ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ದೇಶದ ಎಂಬತ್ತನೆ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರತಿಯೊಬ್ಬರು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಿ ದೇಶಭಕ್ತಿ ಮೆರೆಯುವಂತೆ ಪ್ರಧಾನಿ ನರೇಂದ್ರಮೋದಿರವರು ಸೂಚಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ. ಜಿಲ್ಲಾ ಘಟಕದಿಂದ ಹರ್ಘರ್ ತಿರಂಗಾ ಅಭಿಯಾನದಡಿ ವಾರ್ತಾಧಿಕಾರಿ ಜುಂಜಪ್ಪ, ಪತ್ರಕರ್ತರು
ದೃಶ್ಯ ಮಾಧ್ಯಮದ ಪ್ರತಿನಿಧಿಗಳು, ವಕೀಲರು ಹಾಗೂ ಸಾರ್ವಜನಿಕರಿಗೆ ಗುರುವಾರ ರಾಷ್ಟ್ರಧ್ವಜವನ್ನು ವಿತರಿಸಲಾಯಿತು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಯಾದವ್, ಕಾರ್ಯದರ್ಶಿ ರೇಖಾ, ವಕ್ತಾರ ನಾಗರಾಜ್ ಬೇದ್ರೆ, ಸಹ ವಕ್ತಾರ ನವೀನ್ ಚಾಲುಕ್ಯ, ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗರಾಜ್, ಕಾಂಚನ, ಸುಮಾ, ವೀಣಾ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.
Also read



