Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹತ್ತನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ನಿತೀಶ್ ಕುಮಾರ್

Advertisement
ಚಂದ್ರವಳ್ಳಿ ನ್ಯೂಸ್, ಪಾಟ್ನಾ:
ಬಿಹಾರದ ಹತ್ತನೇ ಬಾರಿಗೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ.


ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಜಯ ಸಾಧಿಸಿತ್ತು. ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅಧಿಕಾರ ವಹಿಸಿಕೊಂಡಿದ್ದು ಅವರ ಸಂಪುಟದಲ್ಲಿ ಬಿಜೆಪಿ ಕೋಟಾದಿಂದ ಇಬ್ಬರು ಉಪಮುಖ್ಯಮಂತ್ರಿಗಳು ಇರುತ್ತಾರೆ.
ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಮತ್ತೊಮ್ಮೆ ನಿತೀಶ್ ಕುಮಾರ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.


ಯಾವ ಪಕ್ಷದ ಕೋಟಾದಡಿ ಯಾವ ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂಬ ನಿರ್ಧಾರವನ್ನೂ ನಿತೀಶ್ ಅವರ ಸಂಪುಟದಲ್ಲಿ ಅಂತಿಮಗೊಳಿಸಲಾಗಿದೆ. ಈಗಾಗಲೇ ಸಂಭಾವ್ಯ ಸಚಿವರ ಪಟ್ಟಿ ಬಿಡುಗಡೆ ಮಾಡಲಾಗಿದೆ.
ನಿತೀಶ್ ಕುಮಾರ್ ಅವರ ಸಂಪುಟದ ಭಾಗವಾಗಿ ಪ್ರಮಾಣ ವಚನ ಸ್ವೀಕರಿಸುವ ಸಚಿವರ ಪಟ್ಟಿಯೂ ಬಿಡುಗಡೆಯಾಗಿದೆ. ಹೊಸ ಸರ್ಕಾರದಲ್ಲಿ ಬಿಜೆಪಿ
14 ಸಚಿವರನ್ನು ಹೊಂದಿರುತ್ತದೆ.


ಮುಖ್ಯಮಂತ್ರಿ ನಿತೀಶ್ ಕುಮಾರ್ ಜೊತೆಗೆ, ಜೆಡಿಯು ವತಿಯಿಂದ ಏಳು ಸಚಿವರು ಇರುತ್ತಾರೆ. ಜಿತನ್ ರಾಮ್ ಮಾಂಝಿ ನೇತೃತ್ವದ ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಮತ್ತು ಉಪೇಂದ್ರ ಕುಶ್ವಾಹ ನೇತೃತ್ವದ ರಾಷ್ಟ್ರೀಯ ಲೋಕ ಮೋರ್ಚಾ (ಆರ್‌ಎಲ್‌ಎಂ) ತಲಾ ಒಬ್ಬ ಸಚಿವರು ನಿತೀಶ್ ಸಂಪುಟದಲ್ಲಿ ಇರುತ್ತಾರೆ.



ಜಿತನ್ ರಾಮ್ ಮಾಂಝಿ ಅವರ ಪುತ್ರ ಸಂತೋಷ್ ಕುಮಾರ್ ಸುಮನ್ ಅವರ ಪಕ್ಷದಿಂದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಮತ್ತು ಉಪೇಂದ್ರ ಕುಶ್ವಾಹ ಅವರ ಪುತ್ರ ದೀಪಕ್ ಪ್ರಕಾಶ್ ಅವರ ಪಕ್ಷದಿಂದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಕೂಡ ಇಬ್ಬರು ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.


ಪಕ್ಷದ ಬಲಾಬಲ-
ಬಿಹಾರದ
243 ಸದಸ್ಯ ಬಲದ ವಿಧಾನಸಭೆಯಲ್ಲಿ 202 ಸ್ಥಾನಗಳನ್ನು ಗೆದ್ದು ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬಂದಿದೆ.
ಬಿಜೆಪಿ 89, ಜೆಡಿ(ಯು) 85, ಎಲ್‌ಜೆಪಿ(ಆರ್‌ವಿ)-19, ಎಚ್‌ಎಎಂ-5 ಮತ್ತು ಆರ್‌ಎಲ್‌ಎಂ-4 ಸ್ಥಾನಗಳನ್ನು ಗಳಿಸಿತು. ಮೈತ್ರಿ ಪಕ್ಷಗಳ 202 ಶಾಸಕರು ನಿತೀಶ್ ಕುಮಾರ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.


ನಿತೀಶ್ ಇತಿಹಾಸ-
2000ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಮೊದಲು ಬಿಹಾರದ ಮುಖ್ಯಮಂತ್ರಿಯಾದರು. ಆದರೆ ಆ ಸರ್ಕಾರ ಪತನಗೊಂಡಿತು. 2005ರಲ್ಲಿ ಬಹುಮತದೊಂದಿಗೆ ನಿತೀಶ್ ಎರಡನೇ ಬಾರಿಗೆ ಎನ್​ಡಿಎ ಸರ್ಕಾರದ ಮುಖ್ಯಸ್ಥರಾದರು. ಅವರು ಸತತ ಎಂಟು ವರ್ಷಗಳಿಗೂ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.

ಆದರೆ 2014ರ ಲೋಕಸಭಾ ಚುನಾವಣೆಗೆ ಮೊದಲು, ಅವರು ಭಾರತೀಯ ಜನತಾ ಪಕ್ಷ ಯೊಂದಿಗಿನ ಸಂಬಂಧ ಮುರಿದುಕೊಂಡರು. ಲೋಕಸಭಾ ಚುನಾವಣೆಯಲ್ಲಿ ಜೆಡಿಯು ಸೋಲಿನ ನಂತರ, ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಜಿತನ್ ರಾಮ್ ಮಾಂಝಿ ಅವರನ್ನು ಅಲ್ಪಾವಧಿಗೆ ಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ