Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅತ್ತಿಗೆ ನಾದಿನಿಯರು ಖುಷಿ ಖುಷಿಯಾಗಿ ಆಚರಿಸುವ ಡಿಚ್ಚಿ ಹಬ್ಬ

Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೋಟೆನಾಡಿನಲ್ಲಿ ಅತ್ತಿಗೆ ನಾದಿನಿಯರು ತಲೆ ತಲೆ ಹಿಡಿದು ಡಿಕ್ಕಿ ಹೊಡೆದುಕೊಂಡು ಖುಷಿ ಖುಷಿಯಾಗಿ ವಿಶೇಷ ಹಬ್ಬವನ್ನು ಆಚರಿಸಲಾಗುತ್ತಿದೆ. ಡಿಕ್ಕಿ ಹಬ್ಬದ ಆಚರಣೆ ಮೂಲಕ ತಲೆಗೆ ತಲೆ ಡಿಕ್ಕಿ ಹೊಡೆಯುವ ಅಪರೂಪದ ಬುಡಕಟ್ಟು ಸಾಂಪ್ರದಾಯದ ಈ ಹಬ್ಬ ಆಚರಣೆಯಲ್ಲಿದೆ.
ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಚಿಕ್ಕೀರಣ್ಣನ ಮಾಳಿಗೆ (ಸಿ.ಎನ್.ಮಾಳಿಗೆ) ಗ್ರಾಮದಲ್ಲಿ ಬುಡಕಟ್ಟು ಸಮುದಾಯದ ಜನ ವಿಶಿಷ್ಟ ಹಬ್ಬ ಆಚರಿಸುತ್ತಾರೆ. ಅಹೋಬಲ ನರಸಿಂಹಸ್ವಾಮಿ ದೇವರ ಜಾತ್ರೆ, ಉತ್ಸವದ ಅಂಗವಾಗಿ ಈ ಆಚರಣೆ ನಡೆಯುತ್ತದೆ. ದೇವರ ಉತ್ಸವ ಮೆರವಣಿಗೆ ವೇಳೆ ನೆಲಕ್ಕೆ ಬಾಳೆ ಹಣ್ಣು, ಬೆಲ್ಲ ಹಾಕಿ ಸೇವಿಸುವ ಸಾಂಪ್ರದಾಯಿಕ ಮಣೇವು ಆಚರಣೆ ಕೂಡ ಇರುತ್ತದೆ.
ಯುವಕರು ಟಗರುಗಳನ್ನು ತಂದು ದೇಗುಲದ ಆವರಣದಲ್ಲಿ ಡಿಕ್ಕಿ ಹೊಡೆಸಿ ಖುಷಿ ಪಡುತ್ತಾರೆ. ಆ ಬಳಿಕ ಅತ್ತಿಗೆ ನಾದಿನಿಯರು ಸಾಂಪ್ರದಾಯಿಕವಾಗಿ ತಲೆ ತಲೆಗೆ ಡಿಕ್ಕಿ ಹೊಡೆದುಕೊಂಡು ಡಿಕ್ಕಿ ಹಬ್ಬ ಆಚರಿಸುತ್ತಾರೆ.
ಅತ್ತಿಗೆ ನಾದಿನಿಯರ ಪ್ರೀತಿಯ ಡಿಕ್ಕಿ ಹೊಡೆಯುವುದು ಒಂದು ಪ್ರೀತಿಯ ಅಪ್ಪುಗೆ ಗಮನ ಸೆಳೆಯುತ್ತದೆ ಈ ಹಬ್ಬ. ಗ್ರಾಮದ ಹೆಣ್ಣು ಮಕ್ಕಳು ಅದೆಷ್ಟು ದೂರದ ಊರಿಗೆ ಸೊಸೆಯಾಗಿ ಹೋಗಿದ್ದರೂ ಸಹ ತಪ್ಪದೆ ಡಿಕ್ಕಿ ಹಬ್ಬಕ್ಕೆ ಬರುತ್ತಾರೆ. ಅತ್ತಿಗೆ, ನಾದಿನಿಯರ ಮಧ್ಯೆ ಏನೇ ವೈಮನಸ್ಸು ಇದ್ದರೂ ಸಹ ಈ ಹಬ್ಬವನ್ನು ಒಗ್ಗೂಡಿ ಆಚರಿಸುತ್ತಾರೆ. ಈ ಹಬ್ಬಕ್ಕೆ ಗೈರಾದರೆ ಸಣ್ಣ ತಲೆನೋವು ಬಂದರೂ ಈ ಹಬ್ಬಕ್ಕೆ ಗೈರಾಗಿದ್ದಕ್ಕೆ ಬಂತೆಂಬ ಭಾವನೆ ಮೂಡತ್ತದೆ. ಹೀಗಾಗಿ, ಅತ್ತಿಗೆ ಮತ್ತು ನಾದಿನಿಯರು ಈ ಹಬ್ಬದಲ್ಲಿ ತಪ್ಪದೇ ಪಾಲ್ಗೊಳ್ಳುತ್ತಾರೆ.
ಹಿರಿಯೂರು ತಾಲೂಕಿನ ಸಿಎನ್ ಮಾಳಿಗೆ ಗ್ರಾಮದಲ್ಲಿ 3 ದಿನ ಕಾಲ ನಡೆಯುವ ಅಹೋಬಲ ನರಸಿಂಹಸ್ವಾಮಿ ಉತ್ಸವಕ್ಕೆ ತೆರೆ ಬಿದ್ದಿದೆ. ಬುಡಕಟ್ಟು ಸಂಸ್ಕೃತಿಯ ಡಿಕ್ಕಿ ಹಬ್ಬ ಆಚರಿಸಿ ಅತ್ತಿಗೆ-ನಾದಿನಿಯರು ಖುಷಿಪಟ್ಟಿದ್ದಾರೆ. ಮತ್ತೆ ಮುಂದಿನ ವರ್ಷ ಬಂದು ಇದೇ ರೀತಿಯಾಗಿ ಡಿಕ್ಕಿ ಹೊಡೆದುಕೊಂಡು ಹಬ್ಬ ಆಚರಿಸಲಿದ್ದು ಈ ಹಬ್ಬ ಅತ್ಯಂತ ಪುರಾನತ ಕಾಲದಿಂದಲೂ ನಡೆದುಕೊಂಡು ಬಂದಿದೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ