Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಣದಿಂದ ಮಾತ್ರ ಮನುಷ್ಯನನ್ನು ಬದಲಾಯಿಸಬಹುದು-ನರಸಿಂಹ ಮೂರ್ತಿ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :

ಮನುಷ್ಯನನ್ನು ಚಿಂತನೆಯತ್ತ ಕರೆದೊಯ್ಯುವುದೇ ಶಿಕ್ಷಣ. ಈ ಶಿಕ್ಷಣದಿಂದ ಮಾತ್ರ ಮನುಷ್ಯನನ್ನು ಬದಲಾಯಿಸಬಹುದು ಎಂದು ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತರಾದ ನರಸಿಂಹಮೂರ್ತಿ ಹೇಳಿದರು. 

  ನಗರದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ, ನಿಲಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಡೆದ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದ ಅವರು ಒಬ್ಬ ವಿದ್ಯಾರ್ಥಿಯು ತುಂಬಾ ಚಿಂತನಾತ್ಮಕವಾಗಿ, ಸೃಜನಶೀಲವಾಗಿ ಯೋಚನೆ ಮಾಡಿದರೆ, ಎಲ್ಲ ಬದಲಾವಣೆಗಳು ಕಣ್ಣ ಮುಂದೆ ಬರುತ್ತವೆ, ಇದಕ್ಕೆ ಕೂತೂಹಲ ಬೇಕು‌. ಈ ಕುತೂಹಲದಿಂದ ನಿಮ್ಮನ್ನು ನೀವು ದೊಡ್ಡ ವ್ಯಕ್ತಿಗಳಾಗಿ ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಏನು ಗೊತ್ತಿಲ್ಲದ ವಿದ್ಯಾರ್ಥಿಯು ಸಹ ಸಾಧನೆ ಮಾಡಬಹುದು, ಇದಕ್ಕೆ ಪ್ರಯತ್ನ ತುಂಬಾ ಮುಖ್ಯ. ಪಠ್ಯದ ಜೊತೆಗೆ ದೇಶದ ಈಗಿನ ವಾಸ್ತವಿಕ ಅಂಶಗಳನ್ನು ಹೊರಗಿನ ಜ್ಞಾನವನ್ನು ಪಡೆದಾಗ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಜಯಗಳಿಸಬಹುದು ಎಂದರು. 

   ಡಾ. ಇಂದಿರಾ ಶ್ಯಾಮ್ ಪ್ರಸಾದ್ ಅವರು ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಹೆಚ್ಚು ಸಾಮಾಜಿಕ ಜಾಲತಾಣಗಳಲ್ಲಿ ತೊಡಗಿದ್ದಾರೆ. ಅದರಲ್ಲಿನ ಹಲವು ಸಕಾರಾತ್ಮಕ ಅಂಶಗಳನ್ನು ಅನುಸರಿಸಿಬೇಕು. ಏನನ್ನಾದರೂ ಸಾಧಿಸುವ ಶಕ್ತಿ ಯುವ ಜನತೆಗೆ ಇದೆ. ಎಲ್ಲಾ ಅವಕಾಶಗಳಿವೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಗುರಿ ಇಟ್ಟುಕೊಂಡರೆ ಸಾಲದು, ಅ ಗುರಿಗಾಗಿ ಸತತ ಪರಿಶ್ರಮವನ್ನು ಪಡಬೇಕು ಎಂದರು.

  ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಟಿ.ಎಲ್.ಎಸ್.ಪ್ರೇಮ ಅವರು ಮಾತನಾಡಿ, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು, ವಿದ್ಯಾರ್ಥಿಗಳು ಮೊದಲು ನಾನೇನಾಗಬೇಕು ಎಂಬುದನ್ನ ಅರಿಯಬೇಕು. ಓದುವ ಹವ್ಯಾಸವನ್ನು ಅಳವಡಿಸಿಕೊಳ್ಳಬೇಕು ಎಂದರು.

 ನಿಲಯದಲ್ಲಿ ಪಿಯುಸಿ ವಿಭಾಗದಲ್ಲಿ ಮನೋಜ್.ಕೆ ಮತ್ತು ಬಾಲಾಜಿ ಹಾಗೂ ಪದವಿ ವಿಭಾಗದಲ್ಲಿ ಹೇಮಂತ್ ಕುಮಾರ್.ಎಂ.ಎಂ ರವರನ್ನು ಉತ್ತಮ ಅಂಕಗಳು ಗಳಿಸಿದ್ದಕ್ಕಾಗಿ ಸನ್ಮಾನಿಸಲಾಯಿತು.

   ಕಾರ್ಯಕ್ರಮದಲ್ಲಿ ಇಲಾಖೆಯ ಉಮಾಪತಿ, ಮಂಜುನಾಥ್.ಎಂ.ಎಸ್, ಯೋಗೇಶ್, ನಿಲಯದ ವಾರ್ಡನ್ ರಾಧಾಮಣಿ.ಬಿ, ಹರೀಶ್.ಎಚ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ