LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಗಸ್ಟ್ 8ರಿಂದ ಹೊಸ ವಿದ್ಯುತ್ ಪ್ರಸರಣ ಮಾರ್ಗ ಚಾಲನೆ: ಕೆಪಿಟಿಸಿಎಲ್ ಎಚ್ಚರಿಕೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹೊಳಲ್ಕೆರೆ ತಾಲ್ಲೂಕು ಎನ್.ಜಿ. ಹಳ್ಳಿ (ನಾರಾಯಣಗೊಂಡನಹಳ್ಳಿ) ಉಪಕೇಂದ್ರದ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿದ್ಯುತ್ ಪ್ರಸರಣ ಮಾರ್ಗವನ್ನು ಆಗಸ್ಟ್ 8 ರಿಂದ ಚೇತನಗೊಳಿಸಲಾಗುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಕೆಪಿಟಿಸಿಎಲ್ ತಿಳಿಸಿದೆ.

ಕೆಪಿಟಿಸಿಎಲ್ ವತಿಯಿಂದ 1X12.5MVA,  66/11 ಕೆವಿ ವಿದ್ಯುತ್ ಉಪಕೇಂದ್ರ ಮತ್ತು ಹಾಲಿ ಇರುವ 66 ಕೆವಿ ರಾಮಗಿರಿ - ಹೊಸದುರ್ಗ ಜೋಡಿ ಪ್ರಸರಣ ಮಾರ್ಗದಿಂದ 66/11 ಕೆವಿ ಎನ್.ಜಿ. ಹಳ್ಳಿ ವಿದ್ಯುತ್ ಉಪಕೇಂದ್ರದವರೆಗೆ 4.542 ಕಿ.ಮೀ ಉದ್ದದ 66 ಕೆವಿ ಜೋಡಿ ಪ್ರಸರಣ ಮಾರ್ಗದ ಟೋಟಲ್ ಟರ್ನ್‍ಕೀ' ಕಾಮಗಾರಿ ಪೂರ್ಣಗೊಂಡಿದೆ.

ದಿನಾಂಕ 08-08-2026 ರಂದು ಅಥವಾ ತದನಂತರ ಈ 66 ಕೆವಿ ವಿದ್ಯುತ್ ಮಾರ್ಗವನ್ನು ಚೇತನಗೊಳಿಸಲಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ವಿದ್ಯುತ್ ಗೋಪುರಗಳನ್ನು ಮುಟ್ಟುವುದು, ಹತ್ತುವುದು, ಮರದ ರೆಂಬೆ ಅಥವಾ ಲೋಹದ ತಂತಿಗಳನ್ನು ಮಾರ್ಗದ ಮೇಲೆ ಎಸೆಯುವುದು ಮಾಡಬಾರದು. ಅಲ್ಲದೆ, ವಿದ್ಯುತ್ ಗೋಪುರಗಳಿಗೆ ಜಾನುವಾರುಗಳನ್ನು ಕಟ್ಟಬಾರದು ಎಂದು ಎಚ್ಚರಿಸಲಾಗಿದೆ.

ಸುರಕ್ಷತೆಯ ದೃಷ್ಟಿಯಿಂದ ಮಾರ್ಗದ ಮೊಗಸಾಲೆಯಲ್ಲಿರುವ ಮರಗಳನ್ನು ತೆರವುಗೊಳಿಸಲಾಗುವುದು. ಈ ಸೂಚನೆಯನ್ನು ಉಲ್ಲಂಘಿಸಿ ನಡೆಯುವ ಅನಾಹುತ, ಹಾನಿ ಅಥವಾ ತೊಂದರೆಗಳಿಗೆ ಕೆಪಿಟಿಸಿಎಲ್ ಯಾವುದೇ ರೀತಿಯಲ್ಲೂ ಜವಾಬ್ದಾರಿಯಾಗುವುದಿಲ್ಲ.

ಈ ಪ್ರಸರಣ ಮಾರ್ಗವು ಜಕ್ಕನಹಳ್ಳಿ, ಗೌಡಹಳ್ಳಿ, ಹೊಸಹಟ್ಟಿ, ನಾರಾಯಣಗೊಂಡನಹಳ್ಳಿ ಮತ್ತು ಆರ್. ಗೊಲ್ಲರಹಳ್ಳಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳ ಮೂಲಕ ಹಾದುಹೋಗಲಿದೆ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಯೋಜನೆಗಳ ವಿಭಾಗ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಲ್ಲೆಯಲ್ಲಿ ಶೇ.90.17 ಗಣತಿ ನಮೂನೆಗಳ ಡಿಜಿಟಲೀಕರಣ ಪೂರ್ಣ-ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ಭದ್ರಾ ಹರಿವಿಗೆ ಆಗಸ್ಟ್ 17 ಗಡುವುರಾಗಿ,ಸಾವೆ ಹಾಗೂ ತೆಂಗು ರೈತರ ನೆರವಿಗೆ ಸೂಚನೆ-ಸಚಿವ ಟಿ.ರಘುಮೂರ್ತಿಪೊಲೀಸ್ ಭದ್ರತೆಯಲ್ಲಿ ರಾಜಕಾಲುವೆ ಒತ್ತುವರಿ ತೆರವುಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯಮಶೀಲತೆ ಅರಿವು ಕಾರ್ಯಕ್ರಮರಾಷ್ಟ್ರಮಟ್ಟದಲ್ಲಿ ಪ್ರಜ್ವಲಿಸಿದ ಗ್ರಾಮೀಣ ಪ್ರತಿಭೆಗಳು, 11 ಪದಕ ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಬೀಜೋಪಚರಣ ಹಾಗೂ ರಸ ಗೊಬ್ಬರ ಕಲಬೆರಕೆ ಕುರಿತು ಜಾಗೃತಿ ಶಿಬಿರಜೋಗ ಜಲಪಾತಕ್ಕೆ ಕೆಎಸ್‍ಆರ್‍ಟಿಸಿ ವಿಶೇಷ ಪ್ಯಾಕೇಜ್ ಬಸ್ ಸೇವೆ: ಆ.9 ರಿಂದ ಪ್ರಾರಂಭಆಗಸ್ಟ್ 8ರಿಂದ ಹೊಸ ವಿದ್ಯುತ್ ಪ್ರಸರಣ ಮಾರ್ಗ ಚಾಲನೆ: ಕೆಪಿಟಿಸಿಎಲ್ ಎಚ್ಚರಿಕೆಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೆ ಮಂಗಳವಾರ ಆಯೋಜನೆ ಉಚಿತ ಗ್ಯಾಸ್ಟ್ರೋ ಶಿಬಿರ