Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರಕಲಾವಿದ ಸಿ.ಕಣ್ಮೇಶ್‌ಗೆ ಪಿ.ಆರ್.ಟಿ ರಾಜ್ಯ ಮಟ್ಟದ ಪ್ರಶಸ್ತಿ- ನಾಗರಾಜ್‌ ಬೇದ್ರೆ

Advertisement
ಚಿತ್ರಕಲಾವಿದ ಸಿ.ಕಣ್ಮೇಶ್‌ಗೆ ಪಿ.ಆರ್.ಟಿ ರಾಜ್ಯ ಮಟ್ಟದ ಪ್ರಶಸ್ತಿ- ನಾಗರಾಜ್‌ ಬೇದ್ರೆ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಎಸ್.ಜೆ.ಎಂ.ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದಲೂ ಕೆಲಸ ಮಾಡುತ್ತಿರುವ ಚಿತ್ರಕಲಾವಿದ ಸಿ.ಕಣ್ಮೇಶ್‌ರವರಿಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹರ್ತಿಕೋಟೆಯ ಪಿ.ಆರ್.ತಿಪ್ಪೇಸ್ವಾಮಿ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಸೆ.೨೦ ರಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರದಾನ ಮಾಡುತ್ತಿರುವುದು ಜಿಲ್ಲೆಗೆ ಹೆಮ್ಮೆ ಎಂದು ನಾಗರಾಜ್‌ಬೇದ್ರೆ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎಸ್.ಜೆ.ಎಂ.ಚಿತ್ರಕಲಾ ಶಾಲೆಯಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿರುವ ಸಿ.ಕಣ್ಮೇಶ್‌ರವರು ಬಡುಕಟ್ಟು ಸಮುದಾಯ ಹಾಗೂ ಜಾನಪದಕ್ಕೆ ಸಂಬಂಧಿಸಿದಂತೆ ಹೆಚ್ಚು ಚಿತ್ರಕಲೆಗಳನ್ನು ರಚಿಸಿ ಕಲೆಗಾಗಿಯೇ ಜೀವನವನ್ನು ಮುಡುಪಾಗಿಟ್ಟಿದ್ದಾರೆಂದು ಹೇಳಿದರು.

ಪ್ರಕಾಶ್ ರಾಮನಾಯ್ಕ ಮಾತನಾಡಿ ಪಿ.ಆರ್.ತಿಪ್ಪೇಸ್ವಾಮಿ ಕೇವಲ ಜಾನಪದ ಕಲಾವಿದರಷ್ಟೆ ಅಲ್ಲ. ಲಲಿತಕಲಾ ಅಕಾಡೆಮಿ ಅಧ್ಯಕ್ಷರಾಗಿ ಜಾನಪದ ವಸ್ತುಗಳನ್ನು ಸಂಗ್ರಹಿಸಿ ಮುಂದಿನ ಪೀಳಿಗೆಗೆ ಉಳಿಸಿದ್ದಾರೆ. ಚಿತ್ರಕಲೆಗೆ ಸಂಬಂಧಿಸಿದಂತೆ ಅನೇಕ ಪುಸ್ತಕಗಳನ್ನು ಬರೆದು ಕಾಲೇಜುಗಳಿಗೆ ನೀಡಿದ್ದಾರೆ. ಧಮಸ್ಥಳದಲ್ಲಿರುವ ಮ್ಯೂಸಿಯಂನಲ್ಲಿ ಪಿ.ಆರ್.ತಿಪ್ಪೇಸ್ವಾಮಿರವರ ಸಂಗ್ರಹಗಳು ಇಂದಿಗೂ ಇವೆ. ಅವಿವಾಹಿತರಾಗಿದ್ದುಕೊಂಡು ಕಲೆಗಾಗಿಯೇ ಜೀವನವನ್ನು ಮುಡುಪಾಗಿಟ್ಟ ಪಿ.ಆರ್.ತಿಪ್ಪೇಸ್ವಾಮಿ ಪ್ರಶಸ್ತಿ ಸಿ.ಕಣ್ಮೇಶ್‌ಗೆ ಸಿಕ್ಕಿರುವುದು ಅವರ ಪರಿಶ್ರಮಕ್ಕೆ ತಕ್ಕ ಫಲ. ಪ್ರಶಸ್ತಿಯು ೨೫ ಸಾವಿರ ರೂ.ನಗದು, ಸ್ಮರಣಿಕೆಯನ್ನೊಳಗೊಂಡಿರುತ್ತದೆ ಎಂದರು.

ಜಾನಪದ ಹಾಡುಗಾರ ಹರೀಶ್ ಮಾತನಾಡುತ್ತ ಜನಪದ ಚಿತ್ರಗಳ ಮೂಲಕ ಕಲೆಯನ್ನು ಚಿತ್ರಿಸುವ ಅದ್ಬುತ ಕಲಾವಿದ ಪಿ.ಕಣ್ಮೇಶ್‌ಗೆ ಪಿ.ಆರ್.ತಿಪ್ಪೇಸ್ವಾಮಿ ರಾಜ್ಯ ಮಟ್ಟದ ಪ್ರಶಸ್ತಿ ದೊರಕಿರುವುದು ಇಡಿ ಚಿತ್ರಕಲೆಗೆ ಸಂದ ಗೌರವ ಎಂದು ಬಣ್ಣಿಸಿದರು.

ಪ್ರಸನ್ನಕುಮಾರ್ ಮಾತನಾಡಿ ಪಿ.ಆರ್.ತಿಪ್ಪೇಸ್ವಾಮಿ ಜಿಲ್ಲೆಯ ಹೆಮ್ಮೆಯ ಕಲಾವಿದರು. ಅಂತಹವರ ಹೆಸರಿನಲ್ಲಿ ಪಿ.ಕಣ್ಮೇಶ್ ರಾಜ್ಯದ ಮುಖ್ಯಮಂತ್ರಿಯಿಂದ ಪ್ರಶಸ್ತಿ ಸ್ವೀಕರಿಸುವುದು ಅವರ ಕಲೆಗೆ ಸಿಕ್ಕ ಗರಿಮೆ ಎಂದು ಗುಣಗಾನ ಮಾಡಿದರು.
ಸೈಯದ್ ಖುದ್ದೂಸ್, ರಮೇಶ, ತಿಮ್ಮಾರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ