Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯ ಕಲಾವಿದೆ ಮಾಧವಿ ಪಾರೇಖ್ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿರಿಯ ಕಲಾವಿದೆ ಶ್ರೀಮತಿ ಮಾಧವಿ ಪಾರೇಖ್ ಅವರಿಗೆ ಚಿತ್ರಕಲಾ ಪರಿಷತ್ ನ  ಎಂ.ಎಸ್. ನಂಜುಂಡರಾವ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು ಎಂದು ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಈ ದಿನ ಜರುಗಿದ ಪ್ರೊ. ಎಂ.ಎಸ್. ನಂಜುಂಡರಾವ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಹಿರಿಯ ಕಲಾವಿದೆ ಶ್ರೀಮತಿ ಮಾಧವಿ ಪಾರೆಖ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದ್ದು, ಸಂತಸ ತರಿಸಿತು ಎಂದು ಪಾಟೀಲ್ ತಿಳಿಸಿದರು.

ಮಾಧವಿ ಪಾರೇಕ್ ಅವರು ಓರ್ವ ಪ್ರಸಿದ್ಧ ಭಾರತೀಯ ಕಲಾವಿದೆ. ಅವರ ಚಿತ್ರಗಳು ಭಾರತದ ಹಳ್ಳಿಗಾಡಿನ ಜನಪದ ಶೈಲಿ ಹಾಗೂ ಪಾಶ್ಚಾತ್ಯ ತಂತ್ರಗಳನ್ನು ಅಳವಡಿಸಿಕೊಂಡು ಚಿತ್ರಗಳನ್ನು ರಚಿಸಿದ್ದಾರೆ. 

ಅವರ ಕಲಾಕೃತಿಗಳು ವಿಶಿಷ್ಟವಾಗಿದ್ದು, ವಿಶ್ವದ ಹಲವಾರು ದೇಶಗಳಲ್ಲಿ ಪ್ರದರ್ಶಿಸಲ್ಪಟ್ಟಿರುವುದಲ್ಲದೆ, ಬಹುಮಾನಿತವಾಗಿರುವುದು ಎಲ್ಲ ಭಾರತೀಯರೀಗೂ ಹೆಮ್ಮೆಯ ಸಂಗತಿ. ಮಾಧವಿ ಪಾರೆಖ್ ಅವರ ಸಾಧನೆಯು ಇಂದಿನ ಯುವ ಕಲಾವಿದರಿಗೆ ದಾರಿದೀಪವಾಗಿದೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದರು.

ಇಂದಿನ ಕಾರ್ಯಕ್ರಮದಲ್ಲಿ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಡಾ. ಬಿ.ಎಲ್. ಶಂಕರ್, ಪ.ಸ.ಕುಮಾರ್, ಎಸ್. ಎನ್. ಅಗರವಾಲ್ ಸೇರಿದಂತೆ ಅನೇಕ ಗಣ್ಯರು, ಕಲಾವಿದರು ಪಾಲ್ಗೊಂಡಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ