Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನವೋದಯ ವಿದ್ಯಾಲಯ: ಪ್ರಥಮ ಪಿಯು ವಿಜ್ಞಾನ ವಿಭಾಗದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಹಿರಿಯೂರು:
ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಹಾರ್ ನವೋದಯ ವಿದ್ಯಾಲಯದಲ್ಲಿ 2026-27ನೇ ಶೈಕ್ಷಣಿಕ ವರ್ಷಕ್ಕೆ ಖಾಲಿ ಇರುವ ಸೀಟುಗಳಿಗೆ 11ನೇ ತರಗತಿಯ ವಿಜ್ಞಾನ ವಿಭಾಗದ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೂನ್ 25 ಅರ್ಜಿ ಸಲ್ಲಿಸಲು ಕೊನೆಯ ದಿನ.

ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಜನ್ಮ ದಿನಾಂಕವು 01.06.2009 ರಿಂದ 31.07.2011 ರ ನಡುವೆ ಇರಬೇಕು. ಅಭ್ಯರ್ಥಿಯು 2025-26ರ ಶೈಕ್ಷಣಿಕ ಅವಧಿಯಲ್ಲಿ ಜೆ.ಎನ್.ವಿ ಇರುವ ಜಿಲ್ಲೆಯ ಮಾನ್ಯತೆ ಪಡೆದ ಶಾಲೆಯಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ, 10ನೇ ತರಗತಿಯಲ್ಲಿ ಕನಿಷ್ಠ ಶೇ.60 ಅಥವಾ ಅದಕ್ಕಿಂತ ಹೆಚ್ಚಿನ ಪ್ರಥಮ ದರ್ಜೆ ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ವಿಜ್ಞಾನ ವಿಭಾಗವನ್ನು ಆಯ್ಕೆ ಮಾಡಿಕೊಳ್ಳುವ ಅಭ್ಯರ್ಥಿಗಳು 10ನೇ ತರಗತಿಯ ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ಕನಿಷ್ಠ ಶೇ.60 ಅಂಕಗಳನ್ನು ಹೊಂದಿರಬೇಕಿರುವುದು ಕಡ್ಡಾಯವಾಗಿದೆ.

ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಸಲ್ಲಿಸಲು 2026ರ ಜೂನ್ 25 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿ ಹಾಗೂ ಪ್ರವೇಶ ಪ್ರಕ್ರಿಯೆಗಾಗಿ ಆಸಕ್ತರು ಮೊಬೈಲ್ ಸಂಖ್ಯೆಗಳಾದ 8301968144, 8618537422, 9740133395, 8453091534 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜವಹಾರ್ ನವೋದಯ ವಿದ್ಯಾಲಯ ಪ್ರಾಚಾರ್ಯರು ತಿಳಿಸಿದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
"ಕೆಲವರ ಮಾತು ಕೇಳಿ ಬಿಡದಿ ಟೌನ್‌ಶಿಪ್ ಕೈಬಿಡಲ್ಲ": ಸಚಿವ ಯತೀಂದ್ರಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲು ಸಿಎಂ ಶಿವಕುಮಾರ್ ಸೂಚನೆಮಹಿಳೆಯರಿಗೆ ಉಚಿತ 'ಸ್ಮಾರ್ಟ್ ಕಾರ್ಡ್'; ಶೀಘ್ರದಲ್ಲೇ ಅಂತಿಮ ರೂಪುರೇಶೆ ಎಂದ ಸಚಿವ ಬೈರತಿ ಸುರೇಶ್ವಿಧಾನ ಪರಿಷತ್ ಚುನಾವಣೆ: ಕ್ರಾಸ್ ವೋಟಿಂಗ್ ಭೀತಿ; ಬಿಡದಿ ರೆಸಾರ್ಟ್‌ಗೆ ಕಾಂಗ್ರೆಸ್ ಶಾಸಕರು ಶಿಫ್ಟ್!ಐಎಎಫ್ ಅಧಿಕಾರಿಯ ಪತ್ನಿ ಮೇಲೆ ಅತ್ಯಾಚಾರ; ಬಲವಂತದ ಮತಾಂತರಕ್ಕೆ ಯತ್ನ ಇಬ್ಬರ ಬಂಧನ"ಶ್ರೀರಾಮನೇ ಲೆಕ್ಕ ಕೊಡುವಾಗ ಆರ್‌ಎಸ್‌ಎಸ್ ಯಾಕೆ ಕೊಡಬಾರದು?": ಪ್ರಿಯಾಂಕ್ ಖರ್ಗೆ ನೇರ ಪ್ರಶ್ನೆದೂರು ದಾಖಲಾಗುವ ಮುನ್ನವೇ ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು! ಹೈಕೋರ್ಟ್ ಆಘಾತನಗರಾಭಿವೃದ್ಧಿ ಜವಾಬ್ದಾರಿ ವಹಿಸಿಕೊಂಡ ಕೃಷ್ಣಬೈರೇಗೌಡ; ಮೊದಲ ಸಭೆಯಲ್ಲೇ ಅಧಿಕಾರಿಗಳಿಗೆ 'ರಾಕೆಟ್ ಸೈನ್ಸ್' ಕ್ಲಾಸ್!ಮಹಜರು ವೇಳೆ ಪೊಲೀಸರ ಮೇಲೆಯೇ ಹಲ್ಲೆ; ಕೊಲೆ ಆರೋಪಿ ಮಧು ಕಾಲಿಗೆ ಬಿದ್ದಿತು ಗುಂಡೇಟು!ರೌಡಿಪಟ್ಟಿಯಿಂದ ಸೈಲೆಂಟ್ ಸುನೀಲ, ಒಂಟೆ ರೋಹಿತ್ ಮುಕ್ತಿ? ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರ ಸಜ್ಜು!