರ್ಶಿ, ಬಟ್ಟೆ ಸಚಿವಾಲಯ, ಭಾರತ ಸರ್ಕಾರ, ಪಿ. ಶಿವಕುಮಾರ್, ಸದಸ್ಯ ಕಾರ್ಯದರ್ಶಿ, ಸೆಂಟ್ರಲ್ ಸಿಲ್ಕ್ ಬೋರ್ಡ್, ರಚನಾ ಶಾ, ಕಾರ್ಯದರ್ಶಿ, ಬಟ್ಟೆ ಸಚಿವಾಲಯ, ನವದೆಹಲಿ, ಎ. ಜಿ. ಲಕ್ಷ್ಮೀನಾರಾಯಣ ವಾಲ್ಮೀಕಿ, ಸಂಸದ, ಅನಂತಪುರ ಕ್ಷೇತ್ರ, ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ರೇಷ್ಮೆ ಉಪ ಉತ್ಪನ್ನಗಳ ಪ್ರದರ್ಶನ ಸಹ ಆಯೋಜಿಸಲಾಗಿತ್ತು, ಇದರಿಂದ ರೇಷ್ಮೆ ಉದ್ಯಮದ ತಾಂತ್ರಿಕ ಸಾಧನೆಗಳು ಮತ್ತು ಭವಿಷ್ಯದ ವಿಸ್ತರಣೆಯ ಕುರಿತಾದ ಅರಿವು ಮೂಡಿಸಲಾಯಿತು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ