Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನಸೇನಾ ಪಾರ್ಟಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ಆಂಧ್ರಪ್ರದೇಶದ ವಿಪ ಸದಸ್ಯ ನಾಗಬಾಬು

Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜಕೀಯವಾಗಿ ಮುನ್ನಡೆಯಲು ಅವಕಾಶ ವಂಚಿತರಾಗಿರುವ ಹೋರಾಟದ ಮನಸ್ಸುಳ್ಳವರ ಪರವಾಗಿ ಆಂಧ್ರದ ಜನಸೇನಾ ಪಾರ್ಟಿ ಕರ್ನಾಟಕದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲಿದೆ ಎಂದು ಆಂಧ್ರಪ್ರದೇಶದ ವಿಧಾನ ಪರಿಷತ್ ಸದಸ್ಯ ನಾಗಬಾಬು ಭರವಸೆ ನೀಡಿದರು.

ಚಳ್ಳಕೆರೆ ರಸ್ತೆಯಲ್ಲಿರುವ ಎಸ್.ಜಿ ಕನ್ವೆಂಷನ್ ಹಾಲ್‌ನಲ್ಲಿ ಶನಿವಾರ ನಡೆದ ಜನಸೇನಾ ಪಾರ್ಟಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಸಾರಥ್ಯದ ಜನಸೇನಾ ಪಾರ್ಟಿ ಕರ್ನಾಟಕ, ತಮಿಳುನಾಡು, ಕೇರಳ, ಒರಿಸ್ಸಾ, ಮಹಾರಾಷ್ಟ್ರ ಮುಂತಾದ ರಾಜ್ಯಗಳಲ್ಲಿ ವಿಸ್ತರಿಸಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ರಾಜ್ಯದಲ್ಲಿಯೂ ಕಚೇರಿಯನ್ನು ಆರಂಭಿಸಲಾಗುವುದು. ಆಂಧ್ರದಲ್ಲಿ ರಾಷ್ಟ್ರೀಯ ಪಕ್ಷ ಬಿಜೆಪಿ. ಜೊತೆ ಜನಸೇನಾ ಪಾರ್ಟಿ ಕೆಲಸ ಮಾಡುತ್ತಿರುವುದರಿಂದ ಕರ್ನಾಟಕದಲ್ಲಿಯೂ ರಾಜಕೀಯ ಕಾರ್ಯಕಲಾಪಗಳನ್ನು ಚುರುಕುಗೊಳಿಸಲಾಗುವುದು. ಮುಂದಿನ ದಿನಗಳಲ್ಲಿ ಅಧ್ಯಕ್ಷರ ಜೊತೆ ಚರ್ಚಿಸಿ ಕರ್ನಾಟಕದ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದರು.

ಶ್ರೀಕೃಷ್ಣದೇವರಾಯ ಕರ್ನಾಟಕ ಮತ್ತು ಆಂಧ್ರಪ್ರದೇಶಕ್ಕೆ ಕೊಂಡಿಯಿದ್ದಂತೆ. ಕರ್ನಾಟಕದಲ್ಲಿ ಕನ್ನಡಿಗರು ಜನಸೇನಾ ಪಾರ್ಟಿ ಬಗ್ಗೆ ಅಭಿಮಾನವಿಟ್ಟು ಸದಸ್ಯತ್ವ ನೊಂದಣಿಗೆ ಮುಂದೆ ಬರುತ್ತಿದ್ದಾರೆ. ಗಂಡು ಮೆಟ್ಟಿನ ನಾಡು ಮದಕರಿನಾಯಕ ಆಳಿದ ಐತಿಹಾಸಿಕ ಚಿತ್ರದುರ್ಗದಲ್ಲಿ ಸದಸ್ಯತ್ವ ನೊಂದಣಿಗೆ ಯುವ ಜನಾಂಗ ಉತ್ಸುಕರಾಗಿರುವುದು ಮನಸ್ಸಿಗೆ ಖುಷಿ ಎನಿಸುತ್ತದೆ. ಯುವಕರು, ಸಮಾನ ಮನಸ್ಕರ ಆಶಯ ಆಶೋತ್ತರಗಳಿಗೆ ಜನಸೇನಾ ಪಾರ್ಟಿ ಬೆಂಬಲವಾಗಿ ನಿಲ್ಲುತ್ತದೆ.

ಭ್ರಷ್ಟಾಚಾರ ರಹಿತ ಪಾರದರ್ಶಕ ಆಡಳಿತ ನೀಡಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇವೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಅನುಮೋದನೆಗೆ ಕಾಂಗ್ರೆಸ್‌ನವರು ರಾಜಕೀಯ ದುರುದ್ದೇಶದಿಂದ ಬೆಂಬಲ ನೀಡಲಿಲ್ಲ. ಇದರಿಂದ ರಾಜಕೀಯ ಪಕ್ಷಗಳಿಗೆ ನಷ್ಟವಿಲ್ಲದಿದ್ದರು ಸಾಮಾನ್ಯ ವ್ಯಕ್ತಿಗಳಿಗೆ ಹಾನಿಯಾಗುತ್ತದೆ ಎಂದರು.

ಜನಸೇನಾ ಪಾರ್ಟಿಯ ಆಂಧ್ರದ ಪ್ರಧಾನ ಕಾರ್ಯದರ್ಶಿ ರಾಂತಲ್ಲೂರಿ, ಚಿತ್ರದುರ್ಗ ಜಿಲ್ಲಾಧ್ಯಕ್ಷ ಡಿ.ಬಸವರಾಜ್ ಇವರುಗಳು ಈ ಸಂದರ್ಭದಲ್ಲಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣದಿಂದ ಮಾತ್ರ ಜೀವನದಲ್ಲಿ ಬದಲಾವಣೆ ಕಂಡುಕೊಳ್ಳಲು ಸಾಧ್ಯ-- ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ಟೈಲರಿಂಗ್ ತರಬೇತಿ ಹಾಗೂ ಯಂತ್ರೋಪಕರಣಗಳ ವಿತರಣೆಗೆ ಅರ್ಜಿ ಆಹ್ವಾನಪ್ರತಿಷ್ಠಿತ ಶಾಲೆಗಳ ಪ್ರವೇಶಕ್ಕೆ ಅರ್ಹತಾ ಪರೀಕ್ಷೆ: 321 ವಿದ್ಯಾರ್ಥಿಗಳು ಹಾಜರುನಿರುದ್ಯೋಗಿಗಳಿಗೆ ರುಡ್‍ಸೆಟ್  ಸಂಸ್ಥೆಯಿಂದ ಉದ್ಯೋಗ ತರಬೇತಿಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಅದ್ದೂರಿಯಾಗಿ ನಡೆದ ಉಜ್ಜನಿ ಬೀರಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಭಾರತದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ರಾಯಭಾರಿ ಸ್ವಾಮಿ ರಂಗನಾಥಾನಂದಜೀಡಾ. ಅಂಬೇಡ್ಕರ್ ಅವರ ಜಯಂತಿ ಕೇವಲ ಒಂದು ಜಾತಿ ಧರ್ಮಕ್ಕೆ ಮೀಸಲಾಗಬಾರದುಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮೋತ್ಸವಕ್ಕೆ ಸಚಿವ ಎಂ.ಬಿ. ಪಾಟೀಲ್‌ಗೆ ಆಮಂತ್ರಣಜನರ ಅಹವಾಲು ಆಲಿಸಿದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್: ದಾವಣಗೆರೆಯಲ್ಲಿ ‘ಜನತಾದರ್ಶನ’