Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಂದಿಗಳ ಹಾವಳಿ ತಡೆಗೆ ಮುಂದಾದ ನಗರಸಭೆ

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಗರಸಭೆ ಆಡಳಿತ ಹಂದಿ ಸ್ಥಳಾಂತರಕ್ಕೆ ಹಲವು ದಿನಗಳ ಗಡುವು ನೀಡಿತ್ತು. ಆದರೆ ಹಂದಿಗಳ ಮಾಲೀಕರು ಸ್ಥಳಾಂತರ ಮಾಡದೆ ನಿರ್ಲಕ್ಷ್ಯ ಮಾಡಿದ್ದರಿಂದ ಮತ್ತು ನಗರಸಭೆ ನೀಡಿದ್ದ ಗಡುವು ಮುಕ್ತಾಯವಾದ ಕಾರಣ ನಗರಸಭೆಯೇ ಹಂದಿ ಹಿಡಿಯುವ ಕಾರ್ಯಾಚರಣೆಗೆ ಇಳಿದಿದೆ.


ಹಿರಿಯೂರು ನಗರ ವ್ಯಾಪ್ತಿಯಲ್ಲಿ ಹಂದಿಗಳ ಹಾವಳಿ ಹೆಚ್ಚಾಗಿರುವ ಕಾರಣ ಈಗಾಗಲೇ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರುಗಳು ಹಾಗೂ ಪೌರಾಯುಕ್ತರು ಮತ್ತು ಸದಸ್ಯರುಗಳ ಸಮ್ಮುಖದಲ್ಲಿ ಹಂದಿ ಮಾಲೀಕರಿಗೆ ಹಲವಾರು ಬಾರಿ ಸಭೆ ಆಯೋಜಿಸಿ ಅಂತಿಮವಾಗಿ ಕಳೆದ ಆಗಸ್ಟ್-11 ರಂದು ಕೌನ್ಸಿಲ್ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿತ್ತು.


ಸಭೆಯ ನಂತರವೂ 3 ದಿನಗಳ ಕಾಲವಕಾಶ ನೀಡಿ ನೋಟಿಸ್ ಜಾರಿಮಾಡಲಾಗಿತ್ತು. ಆದರೆ ಈ ನೋಟಿಸ್ ಗೂ ಹಂದಿಗಳ ಮಾಲೀಕರ ಕ್ಯಾರೇ ಎನ್ನಲಿಲ್ಲ.


ಹಂದಿಗಳನ್ನು ನಗರ ಪ್ರದೇಶದಿಂದ ಹೊರಗಡೆ ಸಾಕಾಣಿಕೆ ಮಾಡಿಕೊಳ್ಳದೆ ನಗರದ ಬೀದಿ ಬೀದಿಗಳಲ್ಲಿ ಬೀಡಾಡಿ ಹಂದಿಗಳು ಮೊದಲಿನಂತೆ ಒಡಾಡುತ್ತಿರುವುದು ಕಂಡುಬಂದಿರುವುದರಿಂದ ಶನಿವಾರ ಬೀಡಾಡಿ ಹಂದಿಗಳನ್ನು ಹಿಡಿಸಿ ನಗರ ಪ್ರದೇಶದಿಂದ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಲು ನಗರಸಭೆ ಕ್ರಮವಹಿಸಿದೆ.




ಮಾಲೀಕರು ನಗರದಾಚೆಗೆ ಹಂದಿಗಳನ್ನು ಸಾಗಿಸಲು ಮೀನಾಮೇಷ ಎಣಿಸಿದ್ದರು. ಅನಿವಾರ್ಯವಾಗಿ ನಗರಸಭೆ ಹಂದಿಗಳನ್ನು ಹಿಡಿಯಲು ಕಾರ್ಯಾಚರಣೆ ಮಾಡಿ 20ಕ್ಕೂ ಹೆಚ್ಚಿನ ಹಂದಿಗಳನ್ನು ಹಿಡಿಯಲಾಯಿತು. ನಗರದಿಂದ 25 ಕಿಲೋ ಮೀಟರ್ ದೂರಕ್ಕೆ ಸಾಗಿಸುತ್ತೇವೆ.

ಇದರ ಮಧ್ಯ ಹಂದಿಗಳ ಮಾಲೀಕರು ಆಗಮಿಸಿ ನಗರದಿಂದ ದೂರ ಸಾಗಾಣಿಕೆ ಮಾಡುತ್ತೇವೆಂದು ಮನವಿ ಮಾಡಿಕೊಂಡಿದ್ದರಿಂದ ಮುಂದಿನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ ಮಾಡಿದ್ದು ಅದೇ ಚಾಳಿ ಮುಂದುವರೆಸಿದರೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಎಂ.ವಾಸೀಂ, ಪೌರಾಯುಕ್ತರು, ನಗರಸಭೆ, ಹಿರಿಯೂರು.

 

 

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ