Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನನ್ನ ಆದರ್ಶ ಶಾಲೆ ಓನ್ ವರ್ಲ್ಡ್ ಇಂಟರ್ ನ್ಯಾಷನಲ್ ಶಾಲೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನನ್ನ ಅಭಿಪ್ರಾಯದಲ್ಲಿ ನನ್ನ ಶಾಲೆ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಅತ್ಯಂತ ಮಹತ್ವ ನೀಡುವ ಸ್ಥಳವಾಗಿದೆ.  ಶಾಲೆಯ ಪರಿಸರ ಸ್ವಚ್ಛವಾಗಿದ್ದು, ಶಾಂತವಾಗಿದ್ದು, ಮಕ್ಕಳಿಗೆ ಕಲಿಯಲು ಅನುಕೂಲಕರವಾಗಿದೆ. ವಿಶಾಲವಾದ ತರಗತಿಗಳು, ಉತ್ತಮ ಗಾಳಿಯ ಹರಿವು, ಸಾಕಷ್ಟು ಬೆಳಕು ಮತ್ತು ಅಗತ್ಯ ಸೌಕರ್ಯಗಳು ವಿದ್ಯಾರ್ಥಿಗಳ ಕಲಿಕೆಗೆ ಸಹಾಯ ಮಾಡುತ್ತಿದೆ.

ಶಾಲೆಯಲ್ಲಿ ಶಿಕ್ಷಣದ ಜೊತೆಗೆ ಶಿಸ್ತು, ಮೌಲ್ಯಗಳು ಮತ್ತು? ಜೀವನ ಕೌಶಲ್ಯಗಳನ್ನೂ ಕಲಿಸುತ್ತಿದೆ. ವಿದ್ಯಾರ್ಥಿಗಳ ಬೌದ್ಧಿಕ, ಮಾನಸಿಕ ಮತ್ತು   ಅಭಿವೃದ್ಧಿಗೆ ಅವಕಾಶ ನೀಡುವ ಚಟುವಟಿಕೆಗಳ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಹಪಾಠ್ಯ ಚಟುವಟಿಕೆಗಳು ಮಕ್ಕಳ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತಿವೆ.

ಗ್ರಂಥಾಲಯ, ವಿಜ್ಞಾನ ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್ ಮುಂತಾದ ಸೌಕರ್ಯಗಳು ವಿದ್ಯಾರ್ಥಿಗಳ ಜ್ಞಾನವನ್ನು ವಿಸ್ತರಿಸಲು ಬಹಳ ಉಪಯುಕ್ತವಾಗುತ್ತಿದೆ. ಆಧುನಿಕ ತಂತ್ರಜ್ಞಾನವನ್ನು ಬಳಸಿ ಬೋಧನೆ ನಡೆಸುವುದರಿಂದ ಕಲಿಕೆ ಹೆಚ್ಚು ಪರಿಣಾಮಕಾರಿಯಾಗುತ್ತದೆ.

ಶಿಕ್ಷಕರು ವಿದ್ಯಾರ್ಥಿಗಳ ಮಾರ್ಗದರ್ಶಕರಾಗಿದ್ದು, ಅವರಿಗೆ ಪ್ರೇರಣೆಯಾಗಿ ನಿಲ್ಲಬೇಕು. ಪ್ರತಿ ವಿದ್ಯಾರ್ಥಿಯಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಅದನ್ನು ಬೆಳಸಲು ಸಹಾಯ ಮಾಡಬೇಕು. ಸ್ನೇಹಪರ ವಾತಾವರಣದಲ್ಲಿ ಕಲಿಕೆ ನಡೆಯುವುದರಿಂದ ವಿದ್ಯಾರ್ಥಿಗಳು ನಿರ್ಭಯವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲಾಗುತ್ತಿದೆ.

ಆದ್ದರಿಂದನಮ್ಮ ಓನ್ ವರ್ಲ್ಡ್ ಇಂಟರ್ ನ್ಯಾಷನಲ್ ಶಾಲೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯಗಳನ್ನು ಬೆಳೆಸುವ ಕೇಂದ್ರವಾಗಿದೆ. ಇಂತಹ ಶಾಲೆಗಳು ವಿದ್ಯಾರ್ಥಿಗಳನ್ನು ಭವಿಷ್ಯದ ಸವಾಲುಗಳನ್ನು ಎದುರಿಸಲು ಸಮರ್ಥರಾಗುವಂತೆ ಮಾಡುತ್ತಿವೆ.
ಕಿರು ಲೇಖನ: ಛಾಯ, 8ನೇ ತರಗತಿ, ಒನ್ ವರ್ಲ್ಡ್ ಇಂಟರ್‌ನ್ಯಾಷನಲ್ ಸ್ಕೂಲ್, ಸರ್ಜಾಪುರ, ಬೆಂಗಳೂರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ