LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನೀಟ್ ಪ್ರತಿಭಟನೆ: ತಕ್ಷಣ ವಿದ್ಯಾರ್ಥಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್‌ಆದೇಶ

Advertisement
Advertisement

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ನಡೆದ ರಾಷ್ಟ್ರವ್ಯಾಪಿ ಪ್ರತಿಭಟನೆಗಳ ವೇಳೆ ಬಂಧನಕ್ಕೊಳಗಾಗಿದ್ದ ವಿದ್ಯಾರ್ಥಿಗಳಿಗೆ ಸುಪ್ರೀಂ ಕೋರ್ಟ್ ನಿಂದ ಭಾರಿ ಸಮಾಧಾನಕರ ಸುದ್ದಿ ಸಿಕ್ಕಿದೆ.

ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲದ ಹಾಗೂ 18 ವರ್ಷದೊಳಗಿನ ಎಲ್ಲಾ ವಿದ್ಯಾರ್ಥಿಗಳನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ದೇಶದ ಸರ್ವೋಚ್ಚ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ತ್ರಿಸದಸ್ಯ ಪೀಠವು ಈ ಮಧ್ಯಂತರ ನಿರ್ದೇಶನಗಳನ್ನು ನೀಡಿದ್ದು, ಪ್ರತಿಭಟನೆಗೆ ಸಂಬಂಧಿಸಿದ ಎಲ್ಲಾ ಡಿಜಿಟಲ್ ಹಾಗೂ ಎಲೆಕ್ಟ್ರಾನಿಕ್ ಸಾಕ್ಷ್ಯಗಳನ್ನು ಸುರಕ್ಷಿತವಾಗಿ ಸಂರಕ್ಷಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ಸಾಕ್ಷ್ಯ ನಾಶಪಡಿಸದಂತೆ ಸುಪ್ರೀಂ ಕಟ್ಟುನಿಟ್ಟಿನ ಸೂಚನೆ:
ಪ್ರತಿಭಟನೆ ನಡೆದ ಎಲ್ಲಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿರುವ ನ್ಯಾಯಪೀಠ, ಈ ಕೆಳಗಿನ ಸಾಕ್ಷ್ಯಗಳನ್ನು ಯಾವುದೇ ಕಾರಣಕ್ಕೂ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಡ್ರೋನ್ ವಿಡಿಯೋಗಳು, ಪೊಲೀಸರ ಬಾಡಿ ಕ್ಯಾಮೆರಾ ಫೂಟೇಜ್, ವೈರ್‌ಲೆಸ್ ಸಂವಹನ ದಾಖಲೆಗಳು ಹಾಗೂ ಪಿಸಿಆರ್ ಲಾಗ್‌ಗಳು ನಾಶಪಡಿಸಬಾರದು ಎಂದು ಸ್ಪಷ್ಟಪಡಿಸಿದೆ.

ಪ್ರತಿಭಟನಾಕಾರರ ಕುರಿತು ಸಂಗ್ರಹಿಸಿರುವ ಇತರ ಡಿಜಿಟಲ್ ಮಾಹಿತಿ (ಇದನ್ನು ಸಾರ್ವಜನಿಕ ವಲಯಕ್ಕೆ ಬಿಡುಗಡೆ ಮಾಡುವಂತಿಲ್ಲ), "ಪೊಲೀಸ್ ದೌರ್ಜನ್ಯದ ವಿರುದ್ಧ ಸ್ವತಂತ್ರ ತನಿಖೆಗೆ ಆದೇಶ ಏಕೆ ನೀಡಬಾರದು?", ವಿಚಾರಣೆ ವೇಳೆ ಕಠಿಣ ನಿಲುವು ತಳೆದ ಸಿಜೆಐ ಸೂರ್ಯಕಾಂತ್, "ವಿದ್ಯಾರ್ಥಿಗಳ ಮೇಲೆ ಪೊಲೀಸರು ಅತಿಯಾದ ಬಲಪ್ರಯೋಗ ನಡೆಸಿದ್ದಾರೆ ಎಂಬ ಆರೋಪಗಳು ಮೇಲ್ನೋಟಕ್ಕೆ ಸ್ವತಂತ್ರ ಹಾಗೂ ನ್ಯಾಯಸಮ್ಮತ ತನಿಖೆಗೆ ಅರ್ಹವಾಗಿವೆ. ಕಾನೂನನ್ನು ಕೈಗೆತ್ತಿಕೊಂಡವರು ಮತ್ತು ಮಿತಿಮೀರಿದ ಕ್ರಮ ಕೈಗೊಂಡವರು ಯಾರೇ ಆದರೂ ಶಿಕ್ಷೆ ಅನುಭವಿಸಲೇಬೇಕು" ಎಂದು ಎಚ್ಚರಿಸಿದರು.

ಅದೇ ಸಮಯದಲ್ಲಿ, ಹಿಂಸಾಚಾರದಲ್ಲಿ ಗಾಯಗೊಂಡಿರುವ 200ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬಗಳ ಆತಂಕವನ್ನೂ ತನಿಖೆ ಪರಿಗಣಿಸಬೇಕಿದೆ ಎಂದು ನ್ಯಾಯಪೀಠ ಉಲ್ಲೇಖಿಸಿದೆ.

ಆರೋಪಿ ಕ್ರಿಮಿನಲ್‌ಗಳಿಗೆ ಇಲ್ಲ ರಕ್ಷಣೆ!: ದೆಹಲಿ ಸರ್ಕಾರಕ್ಕೆ ದಾಖಲಾಗಿರುವ ಎಫ್‌ಐಆರ್‌ಗಳ ತನಿಖೆ ಮುಂದುವರಿಸಲು ಅನುಮತಿ ನೀಡಲಾಗಿದ್ದರೂ, ತನಿಖೆ ಮುಗಿಯುವವರೆಗೆ ಅಪರಾಧ ಹಿನ್ನೆಲೆ ಇಲ್ಲದ ಅರ್ಹ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಕೋರ್ಟ್ ತಿಳಿಸಿದೆ. ಆದರೆ, ಈ ರಕ್ಷಣೆ ಕ್ರಿಮಿನಲ್ ಹಿನ್ನೆಲೆ ಹೊಂದಿರುವ ಕಿಡಿಗೇಡಿಗಳಿಗೆ ಅನ್ವಯಿಸುವುದಿಲ್ಲ.

6 ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ನೋಟಿಸ್:
ಘಟನೆಗೆ ಸಂಬಂಧಿಸಿದಂತೆ ದೆಹಲಿ, ಮಹಾರಾಷ್ಟ್ರ, ಬಿಹಾರ, ಕೇರಳ, ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಂದ ಸುಪ್ರೀಂ ಕೋರ್ಟ್ ವಿವರಣೆ ಕೇಳಿದೆ.

ಪ್ರಕರಣದ ಕುರಿತು ಸ್ವತಂತ್ರ ತನಿಖಾ ಸಮಿತಿ ಅಥವಾ ವಿಶೇಷ ತನಿಖಾ ತಂಡ ರಚಿಸುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ಮೊದಲು, ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ರಾಜ್ಯ ಸರ್ಕಾರಗಳು ತಮ್ಮ ಅಧಿಕೃತ ನಿಲುವನ್ನು ಸ್ಪಷ್ಟಪಡಿಸುವಂತೆ ನ್ಯಾಯಪೀಠ ಸೂಚನೆ ನೀಡಿದೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST