Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನರೇಗಾ ಮತ್ತು ಅನ್ನಭಾಗ್ಯ ಕೊರೋನಾ ಸಂದರ್ಭದಲ್ಲಿ ಬಡವರನ್ನು ಬದುಕಿಸಿತು: ಸಿ.ಎಂ.ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಮೈಸೂರು:
ಹೊಟ್ಟೆ ತುಂಬ ಹಿಟ್ಟು-ಬಾಯಿ ತುಂಬ ಅನ್ನ ಎಂದು ನನ್ನಮ್ಮ ಹೇಳುತ್ತಿದ್ದರು. ನಾನು ಅನ್ನ ಭಾಗ್ಯ ಜಾರಿಗೆ ತರಲು ಅನ್ನಕ್ಕಾಗಿ ಕಾದು ನಿಂತ ಪರಿಸ್ಥಿತಿಯೇ ಕಾರಣ ಎಂದು ಮುಖ್ಯಮಂತ್ರಿಗಳು ತಮ್ಮ ಬಾಲ್ಯದ  ದಿನಗಳನ್ನು ಸ್ಮರಿಸಿದರು.

 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ "ಗ್ಯಾರಂಟಿ ಯೋಜನೆಗಳು: ಬಡವರ ಸುರಕ್ಷತೆ ಮತ್ತು ಕಲ್ಯಾಣ" ಕೃತಿ ಬಿಡುಗಡೆ ಮಾಡಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

 1949 ನವೆಂಬರ್ 25 ರಂದು ಸಂವಿಧಾನ ಜಾರಿ ಸಭೆಯಲ್ಲಿ ಮಾಡಿದ ಭಾಷಣ ನನ್ನ ಗ್ಯಾರಂಟಿಗಳಿಗೆ ಸ್ಫೂರ್ತಿ.‌ಅವಕಾಶಗಳಿಂದ ವಂಚಿತರಾಗಿರುವವರಿಗೆ ಸಮಾನ ಅವಕಾಶಗಳು ಸಿಕ್ಕಾಗ ಸಮ ಸಮಾಜ ನಿರ್ಮಾಣ ಸಾಧ್ಯ. ಬಸವಾದಿ ಶರಣರು, ಬುದ್ದ ಕೂಡ ಸಮ ಸಮಾಜದ ಬಗ್ಗೆ ಹೇಳಿದ್ದಾರೆ.

ಕೇವಲ ಭಾಷಣಳಿಂದ ಸಮ ಸಮಾಜದ ಆಶಯ ಈಡೇರಲ್ಲ. ಈ ಕಾರಣಕ್ಕೇ ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ಹಲವು ಭಾಗ್ಯಗಳನ್ನು ಜಾರಿ ಮಾಡಿದೆ ಎನ್ನುತ್ತಾ ತಮ್ಮ ಬಾಲ್ಯದ ಬಡತನದ ದಿನಗಳನ್ನು ಸ್ಮರಿಸಿದರು.

 ಹಬ್ಬ ಬಂದಾಗ ಮಾತ್ರ ನಮ್ಮ ಮನೆಯಲ್ಲಿ ಅನ್ನ ಮಾಡ್ತಿದ್ರು. ಅಕ್ಕ ಪಕ್ಕದವರ ಮನೆಯಲ್ಲಿ ಯಾರಿಗಾದ್ರೂ ಹುಷಾರು ತಪ್ಪಿದರೆ ಅವರಿಗೆ ಅನ್ನ ಮಾಡ್ತಿದ್ರು. ಅವರ ಮನೆ ಬಾಗಿಲಲ್ಲಿ ಒಂದು ತುತ್ತು ಅನ್ನಕ್ಕಾಗಿ ಕಾದು ನಿಂತಿದ್ದ ದಿನಗಳು ಇದ್ದವು‌. ಹೀಗೆ ಅನ್ನಕ್ಕೆ ಯಾರೂ ಕಾದು ನಿಲ್ಲಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ ತಂದದ್ದನ್ನು ವಿವರಿಸಿದರು.

 ಜಾತಿ ಕಾರಣಕ್ಕಾಗಿ ಸಮಾಜದಲ್ಲಿ ಆರ್ಥಿಕ‌ಅಸಮಾನತೆ ಸೃಷ್ಟಿ ಆಯಿತು. ಆದ್ದರಿಂದ ಎಲ್ಲರಿಗೂ ಆರ್ಥಿಕ ಶಕ್ತಿ ಕೊಡುವ ಕಾರಣಕ್ಕೆ 2013-18 ರ ವರೆಗೆ ಹಲವು ಕಾರ್ಯಕ್ರಮಗಳನ್ನು ಜಾರಿ ಮಾಡಿದೆವು. ಹಾಗೆಯೇ ಎರಡನೇ ಬಾರಿ ಮುಖ್ಯಮಂತ್ರಿ ಆದಾಗಲೂ ಗ್ಯಾರಂಟಿಗಳ ಮೂಲಕ ಆರ್ಥಿಕ ಶಕ್ತಿ ನೀಡಿದೆವು ಎಂದರು.

 ನಮ್ಮ ಭಾಗ್ಯಗಳನ್ನುಗ್ಯಾರಂಟಿಗಳನ್ನು ವಿರೋಧಿಗಳು ಆಡಿಕೊಂಡರು. ಈಗಲೂ ಅಪ ಪ್ರಚಾರ ಮಾಡುತ್ತಿದ್ದಾರೆ.  ಆದರೆ ನಾನು ಹೋದಲ್ಲಿ ಬಂದಲ್ಲಿ ಗ್ಯಾರಂಟಿಗಳ ಫಲಾನುಭವಿಗಳು ಕಾಂಗ್ರೆಸ್ ಸರ್ಕಾರಕ್ಕೆ ಧನ್ಯತೆ ಅರ್ಪಿಸುತ್ತಿದ್ದಾರೆ ಎನ್ನುತ್ತಾ ಉಚಿತ ಯೋಜನೆಗಳ ಫಲಾನುಭವಿಗಳು ಗೃಹಲಕ್ಷ್ಮಿ ಹಣದಲ್ಲಿ  ಮಾಡಿದ ಸಾಧನೆಗಳನ್ನು ವಿವರಿಸಿದರು.

 ನರೇಗಾ ಮತ್ತು ಅನ್ನಭಾಗ್ಯ ಯೋಜನೆಗಳು ಕೊರೋನಾ ಸಂದರ್ಭದಲ್ಲಿ ಬಡವರನ್ನು, ಕೆಳ ಮಧ್ಯಮ ವರ್ಗದವರನ್ನು ಬದುಕಿಸಿತು. ಹೀಗಾಗಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹೆಚ್ಚೆಚ್ಚು ಮಾತಾಡಬೇಕು. ಅನ್ನಭಾಗ್ಯದ ಮೇಲೆ "ಅನ್ನ" ಅಂತಲೇ ಸಿನಿಮಾ ಬಂದಿದೆ. ನಾನೂ ಸಿನಿಮಾ ನೋಡಿದೆ ಎಂದರು.

 ಡಾ.ಡಿ.ಶ್ರೀನಿವಾಸ ಮಣಗಳ್ಳಿ ಅವರ ಸಂಪಾದನಾ ಕೃತಿ ಬಿಡುಗಡೆಯ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪುರುಷೋತ್ತಮ ಬಿಳಿಮಲೆ, ವಿಧಾನ ಪರಿಷತ್ ಸದಸ್ಯರಾದ ಡಾ.ತಿಮ್ಮಯ್ಯ, ನಾಟಕಕಾರರಾದ ಕೆ.ವೈ.ನಾರಾಯಣಸ್ವಾಮಿ, ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾದ ಪ್ರೊ.ಎಂ.ಚಂದ್ರ ಪೂಜಾರಿ, ಕುಲಪತಿಗಳಾದ ಪ್ರೊ.ಎನ್.ಕೆ.ಲೋಕನಾಥ್, ಸಾಮಾಜಿಕ ಕಾರ್ಯಕರ್ತರಾದ ಅಹಿಂದ ಜವರಪ್ಪ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

 ಗ್ಯಾರಂಟಿ ಯೋಜನೆಗಳು ಪ್ರಜಾತಂತ್ರವನ್ನು ಗಟ್ಟಿಗೊಳಿಸಿವೆ.  ಡಾ.ಬಿ.ಆರ್.ಅಂಬೇಡ್ಕರ್ ಆಶಯವನ್ನು ಘೋಷಿಸದೇ ಈಡೇರಿಸಿವೆ. ಬಡವರಿಗೆ ಈ ಗ್ಯಾರಂಟಿಗಳು ಸಾಮಾಜಿಕವಾಗಿ ಚಾಲನಾ ಸಾಮರ್ಥ್ಯವನ್ನು ನೀಡಿವೆ. ಸಿದ್ದರಾಮಯ್ಯ ಅವರು ಸೂಕ್ಷ್ಮ ಮನಸ್ಸಿನ ನಾಯಕರು.

ಇವರಿಂದ ಮಾತ್ರ ಸಮಾಜಕ್ಕೆ ಈ ಚಾಲನಾ ಸಾಮರ್ಥ್ಯ ನೀಡಲು ಸಾಧ್ಯ. ಹಸಿದವರ ಹೊಟ್ಟೆಗೆ ಅನ್ನ ಕೊಡುವುದೇ ದೇವರಿಗೆ ಕೊಡುವ ಕಾಣಿಕೆ. ಇದನ್ನು ನಾವು ಪ್ರಾಮಾಣಿಕವಾಗಿ ಒಪ್ಪಿ, ಸಾರ್ವಜನಿಕವಾಗಿ ಹೇಳಬೇಕಿದೆ. ಕೆ.ವೈ.ನಾರಾಯಣಸ್ವಾಮಿ, ನಾಟಕಕಾರರು, ಪ್ರಾಧ್ಯಾಪಕರು.

 ಉಚಿತ ಯೋಜನೆಗಳನ್ನು ಜಾರಿ ತಂದ ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳು ಮಾನವ ಅಭಿವೃದ್ಧಿ ಸೂಚ್ಯಂಕಗಳಲ್ಲಿ ಮೊದಲ ಸ್ಥಾನಗಳಲ್ಲಿ ಇದ್ದು ಜಿಡಿಪಿ ಬೆಳವಣಿಗೆ ಉತ್ತಮವಾಗಿವೆ. ಉಚಿತ ಯೋಜನೆಗಳನ್ನು ಜಾರಿ ಮಾಡದ ಉತ್ತರಪ್ರದೇಶ, ಬಿಹಾರ, ಮಧ್ಯಪ್ರದೇಶ ರಾಜ್ಯಗಳು ಮಾನವ ಅಭಿವೃದ್ಧಿ ಸೂಚ್ಯಂಕಗಳಲ್ಲಿ ಅತ್ಯಂತ ಕುಸಿದು, ಜಿಡಿಪಿ ಕೂಡ ಕುಸಿದಿದೆ.
ಪ್ರೊ.ಎಂ.ಚಂದ್ರ ಪೂಜಾರಿ, ನಿರ್ದೇಶಕರು, ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ, ಧಾರವಾಡ.

 2017 ರಿಂದ ಭಾರತದ ಆರ್ಥಿಕ ಪರಿಸ್ಥಿತಿ ಕುಸಿಯುತ್ತಾ, ಕೊರೋನಾ ಕಾಲದಲ್ಲಿ ಇನ್ನಷ್ಟು ನೆಲಕಚ್ಚಿತು. ನಿರುದ್ಯೋಗ, ಬಡತನ ಇಮ್ಮಡಿಯಾಗಿ ಜಿಡಿಪಿ ಕುಸಿದಿತ್ತು. ಇಂಥಾ ಭಯಾನಕ ಆರ್ಥಿಕ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಐದು ಗ್ಯಾರಂಟಿಗಳು ರಾಜ್ಯ ಸ್ಮಶಾನ ಆಗದಂತೆ ತಡೆದಿದೆ.

ಕೊರೊನಾ ಕಾಲದ ಬಿಕ್ಕಟ್ಟುಗಳಿಗೆ ಗ್ಯಾರಂಟಿಗಳು ಪರಿಹಾರವಾಯಿತು. ಇದನ್ನು ನಾವೆಲ್ಲಾ ಧೈರ್ಯದಿಂದ ಹೇಳಬೇಕು. ದೇಶಕ್ಕೆ ಮಾದರಿಯಾದ ಈ ಯೋಜನೆಗಳು ಜನಕಲ್ಯಾಣಕ್ಕೆ ಹೇಗೆ ಸಹಕರಿಸಿತು ಎಂಬುದನ್ನು ಹೇಳಬೇಕು. ಪುರುಷೋತ್ತಮ ಬಿಳಿಮಲೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ