Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೊಸ ಕೈಗಾರಿಕ ನೀತಿ ಜಾರಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಕೈಗಾರಿಕಾ ಕ್ಷೇತ್ರವನ್ನು ದೇಶದಲ್ಲಿಯೇ ಅಭೂತಪೂರ್ವ ಮಾದರಿಯಲ್ಲಿ ಮುನ್ನಡೆಸುವ ಉದ್ದೇಶದಿಂದ ಹೊಸ ಕರ್ನಾಟಕ ಕೈಗಾರಿಕಾ ನೀತಿ, 2025-30 ಅನ್ನು ಜಾರಿಗೆ ತರಲಾಗಿದೆ. ಬಂಡವಾಳ ಹೂಡಿಕೆಯಲ್ಲಿ ರಾಜ್ಯವು 2ನೇ ಸ್ಥಾನದಲ್ಲಿದೆ. 2024-25ನೇ ಸಾಲಿನಲ್ಲಿ ಏಪ್ರಿಲ್ 2024 ರಿಂದ ಸೆಪ್ಟೆಂಬರ್ 2024ರ ಅಂತ್ಯದವರೆಗೆ ರಾಜ್ಯವು 88,853 ಮಿಲಿಯನ್ ಡಾಲರುಗಳಷ್ಟು ಮೌಲ್ಯದ ಸರಕು ಸೇವೆಗಳನ್ನು ರಫ್ತು ಮಾಡುವುದರೊಂದಿಗೆ ಒಟ್ಟಾರೆ ರಫ್ತಿನಲ್ಲಿ 1ನೇ ಸ್ಥಾನದಲ್ಲಿದೆ. 2023-24ಕ್ಕೆ ಹೋಲಿಸಿದರೆ ರಫ್ತಿನಲ್ಲಿ ರಾಜ್ಯವು ಶೇ. 11.17 ರಷ್ಟು ಏರಿಕೆಯ ಪ್ರಗತಿಯನ್ನು ಸಾಧಿಸಿದೆ.

ಹೊಸದಾಗಿ ಬೆಂಗಳೂರು ಹೊರವಲಯದಲ್ಲಿ ರೂ.40,000 ಕೋಟಿ ಬಂಡವಾಳ ಹೂಡಿಕೆಯೊಂದಿಗೆ ಕ್ವಿನ್ ಸಿಟಿ (Knowledge, Wellness and Innovation (KWIN) City) ಅನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಇದರಿಂದಾಗಿ ಸುಮಾರು 80,000 ಉದ್ಯೋಗಾವಕಾಶಗಳು ಸೃಷ್ಟಿಯಾಗಬಹುದೆಂದು ಅಂದಾಜಿಸಲಾಗಿದೆ.

ಎಂ.ಎಸ್.ಎಂ.ಇ ವಲಯವು ವ್ಯಾಪಕ ಪ್ರಮಾಣದಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ವಲಯವಾಗಿದೆ. ಈ ವಲಯವು ಕರ್ನಾಟಕದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ನನ್ನ ಸರ್ಕಾರವು ಈ ವಲಯದ ಅಭಿವೃದ್ಧಿಗಾಗಿ 687 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.

ಕಲಬುರಗಿಯಲ್ಲಿ ಜವಳಿ ಪಾರ್ಕ್ :
ಕಲಬುರಗಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಶೇ.51 ಹಾಗೂ ಶೇ.49 ರ ಜಂಟಿ ಸಹಭಾಗಿತ್ವದಲ್ಲಿ 1000 ಎಕರೆ ಜಾಗದಲ್ಲಿ, ಜವಳಿ ಪಾರ್ಕ್ ಸ್ಥಾಪಿಸಲು ಉದ್ದೇಶಿಸಿದೆ. ಈ ಸಂಬಂಧ ವಿವಿಧ ಮೂಲಭೂತ ಕಾಮಗಾರಿಗಳಿಗೆ ರೂ. 390 ಕೋಟಿ ಅನುದಾನವನ್ನು ನೀಡಲು ಸಚಿವ ಸಂಪುಟವು ಅನುಮೋದನೆ ನೀಡಿದೆ. ಇದರಿಂದಾಗಿ 1 ಲಕ್ಷ ನೇರ ಉದ್ಯೋಗಗಳು ಸೃಜನೆಯಾಗಬಹುದೆಂದು ಅಂದಾಜಿಸಲಾಗಿದೆ. ನೇಕಾರ ಸಮ್ಮಾನ್ ಯೋಜನೆಯಡಿ 2024-25ನೇ ಸಾಲಿಗೆ 1,16,189 ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ಒಟ್ಟು ರೂ.81 ಕೋಟಿಗಳ ಅನುದಾನ ಹಂಚಿಕೆ ಮಾಡಲಾಗಿದ್ದು, ನೇರ ನಗದು ವರ್ಗಾವಣೆ ಮುಖಾಂತರ ಬಿಡುಗಡೆ ಮಾಡುತ್ತಿದೆ.

 



Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ