Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನ್ಯೂಸ್ ಪ್ರಿಂಟ್ ಬೆಲೆ ಹೆಚ್ಚಳ, ಜಿಎಸ್ ಟಿ ತೆರಿಗೆ ಹೊರೆ ಬೇರೆ: ವಿಜಯ ಸಂಕೇಶ್ವರ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮುದ್ರಣಕ್ಕೆ ಕಾಗದವೇ ಬಹಳ ಮುಖ್ಯ. ಅರಣ್ಯ ಸಂಪತ್ತು ಇದ್ದರೆ ಕಾಗದ ಉತ್ಪಾದನೆ ಆಗಲಿದೆ. ಆದರೆ ನ್ಯೂಸ್ ಪ್ರಿಂಟ್ ಬೆಲೆ ದುಬಾರಿಯಾಗಿರುವುದು ಒಂದು ಕಡೆಯಾದರೆ ಜಿಎಸ್ ಟಿ ತೆರಿಗೆ ಮುದ್ರಣ ಮಾಧ್ಯಮಕ್ಕೆ ಹೊರೆಯಾಗಿದೆ ಎಂದು ವಿಆರ್‌ಎಲ್ ಸಮೂಹ ಸಂಸ್ಥೆಗಳ ಛೇರ‌್ಮನ್ ವಿಜಯ ಸಂಕೇಶ್ವರ ಬೇಸರ ವ್ಯಕ್ತ ಪಡಿಸಿದರು.


ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟವು ಆಯೋಜಿಸಿದ್ದ ಪತ್ರಿಕಾ ವಿತರಕರ ನಾಲ್ಕನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಶೇ.70ರಷ್ಟು ನ್ಯೂಸ್ ಪ್ರಿಂಟ್ ಆಮದು ಮಾಡಿಕೊಳ್ಳಬೇಕಿದೆ. ಅದರ ಜೊತೆಗೆ ಜಿಎಸ್‌ಟಿ ತೆರಿಗೆ ಹೊರೆಯೂ ಹೆಚ್ಚಾಗಿದೆ. ಸಬ್ಸಿಡಿಯೂ ಸಿಗುತ್ತಿಲ್ಲ. ಈ ಬಗ್ಗೆ ಸರ್ಕಾರ ಗಮನಿಸಬೇಕು ಎಂದು ಹೇಳಿದರು.

ವಿಜಯ ಕರ್ನಾಟಕ ಪತ್ರಿಕೆ ಪ್ರಾರಂಭಿಸಿದಾಗ ನಾವು ಪ್ರತಿ ಜಿಲ್ಲಾ ಮಟ್ಟದಲ್ಲಿ ಪತ್ರಿಕಾ ವಿತರಕರ ಜೊತೆಗೆ ಸಭೆಗಳನ್ನು ನಡೆಸುವ ಮೂಲಕ ಅವರ ಅಹವಾಲುಗಳನ್ನು ಕೇಳುವ ಪ್ರಕ್ರಿಯೆ ಶುರು ಮಾಡಿದ್ದೆವು. ನಾವು ಈ ಉದ್ಯಮಕ್ಕೆ ಬಂದ ಮೇಲೆ ಪತ್ರಿಕಾ ವಿತರಕರಿಗಿದ್ದ ಸೌಲಭ್ಯಗಳು ಉತ್ತಮಗೊಳ್ಳಲು ಸಾಧ್ಯವಾಗಿದೆ. ಯಾವುದೇ ವೃತ್ತಿಯಲ್ಲಿ ಕೀಳಿರಿಮೆ ಇಟ್ಟುಕೊಳ್ಳದೆ ಕೆಲಸ ಮಾಡಬೇಕು ಎಂದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಮಾತನಾಡಿ, ಮಳೆ, ಚಳಿ, ಬಿಸಿಲೆನ್ನದೆ ಕೆಲಸ ಮಾಡುವ ಪತ್ರಿಕಾ ವಿತರಕರ ಬಗ್ಗೆ ಸರ್ಕಾರದ ಗಮನ ಸೆಳೆದು ಒತ್ತಡ ಹಾಕಿದ್ದರಿಂದಲೇ ಅವರಿಗಾಗಿ ಕಾರ್ಮಿಕ ಇಲಾಖೆಯಲ್ಲಿ ಯೋಜನೆ ಜಾರಿಗೆ ಬಂತು. ರಾಜ್ಯೋತ್ಸವ ಪ್ರಶಸ್ತಿ ಕೂಡ ಬಂತು ಎಂದರು.

ತಮ್ಮ ಪಾಡಿಗೆ ಅಲ್ಲಲ್ಲಿ ಹಂಚಿಹೋಗಿದ್ದ ಪತ್ರಿಕಾ ವಿತರಕರನ್ನು ಒಂದೇ ಸೂರಿನಡಿ ಸೇರಿಸಿ ಸಂಘಟನೆ ಮಾಡುವ ನಿಟ್ಟಿನಲ್ಲಿ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರ ನೇತೃತ್ವದ ತಂಡದ ಶ್ರಮ ಅಪಾರವಾದದ್ದು. ಪರಿಶ್ರಮದಿಂದ ಕೆಲಸ ಮಾಡಿದರೆ ಯಾವುದೇ ವೃತ್ತಿಯೂ ಕೀಳಲ್ಲ. ಅದನ್ನು ಅರಿತು, ಸಂಘಟಿತರಾದರೆ ಮಾತ್ರ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರಾಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ಮಾತನಾಡಿ ವಿತರಕರು ಇಷ್ಟು ದಿನ ಮಲಗಿದ್ದರು. ಆಗ ಎಚ್ಚೆತ್ತುಕೊಂಡು ಇಡೀ ರಾಜ್ಯದಲ್ಲಿ ಸಂಘಟನೆ ಮಾಡುತ್ತಿದ್ದಾರೆ. ಸಂಘಟನೆ ಇದ್ದರೆ ತಮ್ಮ ಬೇಡಿಕೆಗಳನ್ನು ಸುಲಭವಾಗಿ ಈಡೇರಿಸುಕೊಳ್ಳಬಹುದು ಎಂದು ತಿಳಿಸಿದರು.

ಪತ್ರಿಕಾ ವಿತರಕರು ಪತ್ರಕರ್ತರು ಬೇರೆಯಲ್ಲ, ಎಲ್ಲರೂ ಒಂದೇ, ಪತ್ರಕರ್ತ-ವಿತರಕ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ಯಾರೊಬ್ಬರು ಮೇಲೂ ಕೀಳಲ್ಲ ಸಮಾಜದ ಭಾಗವಾಗಿ ಎಲ್ಲರೂ ಕೆಲಸ ಮಾಡುತ್ತಿದ್ದು ಒಂದೇ ಎನ್ನುವ ಭಾವನೆ ಇದೆ ಎಂದು ಹೇಳಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ