LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಸಿಯೂಟ ಯೋಜನೆಗೆ 'ಚೆನ್ನಮ್ಮ' ಹೆಸರಿಡಿ: ಅಗಲಿದ ಗಣ್ಯರಿಗೆ ಭಾವಪೂರ್ಣ ಸಂತಾಪ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನವು ಇಂದಿನಿಂದ ಆರಂಭಗೊಂಡಿದ್ದು
, ವಿಧಾನ ಪರಿಷತ್ ಕಲಾಪ ಶುರುವಾಗುತ್ತಿದ್ದಂತೆ ಇತ್ತೀಚೆಗೆ ಅಗಲಿದ 13 ಮಂದಿ ಪ್ರಮುಖ ಗಣ್ಯರಿಗೆ ಭಾವಪೂರ್ಣ ಸಂತಾಪ ಸೂಚಿಸಲಾಯಿತು.

ಆಡಳಿತ ಪಕ್ಷದ ನಾಯಕ ಡಾ. ಯತೀಂದ್ರ ಹಾಗೂ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಉಭಯ ಪಕ್ಷಗಳ ಸದಸ್ಯರು ಮೃತರ ಅಗಲಿಕೆಗೆ ಕಂಬನಿ ಮಿಡಿದರು, ಅವರ ಆತ್ಮಕ್ಕೆ ಶಾಂತಿ ಕೋರಿ, ಶೋಕಸಂತಪ್ತ ಕುಟುಂಬಗಳಿಗೆ ಸಾಂತ್ವನ ಹೇಳಿದರು.

ಸಂತಾಪ ಸೂಚಿಸಿದ ಪ್ರಮುಖ ಗಣ್ಯರ ಪಟ್ಟಿ
ಕಲಾಪದ ಆರಂಭದಲ್ಲಿ ಈ ಕೆಳಗಿನ ಪ್ರಮುಖ ರಂಗಗಳ ಗಣ್ಯರ ಸೇವೆಯನ್ನು ಸ್ಮರಿಸಿ ಗೌರವ ಸಲ್ಲಿಸಲಾಯಿತು.

ರಾಜಕೀಯ ನಾಯಕರು: ಮಾಜಿ ಸಚಿವರಾದ ರಾಮಚಂದ್ರೇಗೌಡ, ವೆಂಕಟರಮಣ್ಣಪ್ಪ, ಹಾಲಿ ಸಚಿವ ಡಿ.ಸುಧಾಕರ್, ಮಾಜಿ ಶಾಸಕ ಸಿ.ವೀರಣ್ಣ, ಮಾಜಿ‌ಸಂಸದ ಎಚ್.ಹನುಮಂತಪ್ಪ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ.

ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸಂಶೋಧನೆ: ಹಿರಿಯ ಪತ್ರಕರ್ತ ಡಾ.ಎಸ್.ಆರ್.ರಾಮಸ್ವಾಮಿ, ಲೇಖಕಿ ಸಿ‌.ಎನ್.ಮುಕ್ತ ಹಾಗೂ ಪ್ರಸಿದ್ಧ ನಾಣ್ಯಶಾಸ್ತ್ರ ತಜ್ಞ ಪ್ರೊ.ಎ.ವಿ.ನರಸಿಂಹಮೂರ್ತಿ.

ಸಂಗೀತ ಮತ್ತು ಸಾಮಾಜಿಕ ಕ್ಷೇತ್ರ: ಖ್ಯಾತ ಹಿನ್ನೆಲೆ ಗಾಯಕಿಯರಾದ ಆಶಾ ಭೋಂಸ್ಲೆ ಮತ್ತು ಎಸ್‌.ಜಾನಕಿ, ಮೀನುಗಾರರ ಮುಖಂಡ ರಾಮಚಂದ್ರ ಬೈಕಂಪಾಡಿ ಹಾಗೂ 'ತೂಗುಸೇತುವೆಗಳ ಸರದಾರ' ಎಂದೇ ಪ್ರಸಿದ್ಧರಾಗಿದ್ದ ಗಿರೀಶ್ ಭಾರದ್ವಾಜ್.

ಬಿಸಿಯೂಟ ಯೋಜನೆಗೆ 'ಚೆನ್ನಮ್ಮ' ಹೆಸರು ಇಡಲು ಮನವಿ
ಸಂತಾಪ ಸೂಚನಾ ಪ್ರಕ್ರಿಯೆಯ ವೇಳೆ ಮಾತನಾಡಿದ ವಿಪಕ್ಷ ಸದಸ್ಯ ಸರವಣ ಅವರು
, ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ದಿವಂಗತ ಚೆನ್ನಮ್ಮ ಅವರ ಕೊಡುಗೆಯನ್ನು ಸ್ಮರಿಸಿದರು.

ಪ್ರಸ್ತಾವನೆ: "ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ಅವರು ತಮ್ಮ ಮನೆಗೆ ಆಗಮಿಸುತ್ತಿದ್ದ ಪ್ರತಿಯೊಬ್ಬರನ್ನೂ ಪ್ರೀತಿಯಿಂದ ಸತ್ಕರಿಸಿ ಅನ್ನ ನೀಡುತ್ತಿದ್ದ ಹಿನ್ನೆಲೆಯಲ್ಲಿ 'ಅನ್ನಪೂರ್ಣೇಶ್ವರಿ' ಎಂದೇ ಹೆಸರಾಗಿದ್ದರು. ಅವರ ಈ ಅಪಾರ ಕಾಳಜಿ ಹಾಗೂ ಹೆಸರನ್ನು ಅವಿಸ್ಮರಣೀಯವಾಗಿಸಲು ರಾಜ್ಯ ಸರ್ಕಾರದ ಸರ್ಕಾರಿ ಶಾಲೆಗಳ 'ಮಧ್ಯಾಹ್ನದ ಬಿಸಿಯೂಟ ಯೋಜನೆ'ಗೆ ದಿ. ಚೆನ್ನಮ್ಮ ಅವರ ಹೆಸರನ್ನು ಮರುನಾಮಕರಣ ಮಾಡಲು ಸರ್ಕಾರ ಚಿಂತನೆ ನಡೆಸಬೇಕು," ಎಂದು ಸರವಣ ಮನವಿ ಮಾಡಿದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಆಗಸ್ಟ್ 16, 17ರ ಎರಡು ದಿನಗಳ ರಾಜ್ಯ ಪ್ರವಾಸಮುಂಗಾರು ಅಧಿವೇಶನ ಅನಿರ್ದಿಷ್ಟಾವಧಿ ಮುಂದೂಡಿಕೆ: ಲೋಕಸಭೆಯಲ್ಲಿ ಶೇ 19, ರಾಜ್ಯಸಭೆಯಲ್ಲಿ ಶೇ 39 ಉತ್ಪಾದಕತೆ ದಾಖಲುಕಾವೇರಿ ನೀರು ಬಿಡುಗಡೆ ಖಂಡಿಸಿ ಕರ್ನಾಟಕ ಬಂದ್‌ಗೆ ಕರೆ: ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ, ಜನಜೀವನ ಸಹಜಶಾಸನಸಭೆ ಕಾಂಗ್ರೆಸ್‌ಅಭ್ಯರ್ಥಿಗಳ ಸ್ಪರ್ಧೆ: ಜಿ.ಎಸ್. ಪಾಟೀಲ್, ಸಲೀಂ ಅಹ್ಮದ್ ನಾಮಪತ್ರ ಸಲ್ಲಿಕೆಗುಟ್ಕಾ, ಪಾನ್ ಮಸಾಲೆ ನಿಷೇಧ: ಅಡಕೆ ಬೆಳೆಗಾರರಿಗೆ, ಸಹಕಾರ ಸಂಘಗಳಿಗೆ ತೀವ್ರ ಆಘಾತಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಅಧಿವೇಶನ ಆರಂಭ: ಸಿದ್ದರಾಮಯ್ಯ ಸೇರಿ ಹಲವು ಶಾಸಕರು ಗೈರು, ಅಸಮಾಧಾನದ ಹೊಗೆ?ತಮಿಳುನಾಡಿನ ದೋಷಪೂರಿತ ಲೆಕ್ಕಾಚಾರಕ್ಕೆ ಕರ್ನಾಟಕ ಆಕ್ಷೇಪ, ಸುಪ್ರೀಂ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಕೆಬಿಸಿಯೂಟ ಯೋಜನೆಗೆ 'ಚೆನ್ನಮ್ಮ' ಹೆಸರಿಡಿ: ಅಗಲಿದ ಗಣ್ಯರಿಗೆ ಭಾವಪೂರ್ಣ ಸಂತಾಪಖರ್ಗೆ ರ‍್ಯಾಲಿ ನಡೆದ ಮೈದಾನ 'ಶುದ್ಧೀಕರಣ': ರಾಜಕೀಯ ಕಾಳಗ ತೀವ್ರಯುವತಿ ಸಿರಿಲಕ್ಷ್ಮಿ ಕಣ್ಮರೆ: ಪತ್ತಗೆ ಮನವಿ