LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಂಥಾಲಯಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದ ನಿಜಯ ಪ್ರಕಾಶ್

Advertisement
Advertisement

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
​ಹಿರಿಯೂರಿನ ವಾಣಿ ಸಕ್ಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯಕ್ಕೆ ಜವಗೊಂಡನಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಸಹಾಯಕ ಪ್ರಾಧ್ಯಾಪಕರಾದ ವಿಜಯ ಪ್ರಕಾಶ್ ಅವರು ಉಚಿತವಾಗಿ ಅಮೂಲ್ಯ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

​ಪುಸ್ತಕಗಳನ್ನು ಹಸ್ತಾಂತರಿಸಿದ ಬಳಿಕ ಮಾತನಾಡಿದ ಸಹಾಯಕ ಪ್ರಾಧ್ಯಾಪಕ ವಿಜಯ ಪ್ರಕಾಶ್, "ಕಾಲೇಜು ಗ್ರಂಥಾಲಯಕ್ಕೆ 'ಭಾರತದ ಸಂವಿಧಾನ ರಚನಾ ಸಭೆಯ ಚರ್ಚೆಗಳು ಮತ್ತು ನಡವಳಿಕೆಗಳು' ಒಳಗೊಂಡ ಒಟ್ಟು 10 ಸಂಪುಟಗಳು ಹಾಗೂ ಥರ್ ಸ್ಟೈನ್ ಅವರ 'ದಕ್ಷಿಣ ಭಾರತದ ಬುಡಕಟ್ಟುಗಳು' ಕುರಿತ 7 ಸಂಪುಟಗಳನ್ನು ನೀಡಲಾಗಿದೆ. ವಿದ್ಯಾರ್ಥಿಗಳು ಈ ಮಹತ್ವದ ಗ್ರಂಥಗಳನ್ನು ಆಳವಾಗಿ ಅಧ್ಯಯನ ಮಾಡಿದರೆ, ಮುಂದೆ ಸಾಮಾಜಿಕ ಸಂಶೋಧನೆಗಳನ್ನು ನಡೆಸಲು ಇದು ಅತ್ಯಂತ ಸಹಕಾರಿಯಾಗಲಿದೆ" ಎಂದು ತಿಳಿಸಿದರು.

​"ಮೊಬೈಲ್ ದೂರವಿಟ್ಟು ಪುಸ್ತಕ ಓದಿ" : ಪ್ರಾಂಶುಪಾಲರ ಕರೆ
​ಪುಸ್ತಕಗಳನ್ನು ಸ್ವೀಕರಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಧರಣೇಂದ್ರಯ್ಯ
, "ಪುಸ್ತಕಗಳು ನಮ್ಮ ನಿಜವಾದ ಸ್ನೇಹಿತರು ಹಾಗೂ ನಮ್ಮ ಶಾಶ್ವತ ಆಸ್ತಿಯಾಗಿದ್ದಾರೆ. ವಿದ್ಯಾರ್ಥಿಗಳು ತಮ್ಮ ಬಿಡುವಿನ ವೇಳೆಯಲ್ಲಿ ಇಂತಹ ಅತ್ಯುತ್ತಮ ಪುಸ್ತಕಗಳನ್ನು ಓದುವ ಮೂಲಕ ಜ್ಞಾನಾರ್ಜನೆಯನ್ನು ಹೆಚ್ಚಿಸಿಕೊಳ್ಳಬೇಕು. ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕಾದರೆ ಮೊಬೈಲ್ ಬಳಕೆಯನ್ನು ದೂರವಿಟ್ಟು, ಪುಸ್ತಕಗಳತ್ತ ಗಮನ ಹರಿಸಬೇಕು" ಎಂದು ಕರೆ ನೀಡಿದರು. ಇದೇ ವೇಳೆ ಕಾಲೇಜು ಹಾಗೂ ವಿದ್ಯಾರ್ಥಿಗಳ ಪರವಾಗಿ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದ ವಿಜಯ ಪ್ರಕಾಶ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

​ಈ ಸಂದರ್ಭದಲ್ಲಿ ಕಾಲೇಜಿನ ಅಧೀಕ್ಷಕ ಬಿ.ಎನ್. ನರಸಿಂಹಮೂರ್ತಿ, ಉಪನ್ಯಾಸಕರಾದ ನಾಗರಾಜ ವಿ., ಪುಟ್ಟರಾಜು ಹಾಗೂ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ 3 ದಿನಗಳ ವಸತಿಯುಕ್ತ ಉಚಿತ ಸಾವಯವ ಕೃಷಿ ತರಬೇತಿ ಹಾಗೂ ಪ್ರವಾಸಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಕುಮಾರಸ್ವಾಮಿ, ಆರ್.ಅಶೋಕ್ ಚಾಲನೆ: ಪಾದಯಾತ್ರೆಯಲ್ಲಿ ಹಿರಿಯೂರು ಮುಖಂಡರು ಭಾಗಿಸರ್ಕಾರಿ ಶಾಲೆಗೆ ಭೂಮಿ ದಾನ ಅತ್ಯಂತ ಶ್ರೇಷ್ಠ ಕಾರ್ಯ-ಎನ್. ಶ್ರೀನಿವಾಸ್ ಚಿನ್ಮೂಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಡಾ.ಎಲ್.ಪಾಲಾಕ್ಷಯ್ಯಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ:ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಸಮರ: ಬೈರಮಂಗಲದಿಂದ ಬೆಂಗಳೂರಿಗೆ 'ಪಾದಯಾತ್ರೆ' ಆರಂಭ"ನನ್ನನ್ನು ಕೊಂಡುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ": ಹೆಚ್.ಡಿ. ಕೆ ವಾಗ್ದಾಳಿ ಖಾತೆ ಹಂಚಿಕೆ, ಸಂಪುಟ ಪುನಾರಚನೆ ಕಸರತ್ತು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಶಿವಕುಮಾರ್ಪೊಲೀಸರ ಮೆಗಾ ಆಪರೇಷನ್: 105 ಅಕ್ರಮ ಬಾಂಗ್ಲಾ ವಲಸಿಗರ ಬಂಧನ, ಗಡಿಪಾರಿಗೆ ಕ್ರಮಸಚಿವ ನಾಗೇಂದ್ರ ರಾಜೀನಾಮೆಗೆ ಶ್ರೀರಾಮುಲು ಆಗ್ರಹ; ರೆಡ್ಡಿ ಬ್ರದರ್ಸ್‌ಗೆ ಈಶ್ವರ್ ಖಂಡ್ರೆ ತಿರುಗೇಟು