Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಧುನಿಕ ಭಾರತದ ನಿರ್ಮಾತೃ ನೆಹರು

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಶ್ರೀ ಪಂಡಿತ್ ಜವಾಹರಲಾಲ್ ನೆಹರು ಮಾಜಿ ಪ್ರಧಾನಿಗಳು ಇವರ  ಜಯಂತಿಯ ಈ ದಿನದಲ್ಲಿ ಅವರ ಮೌಲ್ಯಾಧಾರಿತ ವಿಚಾರವನ್ನು ಸ್ಮರಣೆ ಮಾಡುವ ಮೂಲಕ ಗೌರವವನ್ನು ಅರ್ಪಿಸೋಣ.

ಜವಾಹರಲಾಲ್ ನೆಹರು ಅವರು ನವೆಂಬರ್ 14ರ ಈ ದಿನದಂದು ಅಲಹಾಬಾದ್ ಪ್ರಾಂತ್ಯದಲ್ಲಿ ಪಂಡಿತ್ ಮನೆತನದಲ್ಲಿ ಜನಿಸಿದ್ದಾರೆ.  ಸ್ವಾತಂತ್ರ್ಯ ಪೂರ್ವದ ಆ ದಿನಮಾನಗಳಲ್ಲಿಯೇ ಉನ್ನತ ವಿದ್ಯಾಭ್ಯಾಸದ ಸಲುವಾಗಿ ವಿದೇಶಕ್ಕೆ ತೆರಳಿದ್ದರು. ವಿದ್ಯಾಭ್ಯಾಸ ಪೂರೈಸಿ ಭಾರತಕ್ಕೆ ಹಿಂದಿರುಗಿದ ನಂತರ ದೇಶದ ಸ್ವಾತಂತ್ರ್ಯಕ್ಕಾಗಿ ಕಾಂಗ್ರೆಸ್ ಹೆಸರಿನ ಸಂಘಟನೆಯಲ್ಲಿ ಹೋರಾಟಕ್ಕೆ ಧುಮುಕಿದರು.

ಮಹಾತ್ಮ ಗಾಂಧೀಜಿ ಅವರ ಮುಂದಾಳತ್ವದಲ್ಲಿ ನಡೆದ ನಿರಂತರ ಹೋರಾಟಗಳ ಫಲದಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ಪ್ರಜಾಪ್ರಭುತ್ವದ ಮುಖೇನ ನೆಹರು ಅವರು ದೇಶದ ಪ್ರಥಮ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದರು. ಸತತವಾಗಿ 17 ವರ್ಷಗಳ ಕಾಲ ಪ್ರಧಾನಿ ಸ್ಥಾನದಲ್ಲಿ ಆಡಳಿತವನ್ನು ನೀಡಿದ್ದಾರೆ.

ಇವರ ಆಡಳಿತದ ಅವಧಿಯಲ್ಲಿ ಶಿಕ್ಷಣ, ಕೃಷಿ, ಸಾರಿಗೆ, ಕೈಗಾರಿಕೆ, ರಕ್ಷಣೆ, ವೈದ್ಯಕೀಯ, ಕಾನೂನು, ವಿದೇಶಾಂಗನೀತಿ ಇನ್ನು ಹಲವಾರು ವಿಚಾರಗಳ ಅಭಿವೃದ್ಧಿಗೆ ಮಾನ್ಯತೆ ನೀಡಿದ್ದಾರೆ. ಆ ಕಾರಣಕ್ಕೆ ನೆಹರು ಅವರಿಗೆ ಅಧುನಿಕ ಭಾರತ ನಿರ್ಮಾತೃ ಎಂಬ ಪ್ರಖ್ಯಾತಿಯ ಬಿರುದು ಲಭಿಸಿದೆ.

ನೆಹರು ಅವರು ಮಕ್ಕಳ ಭವಿಷ್ಯದ ಬಗ್ಗೆ ಮಹತ್ವಾಕಾಂಕ್ಷೆ ಹೊಂದಿದ್ದರು. ಇಂದಿನ ಮಕ್ಕಳೇ ನಾಳಿನ ಭವಿಷ್ಯದ ಪ್ರಜೆಗಳು ಎಂಬ ವಿಶ್ವಾಸವನ್ನು ಹೊಂದಿದ್ದರು. ಮಕ್ಕಳ ಭವಿಷ್ಯಕ್ಕಾಗಿ ಪೋಷಕರು ನ್ಯಾಯ ಸಮ್ಮತವಾಗಿ ಬದುಕಿ ಬಾಳಬೇಕು ಎಂದು ವಿವರಿಸಿದರು.

ಪೋಷಕರ ಉತ್ತಮ ಆದರ್ಶಗಳ ಬದುಕು ಮಕ್ಕಳ ಭವಿಷ್ಯಕ್ಕೆ ಉತ್ತಮ ತಳಹದಿ ಎಂಬುದು ನೆಹರು ಮಾತುಗಳಲ್ಲಿ ಕೇಳಿಬಂದಿದೆ.

ನೆಹರು ಅವರಿಗೆ  ಭಾರತ ರತ್ನ  ಪ್ರಶಸ್ತಿ ಲಭಿಸಿದೆ. ನೆಹರು ಮಕ್ಕಳ ಬಗ್ಗೆ ಅಪಾರ ಪ್ರೀತಿ ಹಾಗೂ ಕಾಳಜಿ ಹೊಂದಿದ್ದರು ಆ ಕಾರಣಕ್ಕೆ ನೆಹರು ಅವರ ಜಯಂತಿಯನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ನಾಡಿನ ಸಮಸ್ತ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಶುಭಾಶಯಗಳು.

ಮಕ್ಕಳ ಭವಿಷ್ಯದ ಸಲುವಾಗಿ ಪೋಷಕರು ನ್ಯಾಯ. ಸತ್ಯ , ಕರುಣೆ ಈ ನೀತಿಗಳನ್ನು ಪಾಲನೆ ಮಾಡಬೇಕು. ಪೋಷಕರ ಬದುಕಿನ ನೀತಿಯನ್ನು ಮಕ್ಕಳು ಅನುಸರಿಸುತ್ತಾರೆ. ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವ ಧ್ಯೇಯವನ್ನು ಪೋಷಕರು ಹೊಂದಿರಬೇಕು ಹಾಗೂ ಮಕ್ಕಳ ಇತರೇ ಸಾಧನೆಗಾಗಿ ಒಂದಿಷ್ಟು ಸಮಯವನ್ನು ಪೋಷಕರು ಮೀಸಲಿಡಬೇಕು ಅದು ಈಡೇರುವವರೆಗೂ ಪ್ರಯತ್ನ  ಸಕಾರಾತ್ಮಕವಾಗಿರಬೇಕು.
ಲೇಖನ-ರಘು ಗೌಡ
9916101265
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ