Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹರಿಯಬ್ಬೆ ಗ್ರಾಮಕ್ಕೆ ಆಗಸ್ಟ್-3 ರಂದು ನಿಖಿಲ್ ಆಗಮನ, ಬೃಹತ್ ಸಭೆ ಏರ್ಪಾಡು

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಜನರೊಂದಿಗೆ ಜೆಡಿಎಸ್ ಹಾಗೂ ಸದಸ್ಯತ್ವ ಅಭಿಯಾನಕ್ಕೆ ಆಗಸ್ಟ್ 3 ರಂದು ಚಾಲನೆ ನೀಡಲು ರಾಜ್ಯ ಯುವ ಜೆಡಿಎಸ್ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಾಲೂಕಿನ ಹರಿಯಬ್ಬೆ ಗ್ರಾಮಕ್ಕೆ ಆಗಮಿಸುತ್ತಿದ್ದು
, ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಜಯಣ್ಣ ಮನವಿ ಮಾಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಅವ್ಯವಹಾರ, ಭ್ರಷ್ಟಾಚಾರ ವಿರುದ್ದ ಹಾಗೂ ಜನತೆಗೆ ಜಾಗೃತಿ ಮೂಡಿಸುವ ಉದ್ದೇಶ ಮತ್ತು ಸದಸ್ಯತ್ವ ಅಭಿಯಾನ ಕಾರ್ಯಕ್ರಮ ನಡೆಸಲು ಪಕ್ಷದ ಹಲವು ಹಿರಿಯ ಮುಖಂಡರು ಹಾಗೂ ಯುವ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಹಿರಿಯೂರು ವಿಧಾನಸಭಾ ಪರಾಜಿತ ಅಭ್ಯರ್ಥಿ ಎಂ.ರವೀಂದ್ರಪ್ಪ ಮಾತನಾಡಿ ಜೆಡಿಎಸ್ ಪಕ್ಷದ ಭರವಸೆ ನಾಯಕ ನಿಖಿಲ್ ಅವರು ರಾಜ್ಯದ ಎಲ್ಲಾ ಭಾಗಗಳಿಗೂ ಸಂಚರಿಸುತ್ತಾ ಸದೃಢ ಪಕ್ಷ ಕಟ್ಟಲು ಶ್ರಮಿಸುತ್ತಾ ಜನತೆಯ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ. ಜನವಿರೋಧಿ ಕಾಂಗ್ರೆಸ್ ಸರ್ಕಾರದ ಬಿಟ್ಟಿ ಭಾಗ್ಯಗಳ ಮೂಲಕ ಜನತೆಗೆ ವಂಚಿಸುತ್ತಿರುವುದನ್ನು ಮನೆ ಮನೆಗೆ ಮುಟ್ಟಿಸುವ ಮೂಲಕ ಕಾರ್ಯಕರ್ತರಿಗೆ ಶಕ್ತಿ ತುಂಬುತ್ತಿದ್ದಾರೆ ಎಂದು ತಿಳಿಸಿದರು.

ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಡಿ.ಯಶೋಧರ್ ಮಾತನಾಡಿ ರೈತರ ಜೀವನಾಡಿ ಜೆಡಿಎಸ್ ಪಕ್ಷ ಹಾಗೂ ಗ್ರಾಮೀಣ ಭಾಗದಲ್ಲಿ ಸಾಕಷ್ಟು ಬಲಿಷ್ಠವಾಗಿರುವ ಜೆಡಿಎಸ್ ಪಕ್ಷವನ್ನು ಗ್ರಾಮೀಣ ಭಾಗದಿಂದಲೇ ಸಂಘಟಿಸಬೇಕೆಂದು ತಾಲೂಕಿನ ಹರಿಯಬ್ಬೆ ಗ್ರಾಮದಿಂದ ಪಕ್ಷದ ಸದಸ್ಯತ್ವಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ.


ಅಲ್ಲದೇ ಸತತ ಸೋಲಿನಿಂದ ಕಂಗೆಟ್ಟಿರುವ ಕಾರ್ಯಕರ್ತರಿಗೆ ಆತ್ಮಸ್ಥೈರ್ಯ ತುಂಬುವ ಹಾಗೂ ತಾರ್ಕಿಕ ತಳಹದಿ ಮೇಲೆ ಪಕ್ಷ ಸಂಘಟಿಸಲು ಕಾರ್ಯಕ್ರಮ ಆಯೋಜಿಸಲಾಗಿದ್ದು ಇದು ಮಹತ್ವದ್ದಾಗಿದೆ ಎಂದರು.

ತಾಲೂಕು ಅಧ್ಯಕ್ಷ ಹನುಮಂತರಾಯಪ್ಪ ಮಾತನಾಡಿ ಸುಮಾರು ೫೮ ದಿನಗಳ ಕಾಲ ನೂರಕ್ಕೂ ಅಧಿಕ ಕ್ಷೇತ್ರದಲ್ಲಿ ಸಂಚರಿಸುತ್ತಾ ಪಕ್ಷ ಸಂಘಟನೆಗೆ ಹೊರಟಿರುವ ಯುವ ನಾಯಕ ನಿಖಿಲ್ ಅವರು ಈಗಾಗಲೇ ೫೦ ಕ್ಷೇತ್ರಗಳಿಗೆ ಭೇಟಿ ನೀಡಿದ್ದಾರೆ.

ಆ.೩ ರಂದು ಬೆಳಿಗ್ಗೆ ೧೧ ಗಂಟೆಗೆ ತಾಲೂಕಿನ ಹರಿಯಬ್ಬೆ ಗ್ರಾಮದ ಶಾಲಾವರಣದಲ್ಲಿ ಕಾರ್ಯಕರ್ತರ ಬೃಹತ್ ಸಭೆ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಮುಖಂಡರು ಹಾಗೂ ನಾಯಕರು ಭಾಗವಹಿಸುವಂತೆ ತಿಳಿಸಿದರು.



ಈ ಸಂದರ್ಭದಲ್ಲಿ ಮುಖಂಡರಾದ ಮಂಜಣ್ಣ, ಚಿದಾನಂದಪ್ಪ, ಶಿವಕುಮಾರ್, ತಿಪ್ಪೇಸ್ವಾಮಿ, ತಿಮ್ಮಣ್ಣ, ರಮೇಶ್ ಇತರರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ